ದಿನಸಿ ಮಳಿಗೆಯಾಗಿ ಬದಲಾಗುತ್ತಿದೆ ಸಿದ್ಧಾರ್ಥ ಕನಸಿನ ಕೆಫೆ ಕಾಫಿ ಡೇ
ಬೆಂಗಳೂರು, ನವೆಂಬರ್ 28: ಸಿದ್ಧಾರ್ಥ ಅವರ ಕನಸಿನ ಕೂಸು ಸಿಸಿಡಿ (ಕೆಫೆ ಕಾಫಿ ಡೇ) ದಿನಸಿ ಮಳಿಗೆಯಾಗಿ ಬದಲಾಗುತ್ತಿದೆ.
ಸಿದ್ಧಾರ್ಥ ಅವರ ಅಕಾಲಿಕ ಸಾವಿನ ಬಳಿಕ ಈಗ ಅವರ ಪತ್ನಿ ಮಾಳವಿಕಾ ಸಿದ್ಧಾರ್ಥ ಸಿಸಿಡಿಯ ಜವಾಬ್ದಾರಿ ವಹಿಸಿಕೊಂಡಿದ್ದು ಜಪಾನ್ನ ಖ್ಯಾತ ಕಂಪೆನಿಯೊಂದರ ಜೊತೆ ಸೇರಿ ಕೆಫೆಕಾಫಿ ಡೇ ಯನ್ನು ದಿನಸಿ ಮಳಿಗೆಯಾಗಿ ಬದಲಾಯಿಸುತ್ತಿದ್ದಾರೆ.
ಕಾಫಿ ಡೇ ಎಸೆನ್ಶಿಯಲ್ಸ್ ದಿನಸಿ ಮಳಿಗೆಗಳು ಈಗಾಗಲೇ ಕೆಲವು ಕಾರ್ಯನಿರ್ವಹಿಸುತ್ತಿದ್ದು, ಜಪಾನ್ ನ ಇಂಪಾಕ್ಟ್ ಎಚ್ಡಿ ಸಂಸ್ಥೆ ಜೊತೆ ಕೈಜೋಡಿಸಿ ನಷ್ಟದಲ್ಲಿರುವ ಎಲ್ಲ ಕೆಫೆ ಕಾಫಿ ಡೇ ಗಳನ್ನು ಕಾಫಿ ಡೇ ಎಸೆನ್ಶಿಯಲ್ಸ್ ಆಗಿ ಬದಲಾವಣೆ ಮಾಡಲಾಗುತ್ತಿದೆ.

ಕೆಫೆ ಕಾಫಿ ಡೇ ಸೇರಿ ಸಿದ್ಧಾರ್ಥ ಒಡೆತನದ ಸಂಸ್ಥೆಗಳು ನಷ್ಟಕ್ಕೆ ಸಿಲುಕಿದ್ದವು ಇದರಿಂದ ಮನನೊಂದಿದ್ದ ಸಿದ್ಧಾರ್ಥ ಇದೇ ಜುಲೈ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಅಗಲಿಕೆ ನಂತರ ಅವರ ಕನಸಿನ ಕೂಸು ಕಾಫಿ ಡೇ ಅನ್ನು ಉಳಿಸಿಕೊಳ್ಳುವ ಸಲುವಾಗಿ ನಷ್ಟದಲ್ಲಿರುವ ಕಾಫಿ ಡೇ ಗಳನ್ನು ದಿನಸಿ ಮಳಿಗೆಗಳನ್ನಾಗಿ ಬದಲಾವಣೆ ಮಾಡಲಾಗುತ್ತಿದೆ.
ಶೇ 50:50 ಪಾಲುದಾರಿಕೆಯಲ್ಲಿ 'ಕಾಫಿ ಡೇ ಎಸೆನ್ಶಿಯಲ್' ಕೆಲಸ ಮಾಡಲಿದ್ದು, ಕಾಫಿ ಡೇ ಯನ್ನು ಪುನಶ್ಚೇತನ ಮಾಡಲು ಈ ನಿರ್ಧಾರ ಕೈಗೊಳ್ಳಲಾಗಿದೆ. ವ್ಯಾಪರ ಇಲ್ಲದ, ಲಾಭ ಮಾಡದ ಕಾಫಿ ಡೇ ಮಳಿಗೆಗಳನ್ನು ಕಾಫಿ ಡೇ ಎಸೆನ್ಶಿಯಲ್ಗಳಾಗಿ ಬದಲಾಯಿಸುವ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ.
ಚಿಕ್ಕಮಗಳೂರಿನ ಕಾಫಿ ಬೀಜ ಸಂಸ್ಕರಕರಣಾ ಘಟಕ ಎಬಿಸಿ ಈಗ ಕಾಫಿ ಖರೀದಿಸುತ್ತಿಲ್ಲ. ಅಷ್ಟೆ ಅಲ್ಲದೆ ಕಾಫಿ ಬೆಳೆಗಾರರಿಗೆ ನೀಡಬೇಕಿದ್ದ ಬಾಕಿಯನ್ನು ತೀರಿಸುವ ಕಾರ್ಯಗಳು ಭರದಿಂದ ಸಾಗುತ್ತಿದೆ. ಎಬಿಸಿ ಬಹುತೇಕ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications