ಹೊಸಪೇಟೆ-ಬೆಂಗಳೂರು ನಡುವೆ ನಿತ್ಯ ಇಂಟರ್ಸಿಟಿ ರೈಲಿಗೆ ಆಗ್ರಹ
ಬೆಂಗಳೂರು, ಜೂನ್ 22: ವಿಶ್ವವಿಖ್ಯಾತ ಹಂಪಿ ಸಂಪರ್ಕಿಸುವ ಹೊಸಪೇಟೆಯಿಂದ ರಾಜಧಾನಿ ಬೆಂಗಳೂರಿಗೆ ಮಧ್ಯೆ ಇಂಟರ್ಸಿಟಿ ರೈಲು ಆರಂಭಿಸುವಂತೆ ಒತ್ತಾಯಿಸಿ ಸಾಮಾಜಿಕ ಜಾಲತಾಣ ಟ್ವಿಟ್ಟರ್ನಲ್ಲಿ ಕರ್ನಾಟಕ ರೈಲ್ವೆ ಬಳಕೆದಾರರ ವೇದಿಕೆ ಅಭಿಯಾನ ಆರಂಭಿಸಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ರೈಲ್ವೆ ಸಚಿವ ಪಿಯೂಷ್ ಗೋಯಲ್, ಹಿರಿಯ ರೈಲ್ವೆ ಅಧಿಕಾರಿಗಳು ರಾಜ್ಯಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ್ , ಧಾರವಾಡ ಸಂಸದ ಪ್ರಹ್ಲಾದ್ ಜೋಶಿ, ಹಿರಿಯ ರೈಲ್ವೆ ಅಧಿಕಾರಿಗಳು ಮತ್ತು ಈ ಭಾಗದ ಜನಪ್ರತಿನಿಧಿಗಳನ್ನು ಟ್ಯಾಗ್ ಮಾಡಿ ಟ್ವಿಟ್ಟರ್ನಲ್ಲಿ ಅಭಿಯಾನ ಆರಂಭಿಸಿದ್ದಾರೆ.
Pls introduce intercity train btw #Hospete & #Bengaluru early. @BSreeramulu_bjp @drmubl @drmsbc @GMSWR @PiyushGoyal @narendramodi @AnanthKumar_BJP @BSYBJP @DVSBJP @JoshiPralhad @RailwaySeva @RailwayBoard #Karnataka #Hampi pic.twitter.com/qLuTUk7Ezc
— Karnataka Rail Users (@KARailway) June 22, 2018
ಹೊಸಪೇಟೆಯಿಂದ ಬಳ್ಳಾರಿ ಮಾರ್ಗವಾಗಿ ರಾಯದುರ್ಗ, ಚಳ್ಳಕೆರೆ, ಚಿತ್ರದುರ್ಗ, ಚಿಕ್ಕಜಾಜೂರು, ಬೀರೂರು, ಕಡೂರು ಅರಸೀಕೆರೆ ಹಾಗೂ ತುಮಕೂರು ಮೂಲಕ ಬೆಂಗಳೂರನ್ನು ಸಂಪರ್ಕಿಸಲು ನಿತ್ಯ ರೈಲು ಸಂಪರ್ಕ ಆರಂಭಿಸಬೇಕು. ಇದರಿಂದ ವಿಶ್ವವಿಖ್ಯಾತ ತಾಣವಾದ ಹಂಪಿಗೆ ಪ್ರವಾಸಕ್ಕೆ ಬರುವವರಿಗೆ ಅನುಕೂಲವಾಗಲಿದೆ.

ದೇಶವಿದೇಶಗಳಿಂದ ನಿತ್ಯ ಸಹಸ್ರಾರು ಜನರು ಹಂಪಿಗೆ ಭೇಟಿ ನೀಡುತ್ತಿದ್ದು, ರಾಜಧಾನಿ ಬೆಂಗಳೂರಿನಿಂದ ಸರಿಯಾದ ರೈಲು ಸಂಪರ್ಕವಿಲ್ಲ ಹೀಗಾಗಿ ನಿತ್ಯ ಇಂಟರ್ಸಿಟಿ ರೈಲು ಆರಂಭಿಸಿದರೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹಂಪಿ ಅಭಿವೃದ್ಧಿಗೆ ಮತ್ತಷ್ಟು ನೆರವಾಗಲಿದೆ. ಹಾಗೂ ಈ ಭಾಗದ ಪ್ರಯಾಣಿಕರಿಗೂ ಅನುಕೂಲವಾಗಲಿದೆ ಎಂದು ರೈಲ್ವೆ ಬಳಕೆದಾರರ ವೇದಿಕೆ ಟ್ವಿಟ್ಟರ್ ಅಭಿಯಾನ ಆರಂಭಿಸಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications