ಕಾವೇರಿ ನೀರು ಬಿಡದಿರುವ ಬಗ್ಗೆ ಸೆ. 23ರಂದು ಅಧಿಕೃತ ಪ್ರಕಟಣೆ
ಬೆಂಗಳೂರು, ಸೆ. 22: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ನ್ಯಾಯಯುತವಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಬೇಡ. ತಮಿಳುನಾಡಿಗೆ ನೀರು ಬಿಡುವ ಅಗತ್ಯವಿಲ್ಲ ಎಂಬ ಒಮ್ಮತದ ನಿರ್ಧಾರವನ್ನು ವಿಶೇಷ ಅಧಿವೇಶನದ ನಂತರ ಪ್ರಕಟಿಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.[ಬಿಜೆಪಿ ನಾಯಕರೇ ನೀವಿಟ್ಟ ಹೆಜ್ಜೆ ತಪ್ಪು!]
ರಾಜ್ಯಪಾಲರಾದ ವಜುಭಾಯಿವಾಲಾ ಅವರನ್ನು ರಾಜಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭೇಟಿ ಮಾಡಿದರು. ಕಾವೇರಿ ನದಿ ನೀರು ವಿವಾದ ಮತ್ತು ಶುಕ್ರವಾರ ವಿಧಾನ ಮಂಡಲ ಅಧಿವೇಶನ ಕರೆದಿರುವ ಕುರಿತು ಚರ್ಚೆ ನಡೆಸಿದರು. ಸಚಿವರಾದ ಮಹದೇವಪ್ಪ, ಮಹದೇವಪ್ರಸಾದ್, ಜಯಚಂದ್ರ ಮತ್ತಿತರರು ಇದ್ದರು.[ಕಾವೇರಿ ನಿರ್ವಹಣಾ ಮಂಡಳಿ ರಚನೆಯಾದ್ರೆ, ಏನಾಗುತ್ತೆ?]

ಸೆಪ್ಟೆಂಬರ್ 23ರಂದು ವಿಶೇಷ ಅಧಿವೇಶನ ಕರೆಯುವಂತೆ ಕೋರಿ ರಾಜ್ಯಪಾಲ ವಜುಭಾಯಿ ವಾಲರನ್ನು ಗುರುವಾರ ಬೆಳಗ್ಗೆ ಭೇಟಿ ಮಾಡಿದರು. ಸೆ.23ರ ಅಧಿವೇಶನ ಮುಗಿಯುವ ತನಕ ಕಾವೇರಿ ನೀರು ಹರಿಸದಿರಲು ನಿರ್ಧರಿಸಲಾಗಿದೆ ಎಂದು ಸಿಎಂ ಹೇಳಿದರು.[ಬಂಗಾರಪ್ಪ ಬಗ್ಗೆ ಮಾತನಾಡ್ತೀರಿ, 1995ರಲ್ಲಿ ಪರಿಸ್ಥಿತಿ ಗೊತ್ತೇನ್ರಿ']
ನಂತರ ಮಾಜಿ ಮುಖ್ಯಮಂತ್ರಿ ಎಸ್ಸೆಂಕೃಷ್ಣರನ್ನು ಭೇಟಿ ಮಾಡಿ ಅವರ ಸಲಹೆ ಪಡೆದುಕೊಂಡರು. ಮಧ್ಯಾಹ್ನದ ನಂತರ ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ ಅವರು ಎಐಸಿಸಿ ಮುಖಂಡರನ್ನು ಭೇಟಿ ಮಾಡಿ, ಕರ್ನಾಟಕದ ನಿಲುವನ್ನು ತಿಳಿಸಲಿದ್ದಾರೆ.[ಕಾವೇರಿಗಾಗಿ ಕೋಪ ಮರೆತು ಗೌಡ್ರ ಮನೆಗೆ ಬಂದ ಸಿದ್ದರಾಮಯ್ಯ]
ಈ ನಡುವೆ ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಬಿಗಿ ಬಂದೋಬಸ್ತ್ ಮುಂದುವರೆಸಲಾಗಿದೆ. ಬೆಂಗಳೂರಿನಲ್ಲಿ ಮದ್ಯ ರಹಿತ ದಿನಗಳು ಸೆಪ್ಟೆಂಬರ್ 22 ರಿಂದ 25ರ ತನಕ ಮುಂದುವರೆಯಲಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್ ಎಸ್ ಮೇಘರಿಕ್ ಹೇಳಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications