ಲೋಕಾಯುಕ್ತ ಕಾಯ್ದೆ ತಿದ್ದುಪಡಿ, ಇನ್ನಷ್ಟು ಕಷ್ಟವಾಗಲಿದೆ ತೆರಿಗೆ ವಂಚನೆ
ಬೆಂಗಳೂರು, ಜನವರಿ 03: ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ಮಾಡಲು ಸಚಿವ ಸಂಪುಟ ತೀರ್ಮಾನಿಸಿದ್ದು, ಇನ್ನು ಮುಂದೆ ಸರ್ಕಾರಿ ನೌಕರರು, ಜನಪ್ರತಿನಿಧಿಗಳು ತಮ್ಮ ಆಸ್ತಿ ವಿವರದ ಜೊತೆಗೆ ಕುಟುಂಬದ ಆಸ್ತಿ ವಿವರವನ್ನೂ ಲೋಕಾಯುಕ್ತಕ್ಕೆ ಸಲ್ಲಿಸಬೇಕಾಗಲಿದೆ.
ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತರಲು ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ, ಈ ಬಗ್ಗೆ ಸಭೆ ಬಳಿಕ ಸಂಸದೀಯ ಸಚಿವ ಟಿ.ಬಿ. ಜಯಚಂದ್ರ, ತಿದ್ದುಪಡಿಯ ವಿವರಗಳನ್ನು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರು ಇನ್ನು ಮುಂದೆ ತಮ್ಮ ಆಸ್ತಿಯ ವಿವರದ ಜತೆಗೆ ಅವಲಂಬಿತ ತಂದೆ, ತಾಯಿ, ಮಕ್ಕಳ ಹೆಸರಿನಲ್ಲಿರುವ ಸ್ಥಿರ ಮತ್ತು ಚರಾಸ್ತಿ, ನಗದು, ಬ್ಯಾಂಕ್ ಖಾತೆ ವಿವರಗಳನ್ನು ಪ್ರತಿ ವರ್ಷ ಲೋಕಾಯುಕ್ತಕ್ಕೆ ಸಲ್ಲಿಸುವುದು ಕಡ್ಡಾಯವಾಗಲಿದೆ.
ಈ ವರೆಗೆ ಇದ್ದ ನಿಯಮಗಳ ಅನುಸಾರ ತಮ್ಮ ಹಾಗೂ ಪತ್ನಿಯ ಹೆಸರಿನಲ್ಲಿರುವ ಆಸ್ತಿ ಮತ್ತು ಸಾಲದ ವಿವರಗಳನ್ನಷ್ಟೇ ನೀಡಬೇಕಿತ್ತು. ನೌಕರ, ಆತನ ಪತ್ನಿ, ತಂದೆ, ತಾಯಿ ಹಾಗೂ ಎಲ್ಲ ಮಕ್ಕಳ ಹೆಸರು, ಅವರ ಹೆಸರಿನಲ್ಲಿರುವ ಆಸ್ತಿ, ಅವರೆಲ್ಲರ ಬ್ಯಾಂಕ್ ಖಾತೆಗಳ ವಿವರ, ವಿವಿಧ ರೂಪದ ಉಳಿತಾಯ, ರೂಪಾಯಿ 10,000 ಮೌಲ್ಯಕ್ಕೂ ಮೇಲ್ಪಟ್ಟ ವಸ್ತುಗಳ ವಿವರ, ರೂಪಾಯಿ 25,000 ಮೌಲ್ಯಕ್ಕೂ ಮೇಲ್ಪಟ್ಟ ಗೃಹೋಪಯೋಗಿ ವಸ್ತುಗಳ ವಿವರಗಳನ್ನು ಸಲ್ಲಿಸಬೇಕಾಗುತ್ತದೆ.
ಸದ್ಯದ ನಿಯಮಗಳ ಪ್ರಕಾರ ಆಸ್ತಿ ಮೌಲ್ಯಗಳ ವಿವರ ನೀಡುವಾಗ, ಆಸ್ತಿ ಖರೀದಿಸಿದಾಗ ಪಾವತಿಸಿದ್ದ ಮೊತ್ತ ಎಷ್ಟು ಎಂಬ ವಿವರ ನೀಡಿದರೆ ಸಾಕಾಗುತ್ತಿತ್ತು. ಹೊಸ ನಿಯಮದ ಪ್ರಕಾರ ಮಾರ್ಗಸೂಚಿ ದರದ ಆಧಾರದಲ್ಲಿ ವಿವರ ಸಲ್ಲಿಸಬೇಕಾಗುತ್ತದೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications