ಕಾಂಗ್ರೆಸ್ ಶಾಸಕರೊಬ್ಬರ ಫಾರ್ಮ್ ಹೌಸ್ನಲ್ಲಿ ಕಾರಿನ 1 ಲಕ್ಷ ಮೌಲ್ಯದ 4 ಟೈರ್ಗಳ ಕಳ್ಳತನ
ಬೆಂಗಳೂರು, ಜುಲೈ, 13: ಸಾಮಾನ್ಯ ಜನರ ಕಾರು, ಬೈಕ್ಗಳು ಕಳ್ಳತನ ಆಗುವುದನ್ನು ನಾವು ಕೇಳಿರುತ್ತೇವೆ. ಆದರೆ ಇದೀಗ ವಿಚಿತ್ರ ಎಂಬಂತೆ ಶಾಸಕರೊಬ್ಬರಿಗೆ ಸೇರಿದ ಫಾರ್ಮ್ ಹೌಸ್ನಲ್ಲಿ ಕಾರಿನ ಟೈರ್ಗಳನ್ನು ಕದ್ದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು-ತುಮಕೂರು ಮುಖ್ಯರಸ್ತೆಯ ದಾಸನಾಪುರ ಬಳಿಯಿರುವ ಮಾಜಿ ಸಚಿವ ಹಾಗೂ ಹಳಿಯಾಳ ಕಾಂಗ್ರೆಸ್ ಶಾಸಕ ಆರ್.ವಿ.ದೇಶಪಾಂಡೆ ಅವರ ಫಾರ್ಮ್ಹೌಸ್ನಲ್ಲಿ ಕಳೆದ ಶನಿವಾರ ದುಷ್ಕರ್ಮಿಗಳು ಹೊಸ ಕಾರಿನ ಟೈರ್ಗಳನ್ನು ಕಳ್ಳತನ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಖದೀವರು ಭದ್ರತೆಯ ನಡುವೆಯೂ 4 ರಿಮ್ಗಳ ಕೆಳಗೆ ಇಟ್ಟಿಗೆಗಳನ್ನಿಟ್ಟು ಟೈರ್ಗಳನ್ನು ಕಳ್ಳತನ ಮಾಡಿದ್ದಾರೆ. ಹಿರಿಯ ರಾಜಕಾರಣಿ ದೇಶಪಾಂಡೆ ಅವರ ಪುತ್ರ ಪ್ರಸಾದ್ ಆರ್.ದೇಶಪಾಂಡೆ ಕಾರ್ ಡೀಲರ್ಶಿಪ್ ಹೊಂದಿದ್ದು, ನಗರದ ಮೂರು ಸ್ಥಳಗಳಲ್ಲಿ ಶೋರೂಂಗಳನ್ನು ಹೊಂದಿದ್ದಾರೆ. ಕಂಪನಿಯ ಬಿಡದಿ ಘಟಕದಿಂದ ತರುವ 4 ಚಕ್ರದ ವಾಹನಗಳಿಗೆ ಫಾರ್ಮ್ಹೌಸ್ ಅನ್ನು ಸ್ಟಾಕ್ಯಾರ್ಡ್ನಂತೆ ಬಳಕೆ ಮಾಡಲಾಗುತ್ತದೆ.
ಇನ್ನೂ ಸ್ಟಾಕ್ ಯಾರ್ಡ್ ಉಸ್ತುವಾರಿ ಎ.ಎಸ್.ಹರೀಶ್ ಮಾದನಾಯಕನಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಆಲೂರು ಕ್ರಿಕೆಟ್ ಸ್ಟೇಡಿಯಂ ಬಳಿ ದೇಶಪಾಂಡೆ ಅವರ ಫಾರ್ಮ್ ಹೌಸ್ ಇದ್ದು, ಪ್ರಸಾದ್ ಆರ್ ದೇಶಪಾಂಡೆ ಕಾರು ಆಟೋಮೊಬೈಲ್ ಡೀಲರ್ ಆಗಿದ್ದು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಮತ್ತು ಹೆಬ್ಬಾಳದಲ್ಲಿ ಶೋರೂಂಗಳನ್ನು ಹೊಂದಿದ್ದಾರೆ. ಫಾರ್ಮ್ಹೌಸ್ನಲ್ಲಿ 6 ಮಂದಿ ಸೆಕ್ಯೂರಿಟಿ ಗಾರ್ಡ್ಗಳಿದ್ದು, ಅವರು ದಿನವಿಡೀ ಪಾಳಿಯಲ್ಲಿ ಕೆಲಸ ಮಾಡುತ್ತಾರೆ.
ದುಷ್ಕರ್ಮಿಗಳು ಮ್ಯಾಗ್ ಎಸ್ಯುವಿಯಿಂದ ಟೈರ್ಗಳನ್ನು ಕಳ್ಳತನ ಮಾಡಿದ್ದಾರೆ. ಭದ್ರತಾ ಮೇಲ್ವಿಚಾರಕರು ಸ್ಟಾಕ್ ಯಾರ್ಡ್ನಲ್ಲಿ ಸುತ್ತಾಡಿದಾಗ ರಾತ್ರಿ 10ರಿಂದ ಬೆಳಗ್ಗೆ 8ರ ನಡುವೆ ನಡೆದ ಕಳ್ಳತನ ಬೆಳಕಿಗೆ ಬಂದಿದೆ. ಇನ್ನು ಕಳುವಾದ ಚಕ್ರಗಳ ಬೆಲೆ ಸುಮಾರು 1 ಲಕ್ಷ ರೂಪಾಯಿ ಆಗಿದ್ದು, ಇದುವರೆಗೂ ಯಾವ ಕಳ್ಳರ ಬಂಧನ ಆಗಿಲ್ಲ ಎಂದು ತಿಳಿದುಬಂದಿದೆ.
ಇದೇ ರೀತಿಯ ಘಟನೆ ನಡೆದಿರುವುದು ಇದು ಎರಡನೇ ಬಾರಿ. ಎರಡು ವರ್ಷಗಳ ಹಿಂದೆ ದುಷ್ಕರ್ಮಿಗಳು ದ್ವಿಚಕ್ರ ವಾಹನಗಳ ಟೈರ್ಗಳನ್ನು ಕದ್ದೊಯ್ದಿದ್ದರು. ಒಳಗಿನವರ ಕೈವಾಡದ ಸಾಧ್ಯತೆಯನ್ನು ನಾವು ತಳ್ಳಿಹಾಕುವುದಿಲ್ಲ. ಕಾಂಪೌಂಡ್ ಗೋಡೆಯ ಎತ್ತರವು ತುಂಬಾ ಕಿರಿದಾಗಿರುವುದರಿಂದ ಹೊರಗಿನವರು ಸುಲಭವಾಗಿ ಆವರಣವನ್ನು ಪ್ರವೇಶಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಮಾದನಾಯಕನಹಳ್ಳಿ ಪೊಲೀಸರು ಬಿಎನ್ಎಸ್ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications