ಅಮೆರಿಕದ 'ಅಕ್ಕ' ನವರ ಅಕ್ಕರೆಗೆ ಮನಸೋತ ಅಂಬರೀಷ
ಬೆಂಗಳೂರು, ಸೆ. 29: ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ನ್ಯಾಯಕ್ಕಾಗಿ ಮಂಡ್ಯದ ಜನತೆ ಪ್ರತಿಭಟನೆ ನಿರತರಾಗಿದ್ದಾಗ ಮಂಡ್ಯದ ಗಂಡು ಎಲ್ಲಿದ್ದರು? ವಿಷಯ ತಿಳಿದ ಮೇಲೂ ಅಮೆರಿಕದಲ್ಲೇ ಏಕೆ ನೆಲೆಸಿದ್ದರು? ಎಂಬ ಪ್ರಶ್ನೆಗಳಿಗೆ ಬುಧವಾರ ವಿಸ್ತಾರವಾಗಿ ಉತ್ತರ ಸಿಕ್ಕಿದೆ.
ಅಕ್ಕ ಸಮ್ಮೇಳನದ ಬಗ್ಗೆ ಹೊಗಳಿಕೆ: ಕಳೆದ ಹದಿನೈದು ವರ್ಷಗಳಿಂದ ಅಮೇರಿಕದಲ್ಲಿ ನೆಲೆಸಿರುವ ಕನ್ನಡಿಗರು 'ಅಕ್ಕ' ಸಮ್ಮೇಳನಕ್ಕೆ ನನ್ನನ್ನು ಕರೆಯುತ್ತಿದ್ದರು. ಆದರೆ, ನನಗೆ ಹೋಗಲು ಆಗಿರಲಿಲ್ಲ. ನನಗೀಗ ವಯಸ್ಸು 64. ನಾನು ಈ ವಯಸ್ಸಿನಲ್ಲಿ ಅಮೆರಿಕಕ್ಕೆ ಮೋಜು ಮಾಡಲು ಹೋಗಿರ್ಲಿಲ್ಲ. ಕನ್ನಡ ಜನತೆಯ ಆಸೆ, ಆಕಾಂಕ್ಷೆಯನ್ನ ತಲುಪಿಸಲು ಹೋಗಿದ್ದೆ.[ ದಯವಿಟ್ಟು ಕ್ಷಮಿಸಿ ಎಂದು ಕನ್ನಡಿಗರ ಮುಂದೆ ಕೈಮುಗಿದ ಅಂಬಿ]
ಅಮೇರಿಕಾದ ಮೂರು ಕನ್ನಡ ಬಳಗಕ್ಕೆ ನಾನು ಒಪ್ಪಿಕೊಂಡಿದ್ದೆ. ಅಟ್ಲಾಂಟಿಕ್ ಸಿಟಿ, ಫೀನಿಕ್ಸ್ ಮತ್ತು ಬಾಲ್ಟಿಮೋರ್ ನ ಎಲ್ಲಾ ಕನ್ನಡಿಗರು ಬಹಳ ಸಂತೋಷ ವ್ಯಕ್ತಪಡಿಸಿದ್ದರು. ನನ್ನ ಜೊತೆ ಅನೇಕ ಕಲಾವಿದರು ಭಾಗವಹಿಸಿದ್ದರು. ಅದಕ್ಕೆ ನನ್ನ ಸಹನಟರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಅವರ ಬಿಜಿ ಶೆಡ್ಯೂಲ್ ಏನೇ ಇದ್ದರೂ, ನನಗಾಗಿ ಬಂದು 'ಅಂಬಿ ವೈಭವ' ಕಾರ್ಯಕ್ರಮವನ್ನ ಮಾಡಿದರು. ಅಮೆರಿಕ ಕನ್ನಡಿಗರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ.ಎಂದರು.

ಕಾವೇರಿ ವಿವಾದ ಹೊಸದಲ್ಲ. ತುಂಬಾ ವರ್ಷಗಳಿಂದ ನಡೆಯುತ್ತಿದೆ. ಕರ್ನಾಟಕಕ್ಕೆ ಹೀಗೆ ಪದೇ ಪದೇ ಅನ್ಯಾಯ ಆಗುತ್ತಿರುವುದು ದುರಾದೃಷ್ಟಕರ. ಇದು ನಮ್ಮ ದೌರ್ಭಾಗ್ಯ.
ಖಳನಟನಾಗಿ, ಪೋಷಕ ನಟನಾಗಿ, ನಾಯಕ ನಟನಾಗಿ ಇವತ್ತಿನ ದಿನ ಅಬ್ದುಲ್ ಕಲಾಂ ಮುಂದೆ ನಿಂತು ಪ್ರಮಾಣ ವಚನ ಸ್ವೀಕರಿಸಿ, ಇಲ್ಲಿ ಬಂದು ಸಚಿವ ಸಂಪುಟದಲ್ಲಿ ಕೆಲಸ ಮಾಡಿದ್ದೀನಿ. ಅಧಿಕಾರಕ್ಕಾಗಿ ಅಥವಾ ಹಣದ ಆಸೆಗಾಗಿ ನಾನು ಕೆಲಸ ಮಾಡಿಲ್ಲ.
ನೂರು ಜನ ರಾಜಕಾರಣಿಗಳು ಬಂದರೂ ಕಾವೇರಿ ಸಮಸ್ಯೆ ಬಗೆಹರಿಸಲು ಸಾಧ್ಯ ಇಲ್ಲ. ಎರಡೂ ರಾಜ್ಯಗಳ ರೈತರಿಗೆ ಬಿಟ್ಟುಬಿಟ್ಟರೆ ಸಮಸ್ಯೆ ಸುಲಭವಾಗಿ ಮುಗಿದುಹೋಗುತ್ತದೆ ಅಂತ 2006ರಲ್ಲಿ ಪ್ರಧಾನ ಮಂತ್ರಿಗಳಿಗೆ ನಾನು ಹೇಳಿದ್ದೆ.
ಪ್ರಕೃತಿಗೆ ಬ್ಯಾರೋಮೀಟರ್ ಫಿಕ್ಸ್ ಮಾಡಲು ಸಾಧ್ಯ ಇಲ್ಲ. 1924 ಅಗ್ರೀಮೆಂಟ್ ಬಗ್ಗೆ ನನಗೆ ಸಮ್ಮತ ಇಲ್ಲ. ದುಡ್ಡು ಆಗಿದ್ದರೆ ಬ್ಯಾಂಕ್ ನಿಂದ ಸಾಲ ಮಾಡಿ ತರಬಹುದು. ಆದ್ರೆ ನೀರನ್ನ ಸಾಲ ತರೋಕೆ ಆಗಲ್ಲ. ನೀರನ್ನ ಸೃಷ್ಟಿ ಮಾಡಲು ಸಾಧ್ಯವಿಲ್ಲ. ಮಳೆ ಬಾರದೇ ಇರುವಾಗ ಡಿಸ್ಟ್ರೆಸ್ ಫಾರ್ಮುಲಾ ಜಾರಿಗೆ ತರಬೇಕು.
ಬೇಕಾದಷ್ಟು ಜನ ನನ್ನ ಮೇಲೆ ತುಂಬಾ ಮಾತನಾಡಿದ್ದಾರೆ. ಮಾತನಾಡುವವರ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ. ನಮ್ಮ ಮನಸ್ಸಲ್ಲಿ ಇರುವುದನ್ನ ನಾವು ಹೇಳಬಹುದು ಅಷ್ಟೆ. ಮಾಧ್ಯಮಗಳಲ್ಲಿ ನನ್ನ ಬಗ್ಗೆ ಬಂದಿರುವ ಬಗ್ಗೆ ಕೂಡ ನಾನು ಉತ್ತರ ಕೊಡಲು ತಯಾರಿಲ್ಲ.
ನಾನು ಇವತ್ತಿನ ಈ ಮಟ್ಟಕ್ಕೆ ಬರಬೇಕಾದರೆ ಮಂಡ್ಯ ಜನತೆಯ ಆಶೀರ್ವಾದ, ಅಭಿಮಾನ, ಪ್ರೀತಿ ಕಾರಣ. ಅವರ ಮೇಲೆ ಗೌರವ ನನಗೆ ಇದ್ದೇ ಇದೆ. ಹನುಮಂತನ ತರಹ ನಾನು ಎದೆ ಬಗಿದು ತೋರಿಸಲು ಸಾಧ್ಯವಿಲ್ಲ.
ಕಾವೇರಿ ಹೋರಾಟದಲ್ಲಿ ಸಕ್ರಿಯವಾಗಿ ನಾನು ಭಾಗವಹಿಸದೇ ಇರಲು ಕಾರಣ ಏನಪ್ಪಾ ಅಂದ್ರೆ ಕನ್ನಡಿಗರ ಪ್ರೀತಿ, ವಿಶ್ವಾಸ, ಆಸೆ. ಅದಕ್ಕಾಗಿ ನಾನು ಅಮೇರಿಕಾಗೆ ಹೋಗಿದ್ದೇ ಹೊರತು ಮೋಜು ಮಾಡಲು ಅಲ್ಲ. ಐಷಾರಾಮಿ ಜೀವನ ಮಾಡಲು ಹೋಗಿರ್ಲಿಲ್ಲ. ಕಾವೇರಿ ಹೋರಾಟದಲ್ಲಿ ನಾನು ಭಾಗವಹಿಸಲಿಲ್ಲ ಎಂಬ ದುಃಖ ಕೂಡ ನನ್ನಲ್ಲಿ ಇದೆ ಎಂದಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications