ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರತ್ಯೇಕ ರಾಜ್ಯ ಬೇಕು ಎಂದ ಶಾಸಕ ಶ್ರೀರಾಮುಲು ವಿರುದ್ಧ ಕೇಸ್

By Mahesh
|
Google Oneindia Kannada News

ಬೆಂಗಳೂರು, ಆಗಸ್ಟ್ 02: ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಆ ಭಾಗದ ಜನರಿಗೆ ಅನ್ಯಾಯವಾದರೆ ರಾಜೀನಾಮೆ ನೀಡಲು ಸಿದ್ಧ, ಪ್ರತ್ಯೇಕ ರಾಜ್ಯ ಹೋರಾಟದ ನೇತೃತ್ವ ವಹಿಸಲು ಸಿದ್ಧ ಎಂದ್ ಮೊಳಕಾಲ್ಮೂರು ಶಾಸಕ ಬಿ ಶ್ರೀರಾಮುಲು ಅವರು ನೀಡಿದ್ದ ಹೇಳಿಕೆ ವಿರುದ್ಧ ದೂರು ದಾಖಲಾಗಿದೆ.

ತೆಲಂಗಾಣ ಮಾದರಿ ಹೋರಾಟ ಮಾಡುತ್ತೇವೆ. ಹಣ, ಜಾತಿಗೋಸ್ಕರ ಸಿಎಂ ಕುಮಾರಸ್ವಾಮಿ ಅವರು ತಮ್ಮನ್ನು ಮಾರಿಕೊಂಡಿದ್ದಾರೆ. ಉತ್ತರ ಕರ್ನಾಟಕ್ಕೆ ಅನ್ಯಾಯವಾದರೆ ಕ್ರಾಂತಿಯಾಗುತ್ತದೆ ಎಂದಿದ್ದರು.

ಪ್ರತ್ಯೇಕ ರಾಜ್ಯ: ಎಚ್ಡಿಕೆ ವಿರುದ್ಧ ಶ್ರೀರಾಮುಲು ಆಕ್ರೋಶ ಪ್ರತ್ಯೇಕ ರಾಜ್ಯ: ಎಚ್ಡಿಕೆ ವಿರುದ್ಧ ಶ್ರೀರಾಮುಲು ಆಕ್ರೋಶ

"ಮತ ನೀಡಲಿಲ್ಲವೆಂಬ ಕಾರಣಕ್ಕೆ ಉತ್ತರ ಕರ್ನಾಟಕವನ್ನು ಅವಹೇಳನ ಮಾಡುತ್ತಿರುವ ಮುಖ್ಯಮಂತ್ರಿಗಳು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ" ಎಂದು ಬಿಜೆಪಿ ಮುಖಂಡ, ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಹೇಳಿದ್ದಾರೆ.

Case filed against MLA B Sriramulu Malleswaram Police station

ಪ್ರತ್ಯೇಕ ರಾಜ್ಯ ಸ್ಥಾನಮಾನ ನೀಡುವ ಕುರಿತು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಶಾಸಕ ಬಿ.ಶ್ರೀರಾಮುಲು ವಿರುದ್ಧ ಕನ್ನಡ ಅನುಷ್ಠಾನ ಮಂಡಳಿಯ ಸದಸ್ಯರು, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಜುಲೈ 27ರಂದು ಬಳ್ಳಾರಿಯ ವೇದಿಕೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶ್ರೀರಾಮುಲು, ಉತ್ತರ ಕರ್ನಾ ಟಕ ಪ್ರತ್ಯೇಕ ರಾಜ್ಯಕ್ಕಾಗಿ ತೆಲಂಗಾಣದ ಮಾದರಿಯಲ್ಲಿ ಹೋರಾಟ ಮಾಡಬೇಕು ಆರಂಭಿಸಬೇಕು. ಇದಕ್ಕಾಗಿ ಆಗಸ್ಟ್ 2ರಂದು ಪ್ರತ್ಯೇಕ ಉತ್ತರ ಕರ್ನಾಟಕ ಬಂದ್ಗೆ ಕೂಡಾ ಕರೆ ನೀಡಿದ್ದರು.

ಬಿ.ಶ್ರೀರಾಮುಲು ಅವರು ಅಧಿಕಾರಯುತ ಹಾಗೂ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಈ ರೀತಿ ಮಾತನಾಡಿರೋದು ತಪ್ಪು ಎಂದು ಕರ್ನಾಟಕ ರಾಜ್ಯ ಪುನರ್ ವಿಂಗಡಣೆ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಿದ್ದಾರೆ.

ಅಖಂಡ ಕರ್ನಾಟಕದ ಏಕತೆಗೆ ಧಕ್ಕೆ ತರುವ ಹೇಳಿಕೆ ನೀಡಿದ ಶ್ರೀರಾಮುಲು ವಿರುದ್ಧ ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು ಎಂದು ಸಂಘಟಕ ಪ್ರಸಾದ್ ಎಂಬುವರು ಆಗ್ರಹಿಸಿದ್ದಾರೆ.

English summary
A case filed against MLA B Sriramuluin Malleswaram Police station by Kannada activist group. B Sriramulu is making provoking statements and causing damage to integrity of the state said activists.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X