ಬೆಂಗಳೂರಿನಲ್ಲಿ ಕೇಬಲ್ ಬಿಲ್ ಸದ್ದಿಲ್ಲದೇ ಹೆಚ್ಚಳ!

ಸುಮಾರು ಏಳು ವರ್ಷಗಳಿಂದ ಕೇಬಲ್ ಶುಲ್ಕ ಹೆಚ್ಚಳ ಮಾಡಿಲ್ಲ ಎಂದು ಸಭೆ ನಡೆಸಿದ ಬೆಂಗಳೂರು ಮಹಾನಗರ ಕೇಬಲ್ ಆಪರೇಟರ್ಗಳು 20ರಿಂದ 30 ರೂ. ದರವನ್ನು ಹೆಚ್ಚಿಸಿದ್ದಾರೆ. ನಗರದ ಕೆಲವು ಪ್ರದೇಶಗಳಲ್ಲಿ ನೂತನ ದರವನ್ನು ಈ ತಿಂಗಳಿನಿಂದಲೇ ಜಾರಿಗೆ ತಂದಿದ್ದು, ಮಾರ್ಚ್ ನಿಂದ ಕಡ್ಡಾಯವಾಗಿ ಜಾರಿಗೆ ಬರಲಿದೆ. [ಸೆಟ್ಟಾಪ್ ಬಾಕ್ಸ್ ಗೆ ಎಷ್ಟು ಹಣ ಕೊಟ್ಟಿದ್ದೀರಿ?]
ನಗರದ ಬನಶಂಕರಿ, ಜಯನಗರ, ಮಲ್ಲೇಶ್ವರಂ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಪರಿಷ್ಕೃತ ದರ ಈಗಾಗಲೇ ಜಾರಿಗೆ ಬಂದಿದ್ದು ಜನರು 20ರಿಂದ 30 ರೂ. ದರ ಹೆಚ್ಚು ಪಾವತಿ ಮಾಡಿದ್ದಾರೆ. ಉಳಿದ ಪ್ರದೇಶಗಳಲ್ಲೂ ನೂತನ ದರ ಹಂತ ಹಂತವಾಗಿ ಜಾರಿಗೆ ಬರಲಿದ್ದು, ಮಾರ್ಚ್ ತಿಂಗಳಿನಲ್ಲಿ ಜನರು ನೂತನ ದರ ಪಾವತಿ ಮಾಡಬೇಕಾಗುತ್ತದೆ.
ಸೇವಾ ಶುಲ್ಕ ಹಾಗೂ ಮನರಂಜನಾ ತೆರಿಗೆಯನ್ನು ಪಾವತಿಸಬೇಕಾದ ಎಂಎಸ್ಒಗಳು, ಅದನ್ನು ಗ್ರಾಹಕರ ಮೇಲೆ ಹೇರುತ್ತಿವೆ ಎಂಬ ಮಾತುಗಳು ಕೇಳಿಬರುತ್ತಿವೆ. ಸದ್ಯ ಶೇಕಡ 12.36 ರಷ್ಟು ಸೇವಾ ತೆರಿಗೆ ಹಾಗೂ ಶೇಕಡ 6ರಷ್ಟು ಮನರಂಜನಾ ತೆರಿಗೆ ಪಾವತಿ ಮಾಡಬೇಕಾಗಿದೆ. ಜೊತೆಗೆ ಏಳು ವರ್ಷಗಳಿಂದ ದರ ಹೆಚ್ಚಿಸಿಲ್ಲ ಎಂದು ಕೇಬಲ್ ಆಪರೇಟರ್ ಗಳು ದರ ಹೆಚ್ಚಳಕ್ಕೆ ಸಮರ್ಥನೆ ನೀಡಿದ್ದಾರೆ.
ಕೇಬಲ್ ಆಪರೇಟರ್ ಗಳಿಗೆ ಬೆಂಗಳೂರಿನಲ್ಲಿ ಸದ್ಯ ಗ್ರಾಹಕರು ಸರಾಸರಿ 250ರೂ ಪಾವತಿ ಮಾಡುತ್ತಿದ್ದಾರೆ. ಆದರೆ, ನೂತನ ದರದ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಹೊರಬಿದ್ದಿಲ್ಲ. 20 ಅಥವ 30 ರೂ. ಹೆಚ್ಚಳವಾಗುವುದು ಖಾತ್ರಿಯಾಗಿದೆ. ಆದ್ದರಿಂದ ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಿಂದ ಗ್ರಾಹಕರು ನೂತನ ದರವನ್ನು ನೀಡಲು ಸಿದ್ಧರಾಗಬೇಕಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications