Get Updates
Get notified of breaking news, exclusive insights, and must-see stories!

ಗಾಂಧಿನಗರದಲ್ಲಿ ದಿನೇಶ್‌ ಗುಂಡೂರಾವ್‌ ಪರ ಮಾರ್ವಾಡಿಗಳ ಪ್ರಚಾರ: 25 ವರ್ಷಗಳ ಬಳಿಕ ಕಾಂಗ್ರೆಸ್‌ ಪರ ರಸ್ತೆಗಿಳಿದ ವ್ಯಾಪಾರಿಗಳು

ಬೆಂಗಳೂರು, ಏಪ್ರಿಲ್‌ 28: ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ, ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡುರಾವ್ ಅವರ ಪರ ಮಾರ್ವಾಡಿ ಸಮುದಾಯದ ಜನರು ಪ್ರಚಾರ ಕೈಗೊಂಡಿದ್ದಾರೆ.

ಈ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ದಿನೇಶ್‌ ಗುಂಡುರಾವ್‌ ಅವರು ನಾನು ಕಳೆದ 25 ವರ್ಷಗಳ ಶಾಸಕನಾಗಿದ್ದಾಗ ಮೊದಲ ಬಾರಿಗೆ ನನ್ನ ಕ್ಷೇತ್ರದ ಮಾರ್ವಾಡಿ ಸಮುದಾಯ ನನ್ನ ಮತ್ತು ಕಾಂಗ್ರೆಸ್‌ ಬೆಂಬಲಕ್ಕೆ ಬೀದಿಗಿಳಿದಿದೆ. ಉತ್ತರ ಭಾರತದ ಸಮುದಾಯಗಳ ಮತಗಳು ನಮ್ಮತ್ತ ವಾಲುತ್ತಿವೆ. ಚಿಕ್ಕಪೇಟೆಯಲ್ಲಿ ಡಿಜಿಆರ್ ಮಾರ್ವಾಡಿ ಬ್ರಿಗೇಡ್ ವತಿಯಿಂದ ಬೃಹತ್ ಮೆರವಣಿಗೆ ಎಂದು ಟ್ವೀಟ್‌ ಮಾಡಿದ್ದಾರೆ.

Campaign of Marwadi community people for dinesh gundurao in Gandhinagar Assembly Constituency

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಭಾರತದಿಂದ ಹಲವಾರು ನಾಯಕರು ಬೆಂಗಳೂರಿನ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಪರ ಪ್ರಚಾರ ಮಾಡಲು ಬಂದಿದ್ದಾರೆ ಎನ್ನಲಾಗುತ್ತಿದೆ. ಆಯಾ ಜನಾಂಗ ನಾಯಕರಿಂದ ಬಿಜೆಪಿ ನಾಯಕರು ಮತಗಳನ್ನು ಸೆಳೆಯಲು ಪ್ರಚಾರ ಮಾಡುತ್ತಿದ್ದಾರೆ. ಸಮಾನ್ಯವಾಗಿ ಉತ್ತರ ಭಾರತದಿಂದ ಬೆಂಗಳೂರಿಗೆ ಬಂದಿರುವ ಸಮುದಾಯಗಳು ಬಿಜೆಪಿಯನ್ನು ಬೆಂಬಲಿಸುತ್ತವೆ ಎನ್ನಲಾಗುತ್ತಿತ್ತು. ಆದರೆ ಈಗ ಕಾಂಗ್ರೆಸ್‌ ಪರ ಪ್ರಚಾರ ಮಾಡುತ್ತಿರುವುದು ಕಾಂಗ್ರೆಸ್‌ ಗೆಲುವಿನ ಸೂಚಕವೇ ಎಂದು ಭಾವಿಸುವಂತಿದೆ.

ಬೆಂಗಳೂರಿನ ಹೃದಯಭಾಗದಲ್ಲಿರುವ ಕ್ಷೇತ್ರ ಗಾಂಧಿನಗರ. ಇಲ್ಲಿ ಮೊದಲಿನಿಂದಲೂ ಕಾಂಗ್ರೆಸ್‌ ಪರ ಇಲೆ ಇದ್ದು ದಿನೇಶ್‌ ಗುಂಡುರಾವ್‌ ಅವರು ಪ್ರಬಲ ನಾಯಕರಾಗಿದ್ದಾರೆ. ಇಲ್ಲಿ ಕನ್ನಡಿಗರಿಗಿಂತ ಅನ್ಯ ಭಾಷೆ ಜನರೇ ಅಧಿಕವಾಗಿದ್ದಾರೆ. ಉದಾಹರಣೆಗೆ ತಮಿಳರು, ಮಾರ್ವಾಡಿಗಳು. ಹೀಗಾಗಿ ಅವರ ಮನಗೆಲ್ಲಲು ದಿನೇಶ್ ಗುಂಡುರಾವ್ ಇಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಾರಿ ಕಾಂಗ್ರೆಸ್‌ನಿಂದ ದಿನೇಶ್ ಗುಂಡುರಾವ್ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಅದಲ್ಲದೆ ಬಿಜೆಪಿಯಿಂದ ಸಪ್ತಗಿರಿಗೌಡ, ನಾರಾಯಣಸ್ವಾಮಿ ಕಣಕ್ಕಿಳಿದಿದ್ದಾರೆ. ಇದಲ್ಲದೆ ದಿನೇಶ್‌ ಗುಂಡುರಾವ್‌ ಅವರಿಗೆ ಸ್ಪರ್ಧಿಯಾಘಿ ಬಂಡಾಯ ಅಭ್ಯರ್ಥಿ ಕೃಷ್ಣಯ್ಯ ಶೆಟ್ಟಿ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮಾರ್ವಾಡಿ ಮತದಾರರು ಅಧಿಕ ಸಂಖ್ಯೆಯಲ್ಲಿದ್ದಾರೆ.

Campaign of Marwadi community people for dinesh gundurao in Gandhinagar Assembly Constituency

ಬೆಂಗಳೂರು ನಗರದ ಹೃದಯ ಭಾಗದ ಗಾಂಧಿ ನಗರ ಕ್ಷೇತ್ರ ವಾಣಿಜ್ಯ, ಸಿನಿಮಾ ಚಟುವಟಿಕೆಗಳ ಮೂಲಕ ಪ್ರಸಿದ್ಧಿ. ನಗರದ ಕೆ. ಎಸ್. ಆರ್.‌ ರೈಲು ನಿಲ್ದಾಣ, ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ನಿಲ್ದಾಣಗಳು ಈ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿಯೇ ಇವೆ. 2008, 2013 ಮತ್ತು 2018ರಲ್ಲಿ ಸತತವಾಗಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್‌ನ ದಿನೇಶ್ ಗುಂಡೂರಾವ್ ಕ್ಷೇತ್ರವನ್ನು ಕಾಂಗ್ರೆಸ್ ಭದ್ರಕೋಟೆಯಾಗಿ ಮಾಡಿದ್ದಾರೆ.

2008ರಲ್ಲಿ 41,188, 2013ರ ಚುನಾವಣೆಯಲ್ಲಿ 54,968 ಮತ್ತು 2018ರ ಚುನಾವಣೆಯಲ್ಲಿ 47,354 ಮತಗಳನ್ನು ಪಡೆದು ಅವರು ಜಯಗಳಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿಯೂ ಸಹ ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ದಿನೇಶ್ ಗುಂಡೂರಾವ್‌ಗೆ ಟಿಕೆಟ್ ನೀಡಿದೆ. ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿ ಕೃಷ್ಣಯ್ಯ ಶೆಟ್ಟಿಗೆ ಅವರು ಪ್ರಬಲ ಎದುರಾಳಿಯಾಗಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+