ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವೋಸ್‌ ಗೆ ಹೋಗುವ ಮುನ್ನವೇ ಸಂಪುಟ ವಿಸ್ತರಣೆ: ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಜನವರಿ 13: ವಿದೇಶ ಪ್ರವಾಸಕ್ಕೆ ತೆರಳುವ ಮುನ್ನವೇ ಸಂಪುಟ ವಿಸ್ತರಣೆ ಮಾಡುವುದಾಗಿ ಯಡಿಯೂರಪ್ಪ ಹೇಳಿದ್ದಾರೆ.

ಸಿಂಗಪೂರ್‌ನ ದಾವೋಸ್‌ ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗಸಭೆಗೆ ತೆರಳುವ ಮುನ್ನವೇ ಸಂಪುಟ ವಿಸ್ತರಣೆ ಮಾಡುವುದಾಗಿ ಯಡಿಯೂರಪ್ಪ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬಿಎಸ್‌ವೈಗೆ ಉಭಯ ಸಂಕಟ: ಗಡುವು ನೀಡಿದ ಶಾಸಕರುಬಿಎಸ್‌ವೈಗೆ ಉಭಯ ಸಂಕಟ: ಗಡುವು ನೀಡಿದ ಶಾಸಕರು

ದಾವೋಸ್‌ ನಲ್ಲಿ ಜನವರಿ 21 ರಿಂದ 24 ರ ವರೆಗೆ ವಿಶ್ವ ಆರ್ಥಿಕ ಶೃಂಗಸಭೆ ನಡೆಯಲಿದೆ. ಈ ಶೃಂಗಸಭೆಗೆ ಎಲ್ಲ ಬಿಜೆಪಿ ಮುಖ್ಯಮಂತ್ರಿಗಳು ಕಡ್ಡಾಯವಾಗಿ ಹಾಜರಿರಬೇಕು ಎಂಬುದು ಮೋದಿ ಸೂಚನೆ ಆಗಿರುವ ಕಾರಣ ಯಡಿಯೂರಪ್ಪ ಹೋಗುತ್ತಿದ್ದಾರೆ. ಯಡಿಯೂರಪ್ಪ ಈ ಶೃಂಗಸಭೆಗೆ ಒಲ್ಲದ ಮನಸ್ಸಿನಿಂದ ಹೋಗುತ್ತದ್ದಾರೆ ಎನ್ನಲಾಗುತ್ತಿದೆ.

Cabinet Expansion Will Happen Before My Foreign Trip: Yediyurappa

ಯಡಿಯೂರಪ್ಪ ಮೇಲೆ ಒತ್ತಡ ಹೆಚ್ಚಾಗಿದ್ದು, ಸಂಪುಟ ವಿಸ್ತರಣೆ ತಡವಾಗುತ್ತಿರುವ ಬಗ್ಗೆ 'ಮಾಜಿ ಅನರ್ಹ' ಶಾಸಕರು ಮುನಿಸಿಕೊಂಡಿದ್ದಾರೆ. ಕೂಡಲೇ ಸಂಪುಟ ವಿಸ್ತರಣೆ ಮಾಡಿ ತಮಗೆ ಸಚಿವ ಸ್ಥಾನ ನೀಡಬೇಕು ಎಂಬುದು ಅವರ ಒತ್ತಾಯವಾಗಿದೆ.

ಮಾಜಿ ಅನರ್ಹರಿಗೆ ಸಚಿವ ಸ್ಥಾನ: ಉಲ್ಟಾ ಹೊಡೆದ ಉಪ ಮುಖ್ಯಮಂತ್ರಿಮಾಜಿ ಅನರ್ಹರಿಗೆ ಸಚಿವ ಸ್ಥಾನ: ಉಲ್ಟಾ ಹೊಡೆದ ಉಪ ಮುಖ್ಯಮಂತ್ರಿ

ಮತ್ತೊಂದೆಡೆ ಮೂಲ ಬಿಜೆಪಿಗರೂ ಸಹ ತಮಗೆ ಸಚಿವ ಸ್ಥಾನ ಬೇಕೆಂದು ಪಟ್ಟು ಹಿಡಿದಿದ್ದು, ಹೈಕಮಾಂಡ್‌ ಮೊರೆ ಹೋಗಿದ್ದರು. ಇಬ್ಬರ ನಡುವೆ ಸಿಲುಕಿ ಯಡಿಯೂರಪ್ಪ ಹೈರಾಣಾಗಿದ್ದಾರೆ.

ಮುಂದಿನ ವಾರ ಸಂಪುಟ ವಿಸ್ತರಣೆ: ಸ್ಥಾನ ಕಳೆದುಕೊಳ್ಲಲಿರುವ 6 ಸಚಿವರ ಪಟ್ಟಿ?ಮುಂದಿನ ವಾರ ಸಂಪುಟ ವಿಸ್ತರಣೆ: ಸ್ಥಾನ ಕಳೆದುಕೊಳ್ಲಲಿರುವ 6 ಸಚಿವರ ಪಟ್ಟಿ?

ಅಮಿತ್ ಶಾ ಅವರು ಜನವರಿ 18 ರಂದು ರಾಜ್ಯಕ್ಕೆ ಬರುತ್ತಿದ್ದು, ಅಂದೇ ಅವರೊಂದಿಗೆ ಮಾತನಾಡಿ ಸಚಿವ ಸ್ಥಾನ ಯಾರಿಗೆ ಕೊಡಬೇಕು-ಯಾರಿಗೆ ಬೇಡ ಎಂಬುದನ್ನು ಇತ್ಯರ್ಥ ಮಾಡಲಿದ್ದಾರೆ.

English summary
CM Yediyurappa told media that Cabinet expansion will happen before i go to Singapore to attend economic world economic summit.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X