ಹೋಂ ಐಸೋಲೇಷನ್ ಮಾರ್ಗದರ್ಶನಕ್ಕೆ 1,100 ಕಾಲ್ಸೆಂಟರ್ ಸಿಬ್ಬಂದಿ
ಬೆಂಗಳೂರು, ಏಪ್ರಿಲ್ 27: ಮನೆ ಆರೈಕೆಯಲ್ಲಿರುವ ಕೋವಿಡ್ ರೋಗಿಗಳಿಗೆ ಮಾರ್ಗದರ್ಶನ ನೀಡಲು ಕಾಲ್ ಸೆಂಟರ್ ನಲ್ಲಿ ಒಟ್ಟು 1,100 ಮಂದಿಯನ್ನು ನಿಯೋಜಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಕೋವಿಡ್ ಟಾಸ್ಕ್ ಫೋರ್ಸ್ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಈಗಾಗಲೇ ಕಾಲ್ಸೆಂಟರ್ನಲ್ಲಿ 400 ಸಿಬ್ಬಂದಿ ಇದ್ದಾರೆ. ಮನೆ ಆರೈಕೆಯಲ್ಲಿರುವವರಿಗೆ ಕರೆ ಮಾಡಿ ಮಾರ್ಗದರ್ಶನ ನೀಡಲು 11 ಕೋಟಿ ರೂ. ವೆಚ್ಚದಲ್ಲಿ 6 ತಿಂಗಳಿಗೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ, ಹೊಸ ವ್ಯವಸ್ಥೆ ಮಾಡಲಾಗುವುದು.
ಈ ಸಿಬ್ಬಂದಿ ಬೇರೆ ಬೇರೆ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಜೊತೆಗೆ 20 ಕೋಟಿ ರೂ. ವೆಚ್ಚದಲ್ಲಿ ಟೆಲಿ ಮೆಡಿಸಿನ್, ವೈದ್ಯಕೀಯ ಸಲಹೆ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಮೇ 1ರಿಂದ ಮೂರನೇ ಹಂತದ ಲಸಿಕಾ ಅಭಿಯಾನ ಆರಂಭಗೊಳ್ಳಲಿದ್ದು, 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. CoWin ವೆಬ್ ಸೈಟ್ ಹಾಗೂ ಆರೋಗ್ಯ ಸೇತು ಅಪ್ಲಿಕೇಷನ್ ಮೂಲಕ 18 ವರ್ಷಕ್ಕಿಂತ ಮೇಲ್ಪಟ್ಟವರು ಲಸಿಕೆಗಾಗಿ ತಮ್ಮ ಹೆಸರು ನೋಂದಾಯಿಸಬಹುದು.
ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಾಣ
ಬೆಂಗಳೂರಿನಲ್ಲಿ 2-3 ಸಾವಿರ ಹಾಸಿಗೆಗಳ ಮೇಕ್ ಶಿಫ್ಟ್ ಆಸ್ಪತ್ರೆಯನ್ನು 15-20 ದಿನಗಳಲ್ಲಿ ನಿರ್ಮಿಸಲಾಗುವುದು. ವಿಕ್ಟೋರಿಯಾ, ಬೌರಿಂಗ್, ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ ಆವರಣದಲ್ಲಿ ಇಂತಹ ಆಸ್ಪತ್ರೆ ನಿರ್ಮಿಸಲಾಗುವುದು. ಒಂದು ಆಸ್ಪತ್ರೆಯಲ್ಲಿ 200-250 ಹಾಸಿಗೆಗಳಿದ್ದು, ಶೇ.20 ರಷ್ಟು ಐಸಿಯು ವೆಂಟಿಲೇಟರ್, ಶೇ.60 ರಷ್ಟು ಆಕ್ಸಿಜನ್, ಶೇ.20 ರಷ್ಟು ಹೈ ಫ್ಲೋ ಆಕ್ಸಿಜನ್ ಇರಲಿದೆ. ಎಲ್ಲ ಜಿಲ್ಲೆಗಳಲ್ಲೂ ಈ ವ್ಯವಸ್ಥೆಯಾಗಲಿದೆ ಎಂದು ತಿಳಿಸಿದರು.
ಕೋವಿಡ್ ಕೇರ್ ಸೆಂಟರ್
ಪ್ರತಿ ಜಿಲ್ಲೆಯಲ್ಲಿ 50-100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ನಿರ್ಮಿಸಲಿದ್ದು, 10%-20% ಆಕ್ಸಿಜನ್ ಹಾಸಿಗೆ ಇರಲಿದೆ. ಪ್ರತಿ ಸೆಂಟರ್ ನಲ್ಲಿ 20 ಹಾಸಿಗೆಗಳಿಗೆ ಪೋರ್ಟೇಬಲ್ ಆಕ್ಸಿಜನ್ ನೀಡಲಾಗುವುದು. ಒಟ್ಟು 40 ಸಾವಿರ ಪೋರ್ಟೇಬಲ್ ಆಕ್ಸಿಜನ್ ಆಮದು ಮಾಡುವ ಪ್ರಯತ್ನ ಮಾಡಲಾಗುತ್ತಿದೆ. ಬೆಂಗಳೂರಿನ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಅಥವಾ ಎರಡು ಕೇರ್ ಸೆಂಟರ್ ತೆರೆಯಲಾಗುವುದು ಎಂದರು.
ಮುಂಬೈನಲ್ಲಿ ಕರ್ಫ್ಯೂ ವಿಧಿಸಿದ ಬಳಿಕ
ಮುಂಬೈನಲ್ಲಿ ಕರ್ಫ್ಯೂ ವಿಧಿಸಿದ ಬಳಿಕ ದಿನಕ್ಕೆ 3 ಸಾವಿರ ಪ್ರಕರಣ ಕಂಡುಬರುತ್ತಿದೆ. ಕಫ್ರ್ಯೂ ವಿಧಿಸಿದಾಗ ಸೋಂಕು ಕಡಿಮೆಯಾಗುತ್ತದೆ. ಆದ್ದರಿಂದಲೇ ರಾಜ್ಯ ಸರ್ಕಾರ ಕರ್ಫ್ಯೂ ತೀರ್ಮಾನ ಕೈಗೊಂಡಿದೆ. ಜನರು ಹೆಚ್ಚು ಓಡಾಡದೆ ಎಚ್ಚರ ವಹಿಸಬಾರದು. ಕಡಿಮೆ ಲಕ್ಷಣ ಇರುವ ಸೋಂಕಿತರು ಮನೆಯಿಂದ ಹೊರಗೆ ಹೋಗಿ ಹರಡಬಾರದು ಎಂದು ಕೋರಿದರು.
ಸಚಿವರು ಹೇಳಿದ ಇತರೆ ಅಂಶಗಳು
ಕೋವಿಡ್
ಅಂಕಿ
ಅಂಶ
ಮುಚ್ಚಿಡುತ್ತಿಲ್ಲ.
ಇದರಲ್ಲಿ
ರಾಜಕೀಯ
ಬೇಡ.
ಈ
ಸಂದರ್ಭದಲ್ಲಿ
ಆಡಳಿತ
ಪಕ್ಷ,
ವಿರೋಧ
ಪಕ್ಷ
ಎಂದು
ಇರಬಾರದು.
ಹನುಮ
ಸಂಜೀವಿನಿ
ತಂದಂತೆ,
ಪ್ರಧಾನಿ
ನರೇಂದ್ರ
ಮೋದಿ
ಸರ್ಕಾರ
ಕೋವಿಡ್
ಲಸಿಕೆ
ನೀಡಿದೆ.
ಇದನ್ನು
ಬಳಸಿಕೊಳ್ಳಿ.
ಲಕ್ಷ್ಮಣರೇಖೆ
ಹಾಕಿಕೊಂಡು
ಮನೆಯಲ್ಲೇ
ಇರಿ.
Recommended Video