ಏರ್ಪೋರ್ಟ್ ರನ್ವೇ ಮೇಲೆ ಮ್ಯಾರಥಾನ್: ಭಾರತದಲ್ಲಿ ಮೊದಲು
ಬೆಂಗಳೂರು, ಏಪ್ರಿಲ್ 25: ದೇಶದಲ್ಲೇ ಇದೇ ಮೊದಲ ಬಾರಿಗೆ ವಿಮಾನ ನಿಲ್ದಾಣದಲ್ಲಿರುವ ವಿಮಾನಗಳ ರನ್ ವೇ ಮೇಲೆ ಮ್ಯಾರಥಾನ್ ಆಯೋಜಿಸಲಾಗಿದೆ.
ವಿಮಾನ ನಿಲ್ದಾಣದಲ್ಲಿ ವಿಶಾಲ ರನ್ ವೇಗಳ ಮೇಲೆ ನೂರಾರು ಕಿ.ಮೀ ವೇಏಗದಲ್ಲಿ ವಿಮಾನ ಟೇಕ್ ಆಫ್ ಮತ್ತು ಲ್ಯಾಂಡಿಂಗ್ ಆಗುತ್ತದೆ. ಅಂತಹ ರನ್ ವೇ ಹತ್ತಿರ ಸುಳಿಯಲು ಕೂಡ ಯಾರಿಗೂ ಅವಕಾಶವಿಲ್ಲ. ಆದರೆ, ಮೇ 8ರಂದು ರನ್ ವೇ ಮೇಲೆ ಓಡುವ ಸುವರ್ಣಾವಕಾಶ ಕೆಲವೇ ಜನರಿಗೆ ಸಿಗಲಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಾರಂಭವಾದ ಹತ್ತು ವರ್ಷಗಳ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ರನ್ ವೇ ಮೇಲೆ 10ಕೆ ಓಟವನ್ನು ವಿಮಾನ ನಿಲ್ದಾಣ ಆಡಳಿತ ಮಂಡಳಿ ಆಯೋಜಿಸಿದೆ.

ಮೇ.8ರಂದು ಮಧ್ಯಾಹ್ನ 12.45ರಿಂದ ಮಧ್ಯಾಹ್ನ 2.15ರವರೆಗೆ ರನ್ ವೇ ಮೇಲೆ ಫನ್ ರನ್ ಆಯೋಜನೆ ಮಾಡಲಾಗಿದ್ದು, ಈ ಅವಧಿಯಲ್ಲಿ ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗುತ್ತದೆ. ಈ ಹಿಂದೆ ಮ್ಯಾರಥಾನ್ ಮತ್ತು ಓಟಗಳಲ್ಲಿ ಭಾಗವಹಿಸಿದ ಅನುಭವ ಹೊಂದಿರುವವರು ಈ ವಿಶೇಷ ಓಟದಲ್ಲಿ ಭಾಗವಹಿಸಬಹುದು.
ಕೇವಲ ನೂರು ಜನರಿಗೆ ಮಾತ್ರ ಅವಕಾಶವಿರುತ್ತದೆ. ಏ.30ರೊಳಗಾಗಿ 18 ವರ್ಷ ಮೇಲ್ಪಟ್ಟವರು ತಮ್ಮ ಹೆಸರನ್ನು ಆನ್ ಲೈನ್ ಮೂಲಕ ನೋಂದಾಯಿಸಿಕೊಳ್ಳಬಹುದು. ಲಂಡನ್ ಹಿಥ್ರೊ, ನ್ಯೂಯಾರ್ಕ್ ನ ಜೆ.ಎಫ್ ಕೆನಡಿ ಏರ್ ಪೋರ್ಟ್ ನ ರನ್ ವೇ ಸೇರಿದಂತೆ ಜಗತ್ತಿನ ಕೆಲ ಪ್ರಮುಖ ಏರ್ ಪೋರ್ಟ್ ಗಳ ರನ್ ವೇ ಮೇಲೆ ಓಟ ಆಯೋಜಿಸಲಾಗಿತ್ತು. ಭಾರತದಲ್ಲಿ ಇದೇ ಮೊದಲು.
ಹೆಚ್ಚಿನ ಮಾಹಿತಿಗಾಗಿ-http://www.unitedin10.com/contests/runway
-
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications