ಸಾಫ್ಟ್ವೇರ್ ಕಂಪೆನಿ ಹೆಸರಿನಲ್ಲಿ ಅಮೆರಿಕಾ ಪ್ರಜೆಗಳಿಗೆ ವಂಚಿಸುತ್ತಿದ್ದ 11 ಆರೋಪಿಗಳ ಸೆರೆ
ಬೆಂಗಳೂರು, ಜು. 08: ಸಾಫ್ಟ್ವೇರ್ ಕಂಪನಿ ಹೆಸರಿನಲ್ಲಿ ದೋಖಾ ಕಚೇರಿ ತೆಗೆದು ಅಮೆರಿಕಾ ಸೇರಿದಂತೆ ವಿದೇಶಿ ಪ್ರಜೆಗಳಿಗೆ ವಂಚನೆ ಮಾಡುತ್ತಿದ್ದ ದೊಡ್ಡ ಮಟ್ಟದ ಸೈಬರ್ ವಂಚಕ ಜಾಲವನ್ನು ವೈಟ್ ಫೀಲ್ಡ್ ವಿಭಾಗದ ಪೊಲೀಸರು ಪತ್ತೆ ಮಾಡಿದ್ದಾರೆ.
ಈ ಸಂಬಂಧ ಹನ್ನೊಂದು ಆರೋಪಿಗಳನ್ನು ಬಂಧಿಸಿದ್ದು, ವೈಟ್ಫೀಲ್ಡ್ ವಿಭಾಗ ಪೊಲೀಸರ ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಮಹದೇವಪುರ ಹಾಗೂ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಕೇಸು ದಾಖಲಿಸಿದ್ದು, ಮೂರು ಕೋಟಿ ಮೌಲ್ಯದ ಲ್ಯಾಪ್ಟಾಪ್, ಕಂಪ್ಯುಟರ್ಗಳನ್ನು ವಶಪಡಿಸಿಕೊಂಡಿದ್ದಾರೆ.
ವೈಟ್ ಫೀಲ್ಡ್ನ ಗಾಯತ್ರಿ ಟೆಕ್ ಪಾರ್ಕ್ನಲ್ಲಿ ಏಥಿಕಲ್ ಇನ್ ಫೋ ಪ್ರೈ ಲಿ ಹೆಸರಿನಲ್ಲಿ ಕಂಪನಿ ತೆರೆದಿದ್ದ ವಂಚಕರು, ನಕಲಿ ಕಾಲ್ಸೆಂಟರ್ಗಳನ್ನು ತೆರೆದು ವಿದೇಶಿ ಪ್ರಜೆಗಳನ್ನು ಟಾರ್ಗೆಟ್ ಮಾಡುತ್ತಿದ್ದರು. ಕಳೆದ ಎರಡು ವರ್ಷದಿಂದ ಈ ಜಾಲವನ್ನು ವಿಸ್ತರಿಸಿದ್ದರು. ಇದರ ಕಿಂಗ್ಪಿನ್ಗಳಾದ ರಿಷಿವ್ಯಾಸ್ ಪ್ರತೀಕ್, ಪರೀಶ್, ಹೇತ್ ಪಟೇಲ್, ಕಿರಣ್, ಸೈಯ್ಯದ್, ಸೇರಿ ಹನ್ನೊಂದು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನೂರಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.ಇನ್ನೂ ಈ ಆರೋಪಿಗಳು ಗುಜಾರಾತ್ ಮೂಲದವರಾಗಿದ್ದು ಕಳೆದ ಎರಡು ವರ್ಷಗಳಿಂದ ಈ ಅಕ್ರಮ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಇಂತಹ ಮಹತ್ವದ ಕಾರ್ಯಾಚರಣೆಯನ್ನು ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಎಸ್. ಗಿರೀಶ್ ಅವರ ನೇತೃತ್ವದಲ್ಲಿ ನಡೆದಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ವೈಟ್ ಫೀಲ್ಡ್ ನ ಗಾಯತ್ರಿ ಟೆಕ್ ಪಾರ್ಕ್ ನಲ್ಲಿ ಏಥಿಕಲ್ ಇನ್ ಫೋ ಪ್ರೈ,ಲಿ ಹೆಸರಿನಲ್ಲಿ ನಕಲಿ ಕಂಪನಿ ತೆರದಿದ್ದ ಆರೋಪಿಗಳು ನೂರಾರು ಟೆಲಿಕಾರ್ ಗಳ ಮೂಲಕ ಅಮೆರಿಕಾ ಪ್ರಜೆಗಳನ್ನು ಸಂಪರ್ಕ ಮಾಡ್ತಿದ್ರು. ನಿಮ್ಮಖಾತೆಯಿಂದ ಹಣ ವರ್ಗಾವಣೆ ಆಗಿದೆಯಾ ಅಂತ ಮಾತು ಶುರು ಮಾಡ್ತಿದ್ದ ಆರೋಪಿಗಳ ಹಣ ವಾಪಸ್ ಬರಬೇಕು ಅಂದ್ರೆ ಒಂದಷ್ಟು ಪ್ರೊಸಿಜರ್ ಫಾಲೋ ಮಾಡಬೇಕು ಅಂತ ನಂಬಿಸಿ ಮೋಸ ಮಾಡಿದ್ದರು. ಹಂತ ಹಂತವಾಗಿ ಬ್ಯಾಂಕ್ ಹೆಸರನ್ನು ಬಳಕೆ ಮಾಡಿ ಗ್ರಾಹಕರಿಂದ ಅಮೆಜಾನ್ ನಲ್ಲಿ ಲಕ್ಷ ಲಕ್ಷ ಗಿಫ್ಟ್ ಕಾರ್ಡ್ ಗೆ ಖರೀದಿ ಮಾಡಿಸಿ ಹಣ ಸಂಪಾದನೆ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.
ಬೃಹತ್ ಜಾಲವನ್ನ ಪತ್ತೆ
ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಅಮೇರಿಕಾ ಪ್ರಜೆಗಳಿಗೆ ಬ್ಯಾಂಕ್ ಹೆಸರಿನಲ್ಲಿ ವಂಚನೆ ಮಾಡ್ತಿದ್ದ ಬೃಹತ್ ಜಾಲವನ್ನ ಪತ್ತೆ ಮಾಡಲಾಗಿದೆ. ಸಾಫ್ಟ್ ವೇರ್ ಕಂಪನಿ ಸೋಗಿನಲ್ಲಿ ಅಮೇರಿಕ ಪ್ರಜೆಗಳನ್ನ ಟ್ರ್ಯಾಪ್ ಮಾಡಿ ಅನ್ ಲೈನ್ ವಂಚನೆ ಮಾಡುತ್ತಿದ್ದರು. ಇನ್ನೂ ಈ ಆರೋಪಿಗಳು ತಮ್ಮ ಕಂಪನಿ ಉದ್ಯೋಗಿಗಳನ್ನು ಶಾಲಾ ವಾಹನಗಳಲ್ಲಿ ಸಾಗಿಸುತ್ತಿದ್ದರು ಎಂಬುದು ಪೊಲೀಸರ ತನಿಖೆ ವೇಳೆ ತಿಳಿದು ಬಂದಿದೆ.

ಸದ್ಯ ಪ್ರಕರಣ ಹಿನ್ನೆಲೆ ಅಮೆರಿಕಾ ರಾಯಭಾರಿ ಬಳಿ ಮಾಹಿತಿ ಪಡೆಯಲು ಮುಂದಾಗಿದ್ದೇವೆ. ಆರೋಪಿಗಳು ಯುಎಸ್ ಪ್ರಜೆಗಳನ್ನು ಟಾರ್ಗೇಟ್ ಮಾಡ್ತಿದ್ದ ಉದ್ದೇಶ ಏನು? ಇವರಿಗೆ ಈ ನಂಬರ್ ಯಾರು ಕೊಡುತ್ತಿದ್ದರು ಎಂದು ವಿಚಾರಣೆ ನಡೆಸ್ತಿದ್ದಾರೆ. ಇನ್ನೂ ಕಂಪನಿ ಯಲ್ಲಿ ಕೋಟಿ ಕೋಟಿ ವಂಚನೆ ಮಾಡಿರೋ ಶಂಕೆ ವ್ಯಕ್ತವಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಡಾ. ಸುಬ್ರಮಣೇಶ್ವರ್ ರಾವ್ ತಿಳಿಸಿದ್ದಾರೆ. ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸಿಐಡಿ ಹೆಗಲೇರುವ ಸಾಧ್ಯತೆಯಿದೆ. ಮಹದೇವಪುರ ಹಾಗೂ ವೈಟ್ ಫೀಲ್ಡ್ ಪೊಲೀಸ್ ಠಾಣೆಗಳಲ್ಲಿ ಎರಡು ಪ್ರತ್ಯೇಕ ಕೇಸು ದಾಖಲಾಗಿವೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications