Karnataka Bandh: ಇಂದು ಕನ್ನಡಪರ ನಾಯಕರಿಂದ ರಾಜಭವನ ಮುತ್ತಿಗೆ
ಬೆಂಗಳೂರು, ಮಾರ್ಚ್ 03: ಬೆಳಗಾವಿಯಲ್ಲಿ ಮರಾಠಿ ಪುಂಡರ ಪುಂಡಾಟಿಕೆ ವಿರುದ್ಧ ಈಗಾಗಲೇ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಈ ಬಂದ್ ಅಂಗವಾಗಿ 'ಕನ್ನಡ ಒಕ್ಕೂಟ-ಕರ್ನಾಟಕ ರಾಜ್ಯ' ನೇತೃತ್ವದಲ್ಲಿ ಇಂದು ಸೋಮವಾರ (ಮಾರ್ಚ್ 03) ಕನ್ನಡಪರ ಹೋರಾಟಗಾರರು ಸೇರಿದಂತೆ ಅಸಂಖ್ಯಾತ ಕನ್ನಡಿಗರು ಬೆಂಗಳೂರಿನಲ್ಲಿ ರಾಜಭವನ ಮುತ್ತಿಗೆ ಹಾಕಲಿದ್ದಾರೆ. ಈ ಸಂಬಂಧ ರಾಜಭವನ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ.
'ಕನ್ನಡ ಒಕ್ಕೂಟ-ಕರ್ನಾಟಕ ರಾಜ್ಯ' ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಈಗಾಗಲೇ ಕನ್ನಡಿಗರು, ಕಾರ್ಯಕರ್ತರು ಸಭೆ ಸೇರಿ ನಿರ್ಧರಿಸಿದ್ದಾರೆ. ಅದರ ಭಾಗವಾಗಿ ಇಂದು ಮಧ್ಯಾಹ್ನ 12 ಗಂಟೆಗೆ ಹೊತ್ತಿಗೆ ರಾಜಭವನ ಮೇಲೆ ಮುತ್ತಿಗೆ ಹಾಕಲಿಸದ್ದಾರೆ. ಕನ್ನಡ ಭಾಷೆ, ಗಡಿ, ಜಲ ವಿವಾದ ಪರಿಹಾರಗಳಿಗೆ ಒತ್ತಾಯಿಸಿ ಮುತ್ತಿಗೆ ಹಾಕಲಾಗುತ್ತದೆ ಎಂದು ವಾಟಾಳ್ ನಾಗರಾಜ್ ಅವರು ಮಾಹಿತಿ ನೀಡಿದ್ದಾರೆ.

ಬೆಳಗಾವಿ ರಾಜಕಾರಣಗಳ ರಾಜೀನಾಮೆಗೆ ಆಗ್ರಹ
ಮರಾಠಿಗರ ಪುಂಡಾಟಿಕೆ, ಮರಾಠಿಗರ ಅಟ್ಟಹಾಸ, ಎಂಇಎಸ್ ನಿಷೇಧ ಮಾಡಬೇಕು. ಬೆಳಗಾವಿ ಜಿಲ್ಲೆಯಲ್ಲಿರುವ ಎಲ್ಲ ರಾಜಕಾರಣಿಗಳು ರಾಜೀನಾಮೆ ಕೊಡಬೇಕು. ಕಳಸಾ-ಭಂಡೂರಿ ಮಹಾದಾಯಿ ಯೋಜನೆ ಕೂಡಲೇ ಆರಂಭಿಸಬೇಕು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಆಗಬೇಕು. ಕನ್ನಡ ಬಸ್ ನಿರ್ವಾಹಕರ ಮೇಲೆ ಮರಾಠಿಗರ ದಾಳಿ ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿ ಈ ಮುತ್ತಿಗೆ ಹಾಕಲಾಗುತ್ತಿದೆ. ಈ ಮೂಲಕ ಕನ್ನಡಿಗರ ಹಲವು ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರಕ್ಕೆ ಒತ್ತಡ ಹೇರಲಾಗುತ್ತದೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಅಹಿತಕರ ಘಟನೆ, ಕನ್ನಡಿಗರ ಮೇಲಿನ ದೌರ್ಜನ್ಯ ಖಂಡನೀಯವಾದದ್ದು. ಇದಕ್ಕೆ ಕನ್ನಡ ಪರ ಸಂಘಟನೆಗಳು ಮಾತ್ರವಲ್ಲದೇ, ರಾಜ್ಯಾದ್ಯಂತ ವಿವಿಧ ವಲಯಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು, ಕನ್ನಡಿಗರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಮಾರ್ಚ್ 12ರಂದು ವಾಟಾಳ್ ನಾಗರಾಜ್ ಅವರು 'ಕರ್ನಾಟಕ ಬಂದ್'ಗೆ ಕರೆ ನೀಡಿದ್ದಾರೆ. ಅದರ ಯಶಸ್ವಿಗೆ ಅನೇಕ ಸಂಘಟನೆಗಳು ಕೈ ಜೋಡಿಸಲಿವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜಭವನ ಮುತ್ತಿಗೆ: ಬೇಡಿಕೆ ಈಡೇರಿಕೆಗಳ ಪಟ್ಟಿ
* ಎಂಇಎಸ್ ನಿಷೇಧಿಸಬೇಕು.
* ಉತ್ತರ ಕರ್ನಾಟಕ ಅಭಿವೃದ್ಧಿ ಆಗಬೇಕು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಆಗಬೇಕು
* ಬೆಳಗಾವಿ ಉಳಿಸಬೇಕು.
* ಬೆಳಗಾವಿ ಜಿಲ್ಲೆಯಲ್ಲಿರುವ ಎಲ್ಲ ರಾಜಕಾರಣಿಗಳು ರಾಜೀನಾಮೆ ಕೊಡಬೇಕು.
* ಸಾಂಬಾಜಿ ಪ್ರತಿಮೆ ತೆರವುಗೊಳಿಸಬೇಕು.
* ಕನ್ನಡ ಬಸ್ ನಿರ್ವಾಹಕನ ಮೇಲೆ ಹಲ್ಲೆಗೈದವರಿಗೆ ಕಠಿಣ ಶಿಕ್ಷೆ ಆಗಬೇಕು.
* ಕಳಸಾ-ಭಂಡೂರಿ ಮಹಾದಾಯಿ ಯೋಜನೆ ಕೂಡಲೇ ಕಾರ್ಯಗತಗೊಳ್ಳಬೇಕು.
* ಹಿಂದಿ ಹೇರಿಕೆ ಬೇಡವೇ ಬೇಡ.
* ಮಂಗಳೂರು-ಕಾರವಾರ ಬಂದರು ಅಭಿವೃದ್ಧಿ
* ಕರ್ನಾಟಕದಲ್ಲಿ ಪರಭಾಷಾ ದಬ್ಬಾಳಿಕೆ ನಿಲ್ಲಬೇಕು ಸೇರಿದಂತೆ ಅನೇಕ ಬೇಡಿಕೆ ಈಡೇರಿಕೆಗೆ ಆಗ್ರಹಿಸಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications