RR ನಗರ ಚುನಾವಣಾ ಪ್ರಚಾರದಲ್ಲಿ ಸಿಎಂ ಬಿಎಸ್ವೈ ಹೇಳಿದ್ದೇನು, ಈಗ ಮಾಡುತ್ತಿರುವುದೇನು?
ಬೆಂಗಳೂರು, ಜ 13: ಮುಖ್ಯಮಂತ್ರಿ ಯಡಿಯೂರಪ್ಪನವರ ಭಗೀರಥ ಪ್ರಯತ್ನದ ನಂತರ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂದಿದೆ. ಸಂಕ್ರಾಂತಿಯ ಮುನ್ನಾದಿನವಾದ ಬುಧವಾರದ ( ಜ 13)
ಶುಭ ಮಹೂರ್ತದಲ್ಲಿ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಯಾರು ಸಚಿವರಾಗುತ್ತಾರೆ, ಯಾರನ್ನು ಕೈಬಿಡಲಾಗುತ್ತದೆ, ಪ್ರಾಂತ್ಯಾವರು ಪ್ರಾತಿನಿಧ್ಯತೆ ಯಾವರೀತಿಯಲ್ಲಿರಲಿದೆ ಎನ್ನುವ ಎಲ್ಲಾ ಕುತೂಹಲಕ್ಕೆ ಮುಖ್ಯಮಂತ್ರಿಗಳು ತೆರೆ ಎಳೆದಿದ್ದಾರೆ.
ಇಂದು ಯಾರೆಲ್ಲಾ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನುವ ಹೆಸರನ್ನು ಮುಖ್ಯಮಂತ್ರಿಗಳು ಈಗಾಗಲೇ ಪ್ರಕಟಿಸಿಯಾಗಿದೆ. ಹಾಲೀ ಅಬಕಾರಿ ಸಚಿವ ಎಚ್.ನಾಗೇಶ್ ಅವರಿಗೆ ರಾಜೀನಾಮೆ ನೀಡುವಂತೆ ಸಿಎಂ ಸೂಚಿಸಿದ್ದಾರೆ.
ನಿರೀಕ್ಷೆಯಂತೆ ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರಿ, ಬಿಎಸ್ವೈ ಸರಕಾರ ಅಧಿಕಾರಕ್ಕೆ ಬರಲು ಕಾರಣರಾದವರ ಪೈಕಿ ಎಂ.ಟಿ.ಬಿ ನಾಗರಾಜ್ ಮತ್ತು ಆರ್. ಶಂಕರ್ ಅವರಿಗೆ ಸಚಿವಸ್ಥಾನ ಒಲಿದಿದೆ. ಜೊತೆಗೆ, ಎಚ್.ವಿಶ್ವನಾಥ್ ಹೆಸರು ಪರಿಗಣನೆಗೇ ಬಂದಿಲ್ಲ. ಆದರೆ, ಆಶ್ಚರ್ಯ ಎನ್ನುವಂತೆ ಮುನಿರತ್ನ ಅವರ ಹೆಸರು ಪಟ್ಟಿಯಲ್ಲಿ ಇಲ್ಲದೇ ಇರುವುದು. ಬಿಎಸ್ವೈ, ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಹೇಳಿದ್ದೇನು, ಈಗ ಮಾಡುತ್ತಿರುವುದೇನು?

ಏಳು ಸಚಿವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ, ಸಿಎಂ
ಎಸ್.ಅಂಗಾರ, ಮುರುಗೇಶ್ ನಿರಾಣಿ, ಎಂ.ಟಿ.ಬಿ ನಾಗರಾಜ್, ಆರ್.ಶಂಕರ್, ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ ಮತ್ತು ಸಿ.ಪಿ.ಯೋಗೀಶ್ವರ್ ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಭಾರೀ ಅಂತರದಿಂದ ಗೆಲುವು ಸಾಧಿಸಿದ್ದ ಮುನಿರತ್ನ ಹೆಸರು ಇಲ್ಲ
ಈ ಪಟ್ಟಿಯಲ್ಲಿ ಆರ್.ಆರ್.ನಗರ ಅಸೆಂಬ್ಲಿ ಚುನಾವಣೆಯಲ್ಲಿ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದ ಮುನಿರತ್ನ ಅವರ ಹೆಸರು ಇಲ್ಲ. ತಮ್ಮ ಹೆಸರು ಪಟ್ಟಿಯಲ್ಲಿ ಇಲ್ಲ ಎನ್ನುವುದನ್ನು ಅರಿತ ಮುನಿರತ್ನ ಅವರು ಒಂದು ದಿನದ ಹಿಂದೆಯೇ ಮುಖ್ಯಮಂತ್ರಿಗಳನ್ನು ಆರ್.ಅಶೋಕ್ ಜೊತೆ ಹೋಗಿ ಭೇಟಿ ಮಾಡಿದ್ದರು. ನಕಲಿ ವೋಟರ್ ಐಡಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ಯಕ್ಕೆ ಸಂಪುಟ ಸೇರ್ಪಡೆ ಸಾಧ್ಯವಿಲ್ಲ ಎನ್ನುವ ಮಾತನ್ನು ಸಿಎಂ ಹೇಳಿದ್ದರು ಎಂದು ಹೇಳಲಾಗುತ್ತಿದೆ.

ಆರ್.ಆರ್.ನಗರ ಉಪಚುನಾವಣೆಯ ಪ್ರಚಾರ
ಆದರೆ, ಆರ್.ಆರ್.ನಗರ ಉಪಚುನಾವಣೆಯ ಪ್ರಚಾರದ ವೇಳೆ ಯಡಿಯೂರಪ್ಪನವರು ಮುನಿರತ್ನ ಸಚಿವರಾಗಲಿದ್ದಾರೆ ಎನ್ನುವ ಭರವಸೆಯನ್ನು ಮತದಾರರಿಗೆ ನೀಡಿದ್ದರು. ಪ್ರಚಾರ ಸಭೆಯಲ್ಲಿ ಮಾತನಾಡುತ್ತಾ, "ಮುನಿರತ್ನ ಬಗ್ಗೆ ಹೆಚ್ಚಿನ ವಿವರಣೆ ನಿಮಗೆ ನೀಡುವ ಅವಶ್ಯಕತೆಯಿಲ್ಲ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ, ಅವರು ಶಾಸಕರಾದ ಮೇಲೆ, ಅವರೇ ಸಚಿವರಾಗುವುದಂತೂ ನಿಶ್ಚಿತ"ಎಂದು ಯಡಿಯೂರಪ್ಪ ಹೇಳಿದ್ದರು.
Recommended Video

ಶಾಸಕರಾಗಿ ನೀವು ಆಯ್ಕೆ ಮಾಡುತ್ತಿಲ್ಲ, ಮಂತ್ರಿಯಾಗಿ ಆಯ್ಕೆ ಮಾಡುತ್ತೀರಿ
"ಈ ಬಾರಿ ಮುನಿರತ್ನ ಅವರನ್ನು ಶಾಸಕರಾಗಿ ನೀವು ಆಯ್ಕೆ ಮಾಡುತ್ತಿಲ್ಲ, ಮಂತ್ರಿಯಾಗಿ ಆಯ್ಕೆ ಮಾಡುತ್ತೀರಿ. ಸಚಿವರಾದ ಮೇಲೆ ಕ್ಷೇತ್ರದಲ್ಲಿ ಇನ್ನೂ ಅಭಿವೃದ್ದಿಯಾಗಲಿದೆ"ಎಂದು ಯಡಿಯೂರಪ್ಪ, ಆರ್.ಆರ್.ನಗರದ ರೋಡ್ ಶೋ ವೇಳೆ ಮತದಾರರಿಗೆ ಭರವಸೆಯನ್ನು ನೀಡಿದ್ದರು. ಹಾಗಾಗಿ, ಸದ್ಯದ ಮಟ್ಟಿಗೆ ಬಿಎಸ್ವೈ ತಮ್ಮ ಮಾತನ್ನು ಉಳಿಸಿಕೊಳ್ಳಲಿಲ್ಲ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications