Breaking; ಬೆಂಗಳೂರು: ಕೆಡೆಟ್ ಟ್ರೈನಿ ಶವ ಪತ್ತೆ, 6 ಅಧಿಕಾರಿಗಳ ವಿರುದ್ಧ ಕೊಲೆ ಆರೋಪ
ಬೆಂಗಳೂರು, ಸೆಪ್ಟಂಬರ್ 25: ಬೆಂಗಳೂರಿನಲ್ಲಿ 27 ವರ್ಷದ ಕೆಡೆಟ್ ಟ್ರೈನಿ ಒಬ್ಬರು ಕಾಲೇಜು ಕ್ಯಾಂಪಸ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಆರು ವಾಯುಪಡೆ ಅಧಿಕಾರಿಗಳ ಮೇಲೆ ಕೊಲೆ ಆರೋಪ ಕೇಳಿ ಬಂದಿದೆ.
ನಗರದ ಜಾಲಹಳ್ಳಿಯ ಏರ್ರ್ಫೋರ್ಸ್ ಟೆಕ್ನಿಕಲ್ ಕಾಲೇಜಿನಲ್ಲಿ (ಎಎಫ್ಟಿಸಿ) ಶನಿವಾರ ಅಂಕಿತ್ ಕುಮಾರ್ ಝಾ (27) ಎಂಬುವವರ ಮೃತದೇಹ ಪತ್ತೆಯಾಗಿದೆ. ಮೃತ ಟ್ರೈನಿ ವಿರುದ್ಧ ವಿರುದ್ಧ ನ್ಯಾಯಾಲಯವು ವಿಚಾರಣೆಗೆ ಆದೇಶಿಸಿತ್ತು. ಇದಾದಿ ನಂತರ ಕೆಡೆಟ್ ಟ್ರೈನಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪೊಲೀಸ್ ಅಧಿಕಾರಿಗಳ ಪ್ರಕಾರ, ಕೆಡೆಟ್ ಟ್ರೈನಿ ಅಂಕಿತ್ ಕುಮಾರ್ ಝಾ ಅವರು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ಆತ್ಮಹತ್ಯೆ ಪತ್ರದಲ್ಲಿ ಮೃತರು ಏರ್ ಕಮೋಡೋರ್, ವಿಂಗ್ ಕಮಾಂಡರ್ ಹಾಗು ಗ್ರೂಪ್ ಕ್ಯಾಪ್ಟನ್ ಹುದ್ದೆಗಳನ್ನು ಹೊಂದಿರುವ ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿದ್ದಾರೆ. ಇದರ ಆಧಾರದಲ್ಲಿ ಆರು ಅಧಿಕಾರಿಗಳ ಕೊಲೆ ಆರೋಪ ಎದುರಿಸುತ್ತಿದ್ದಾರೆ ಎಂದು ತಿಳಿದ ಬಂದಿದೆ.

ಅಂಕಿತ್ ಕುಮಾರ್, ಕಾಲೇಜಿನಲ್ಲಿ ನಿರಂತರ ಕಿರುಕುಳ, ಚಿತ್ರಹಿಂಸೆ ಎದುರಿಸಿದ್ದಾರೆ ಎಂದು ಮೃತರ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ತನಿಖಾಧಿಕಾರಿಗಳಿಗೆ ಲಭ್ಯವಾದ ಮಾಹಿತಿ ಪ್ರಕಾರ ಮೃತ ಅಂಕಿತ್ ಕುಮಾರ್ ವಿರುದ್ಧ ಶಿಸ್ತು ಕ್ರಮ ಆರಂಭಿಸಿದ ನಂತರ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿತ್ತು ಎನ್ನಲಾಗಿದೆ.

ಕೊಲೆ ಆರೋಪ ಎದುರಿಸುತ್ತಿರುವ ಆರೋಪಿಗಳು ತಲೆಮರೆಸಿಕೊಂಡಿಲ್ಲ. ಮೃತರ ಸಹೋದರ ಈ ಸಂಬಂಧ ದೂರು ದಾಖಲಿಸಿದ್ದಾರೆ.ನಾವು ಕುಟುಂಬ ಸದಸ್ಯರು ಮಾಡಿದ ಹಕ್ಕುಗಳು ಮತ್ತು ಆರೋಪಗಳ ವಿರುದ್ಧ ಸಾಕ್ಷ್ಯವನ್ನು ಸಂಗ್ರಹ ಕೆಲಸ ನಡೆಯುತ್ತಿದೆ. ಆತ್ಮಹತ್ಯೆ ಟಿಪ್ಪಣಿ ಬರೆಯಲಾಗಿದೆ. ಅಲ್ಲದೇ ಮೃತ ವ್ಯಕ್ತಿ ವಿರುದ್ಧ ನ್ಯಾಯಾಲಯ ಶಿಸ್ತು ಕ್ರಮಕ್ಕೆ ಆದೇಶ ನೀಡಿತ್ತು. ಮುಖ್ಯವಾಗಿ ಅದೇ ದಿನ ಅಂಕಿತ್ ಕುಮಾರ್ ಅವರನ್ನು ತರಬೇತಿಯಿಂದ ಬಿಡುಗಡೆಗೊಳಿಸಲಾಗಿತ್ತು. ಇವೆಲ್ಲ ಆದ ನಂತರ ಕ್ಯಾಂಪಸ್ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ. ಈ ಬಗ್ಗೆ ತನಿಖೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
-
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು












Click it and Unblock the Notifications