ಬೆಂಗಳೂರಿನಲ್ಲಿ ಬೈಸಿಕಲ್ ಪ್ರತ್ಯೇಕ ಮಾರ್ಗಕ್ಕೆ ಸಂಪುಟ ಅಸ್ತು
ಬೆಂಗಳೂರು, ಜನವರಿ 3 : ನಗರದಲ್ಲಿ ಬೈಸಿಕಲ್ ಬಳಕೆಗೆ ಉತ್ತೇಜನ ನೀಡಲು ಮುಂದಾಗಿರುವ ರಾಜ್ಯ ಸರ್ಕಾರವು ಎಂಜಿ ರಸ್ತೆ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪ್ರತ್ಯೇಕ ಬೈಸಿಕಲ್ ಟ್ರ್ಯಾಕ್ ನಿರ್ಮಿಸಲು ನಿರ್ಧರಿಸಿದೆ.
ಈ ಕುರಿತು ಪ್ರಸ್ತಾವನೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಅದರಂತೆ ಮಹಾತ್ಮ ಗಾಂಧಿ ರಸ್ತೆ, ವಿಧಾನಸೌಧ, ಕೋರಮಂಗಲ, ಇಂದಿರಾನಗರ, ಎಚ್ ಎಸ್ ಆರ್ ಲೇಔಟ್, ಎಚ್ ಬಿ ಆರ್ ಬಡಾವಣೆಗಳಲ್ಲಿ ವಿಶೇಷ ಸೈಕಲ್ ಪಥ ನಿರ್ಮಿಸಲಾಗುತ್ತದೆ.

ಜತೆಗೆ ಪಾಕಿಂಗ್ ಸೌಲಭ್ಯವನ್ನೂ ಕಲ್ಪಿಸಲಾಗುತ್ತದೆ. ಬೆಂಗಳೂರಿನಲ್ಲಿ ಶುಲ್ಕ ಪಾವತಿಸಿ ಸೈಕಲ್ ಬಳಕೆ ಮಾಡುವುದನ್ನು ಪ್ರೋತ್ಸಾಹಿಸಲಾಗುತ್ತದೆ. ಸೈಕಲ್ ಪಾರ್ಕಿಂಗ್ ಹಬ್ ಮತ್ತು ಸೈಕಲ್ ಟ್ರ್ಯಾಕ್ ನಿರ್ಮಾಣಕ್ಕೆ 80.18 ಕೋಟಿ ರೂ. ಒದಗಿಸಲಾಗುತ್ತದೆ ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ.
ಅರ್ಕಾವತಿ ಪುನರುಜ್ಜೀವನಕ್ಕೆ ಒಪ್ಪಿಗೆ: ಅರ್ಕಾವತಿ ನದಿ ಪುನರುಜ್ಜೀವನಗೊಳಿಸಬೇಕೆಂಬ ಕೂಗಿಗೆ ಸರ್ಕಾರ ಕಿವಿಗೊಟ್ಟಿದೆ. ಹೆಸರುಘಟ್ಟ ಕೆರೆಯಿಂದ ತಿಪ್ಪಗೊಂಡನಹಳ್ಳಿ ಕೆರೆವರೆಗೆ ನದಿ ಪಾತ್ರವನ್ನು ಸುಸ್ಥಿತಿಗೆ ತರಲು ಮೆ.ಅಖಿಲ್ ಇನ್ ಫ್ರಾ ಕಂಪನಿಗೆ ವಹಿಸುವ ಸಂಬಂಧ ಹಲವು ಸುತ್ತಿನಲ್ಲಿ ಸರ್ಕಾರ ಮಾತುಕತೆ ನಡೆಸಿತ್ತು. ಟೆಂಡರ್ ಮೊತ್ತದಲ್ಲಿ ಚೌಕಾಸಿ ನಡೆಸಿ 11.49 ಕೋಟಿ ರೂ.ಗೆ ಒಪ್ಪಿಗೆ ನೀಡಿದೆ.
ಇನ್ನು ಬೆಂಗಳೂರು ಕಾವೇರಿ ನೀರು ಪಂಪ್ ಮಾಡಿಕೊಡುವ ಮೂರು ಘಟಕ ಆಧುನೀಕರಣಕ್ಕೆ 170 ಕೋಟಿ ಬಳಸಲು ಸಂಪುಟ ನಿರ್ಧರಿಸಿದೆ. ಹಾಗೆಯೇ ಕೆಂಪೇಗೌಡ ಬಡಾವಣೆ ಗೆ ರಸ್ತೆ ನಿರ್ಮಿಸಲು 321 ಎಕರೆ ಭೂಮಿ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿದ್ದು, ಭೂಮಿ ನೀಡುವ ರೈತರಿಗೆ ಪರಿಹಾರವಾಗಿ ಅಭಿವೃದ್ಧಿ ಪಡಿಸಿದ ಭೂಮಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications