ಕಾವೇರಿ: ಬೆಂಗಳೂರಿನಲ್ಲಿ ಅ.16ಕ್ಕೆ 'ಕರಾಳ ದಿನಾಚರಣೆ ಹಾಗೂ ಕಪ್ಪುಬಾವುಟ ಪ್ರದರ್ಶನ'
ಬೆಂಗಳೂರು, ಅಕ್ಟೋಬರ್ 15: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಇತ್ತೀಚೆಗೆ ಎರಡು ಬಂದ್ ಕಂಡಿರುವ ಬೆಂಗಳೂರು ನಾಳೆ ಸೋಮವಾರ (ಅ.16)ರಂದು ಮತ್ತೊಂದು ಹೋರಾಟಕ್ಕೆ ಸಾಕ್ಷಿಯಾಗಲಿದೆ. ಮಧ್ಯಾಹ್ನ 12 ಗಂಟೆಗೆ ಕಾವೇರಿ ವಿಚಾರದಲ್ಲಿನ ಅನ್ಯಾಯ ಖಂಡಿಸಿ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದೆ.
ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಸೋಮವಾರ 'ಕರಾಳ ದಿನಾಚರಣೆ ಹಾಗೂ ಕಪ್ಪುಬಾವುಟ ಪ್ರದರ್ಶನ' ನಡೆಯಲಿದೆ. ಈ ಮೂಲಕ ರಾಜ್ಯ ಬಿಜೆಪಿ ವಿರುದ್ಧ ಹಾಗೂ ಕೆಂದ್ರ ಸರ್ಕಾರದ ಕಡೆಗಣನೆ ವಿರುದ್ಧ ಆಕ್ರೋಶ ವ್ಯಕ್ತವಾಗಲಿದೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ಕಾವೇರಿ ನೀರು ನಿರ್ವಹಣಾ ಸಮಿತಿಯಿಂದ ನಮಗೆ ತೀವ್ರವಾಗಿ ಅನ್ಯಾಯವಾಗಿದೆ. ಇತ್ತ ಕೇಂದ್ರ ಸರ್ಕಾರ ಸಹ ನಮ್ಮನ್ನು ಕಡೆಗಾಣಿಸಿದ್ದಾರೆ. ನಮ್ಮ ಲೋಕಸಭಾ ಸದಸ್ಯರು ಸಂಪೂರ್ಣ ವಿಫಲರಾಗಿದ್ದಾರೆ. ರಾಜ್ಯ ಸರ್ಕಾರ ಯಾವ ಅಡ್ಡಿ ಆತಂಕವಿಲ್ಲದೇ ನೀರನ್ನು ಬಿಡುತ್ತಿದ್ದಾರೆ ಎಂದು ವಾಟಾಳ್ ನಾಗರಾಜ್ ಅವರು ಕಿರಿ ಕಾರಿದರು.
ನೀರಿಲ್ಲದೇ ಜನರು, ರೈತರು ತತ್ತರ
ಕರ್ನಾಟಕಕ್ಕೆ, ಕನ್ನಡಿಗರಿಗೆ ಯಾರಿಂದಲೂ ರಕ್ಷಣೆ ಇಲ್ಲ, ಎಲ್ಲವೂ ನಾಟಕೀಯ, ಕನ್ನಡಪರ ಸಂಘಟನೆಗಳು ನಿರಂತರವಾಗಿ ಹೋರಾಟ ಮಾಡುತ್ತಲೇ ಬಂದಿದ್ದಾರೆ. ನಮಗೆ ನಿರಂತವಾಗಿ ಅನ್ಯಾಯವಾಗುತ್ತಿದೆ. ಕೆಆರ್ಎಸ್ನಲ್ಲಿ ನೀರಿಲ್ಲ. ಕಬಿನಿ, ಹಾರಂಗಿ, ಹೇಮಾವತಿಯಲ್ಲೂ ನೀರಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.
ಬೆಂಗಳೂರಿಗೆ ಕುಡಿಯುವ ನೀರು ನಿಲ್ಲುವ ಸೂಚನೆ ಇದೆ. ಹೀಗಾದರೆ ಮುಂದೆ ಬೆಂಗಳೂರಿನ ಜನರ ಗತಿ ಏನು ? ನೀರಿಲ್ಲದೆ ಒಣಗುತ್ತಿರುವ ನಮ್ಮ ರೈತರ ಗತಿ ಏನು? ಎಂದು ಪ್ರಶ್ನಿಸಿದರು. ಕರ್ನಾಟಕ ರಾಜ್ಯ ಕಗ್ಗತ್ತಿನಲ್ಲಿದೆ. ಕರ್ನಾಟಕದಲ್ಲಿ ಬೆಳಕಿದ್ದರೂ ಬೆಳಕಿಲ್ಲದಂತಾಗಿದೆ. ಕಾವೇರಿ ನೀರು ಬಿಡಬೇಡಿ ಎಂದು ಒತ್ತಾಯಿಸಿ, ಈ ಹೋರಾಟ ಮಾಡಲಿದ್ದೇವೆ ಎಂದು ಅವರು 'ಕನ್ನಡ ಒಕ್ಕೂಟ-ಕರ್ನಾಟಕ ರಾಜ್ಯ'ದ ಪ್ರಕಟಣೆಯಲ್ಲಿ ಅವರು ತಿಳಿಸಿದರು.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್












Click it and Unblock the Notifications