S.S. Mallikarjun: ಜಾತಿ ನಿಂದನೆ: ಉಪೇಂದ್ರ ಆಯ್ತು ಈಗ ಈ ಸಚಿವರ ವಿರುದ್ಧ ದೂರು
ಬೆಂಗಳೂರು, ಆಗಸ್ಟ್ 15: ದಲಿತರ ಜಾತಿ ನಿಂದನೆ ಆರೋಪದಲ್ಲಿ ಮೊನ್ನೆಯಷ್ಟೇ ನಟ, ನಿರ್ದೇಶಕ ಮತ್ತು ಪ್ರಜಾಕೀಯ ಪಕ್ಷದ ಸಂಸ್ಥಾಪಕ ವಿರುದ್ಧ ದೂರು ದಾಖಲಾಗಿತ್ತು. ಇದರ ಬೆನ್ನಲ್ಲೆ ಕಾಂಗ್ರೆಸ್ ಸಚಿವರೊಬ್ಬರು ಮತ್ತದೇ 'ಪದ' ಬಳಕೆ ಮಾಡಿ ಜಾತಿ ನಿಂದಿಸಿದ್ದಾರೆ ಎಂದು ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ನಟ ಉಪೇಂದ್ರ ಅವರು ಪ್ರಜಾಕೀಯ ಕುರಿತು ಲೈವ್ನಲ್ಲಿ ಮಾತನಾಡುವಾಗ 'ಊರು ಅಂದ ಮೇಲೆ ಹೊಲಗೇರಿ' ಇದ್ದೆ ಇರುತ್ತದೆ ಎಂದು ಹೇಳಿದ್ದರು. ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಅವರ ಬೆನ್ನಲ್ಲೆ ಕಾಂಗ್ರೆಸ್ನ ಹಾಲಿ ತೋಟಗಾರಿಕೆ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಅವರು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ದೂರು ದಾಖಲಿಸಲಾಗಿದೆ.

ಸದ್ಯ ಈ ವಿಚಾರ ಕುರಿತು ಧ್ವನಿ ಎತ್ತಿರುವ ನಟ ಉಪೇಂದ್ರ ಬೆಂಬಲಿಗರು ಮತ್ತು 'ಪ್ರಜಾಕೀಯ' ಕಾರ್ಯಕರ್ತರು, ನಿಮಗೆ ತಾಕತ್ತು ಇದ್ದರೆ ಸಚಿವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಿ ಎಂದು ಸವಾಲು ಹಾಕಿದ್ದಾರೆ.
ಸಚಿವರಿಂದ ಆಕ್ಷೇಪಾರ್ಹ ಹೇಳಿಕೆ: ಸ್ಪಷ್ಟನೆ
ಎಸ್.ಎಸ್.ಮಲ್ಲಿಕಾರ್ಜುನ್ ಅವರು ದಾವಣಗೆರೆ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕರು, ಈಗ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಅವರು ಮೂರು ತಿಂಗಳ ಹಿಂದೆ ಸಚಿವರನ್ನು ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಸಂದರ್ಶನ ನಡೆಸಿದ್ದರು. ಈ ವೇಳೆ ಕಾಮಗಾರಿ ವಿಚಾರವಾಗಿ ಸರ್ಕಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ಊರನ್ನು ಹೊಲಗೇರಿ ಮಾಡಬೇಡಿ ಎಂದು ಬೈದಿದ್ದೆ ಎಂದು ಸಚಿವರು ಹೇಳಿದ್ದರು.

ಈ ಹಳೇ ವಿಡಿಯೋ ಯೂಟ್ಯೂಬ್ನಲ್ಲಿ ಅಪ್ಲೋಡ್ ಆಗಿತ್ತು. ಇದೀಗ ಆ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಇತ್ತ ಈ ವಿಷಯ ಗೊತ್ತಾಗುತ್ತಿದ್ದಂತೆ ಸ್ಪಷ್ಟನೆ ನೀಡಿದ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ನಾನು ಆಕ್ಷೇಪಾರ್ಹ ಹೇಳಿಕೆ ನೀಡಿಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸದ್ಯ ಈ ಸಂಬಂಧ ಸಚಿವರ ವಿರುದ್ಧ ರಾಜಾಜಿನಗರ ಪೊಲೀಸ್ NCR ದಾಖಲಿಸಿಕೊಂಡಿದ್ದಾರೆ.
ವಿವಿಧ ಠಾಣೆಗಳಲ್ಲಿ ಉಪೇಂದ್ರ ವಿರುದ್ಧ ದೂರು: ಹೈ ತಡೆ
ನಟ ಉಪೇಂದ್ರ ಅವರು ಆಕ್ಷೇಪಾರ್ಹ ಹೇಳಿಕೆ ನೀಡುತ್ತಿದ್ದಂತೆ ಅವರ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದ್ದವು. ಈ ಸಂಬಂಧ ಹೇಳಿಕೆ ನೀಡುವಂತೆ ಪೊಲೀಸರು ಕೇಳಿಕೊಂಡರು ಸಹಿತ ಉಪೇಂದ್ರ ಅವರಿಂದ ಉತ್ತರ ಬರಲಿಲ್ಲ. ಅವರು ಮೊಬೈಲ್ ಸ್ವಿಚ್ ಆಫ್ ಮಾಡಿದ್ದರು, ಎರಡು ದಿನ ಯಾರ ಕೈಗೂ ಸಿಕ್ಕಿರಲಿಲ್ಲ. ಚೆನ್ನಮ್ಮನ ಅಚ್ಚುಕಟ್ಟು ಪೊಲೀಸರು ಅವರ ನಿವಾಸಕ್ಕೆ ತೆರಳಿದ್ದರು ಅವರ ಸುಳಿವು ಸಿಕ್ಕಿರಲಿಲ್ಲ.
ಇದೇ ವೇಳೆ ಪ್ರಕರಣ ಸಂಬಂಧ ಅಟ್ರಾಸಿಟಿ ಕಾಯ್ದೆಯಡಿ ಉಪೇಂದ್ರ ವಿರುದ್ಧ ಎಫ್ಐಆರ್ ದಾಖಲಿಸಲು ರಾಜ್ಯ ಹೈಕೋರ್ಟ್ ತಡೆ ನೀಡಿತು. ಒಂದು ಪದ ಬಳಕೆಗೆ ಇಷ್ಟೊಂದು ಎಫ್ಐಆರ್? ಎಂದು ಪ್ರಶ್ನಿಸಿದರು. ಬಳಿಕ ವಕೀಲರ ವಾದ ಆಲಿಸಿದ ನ್ಯಾಯಪೀಠ ತಡೆಯಾಜ್ಞೆ ನೀಡಿತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications