ಕಾವೇರಿ ಸಮಸ್ಯೆ: ನೀರು ಬಿಡದಂತೆ ಆಗ್ರಹಿಸಿ ಇಂದು ಮಧ್ಯಾಹ್ನ 'ವಿಧಾನಸೌಧ ಮುತ್ತಿಗೆ', ವಿವರ
ಬೆಂಗಳೂರು, ಅಕ್ಟೋಬರ್ 17: ಕಾವೇರಿ ನೀರು ಹಂಚಿಕೆ ವಿರುದ್ಧ ಸರ್ಕಾರದ ಮೇಲಿನ ಆಕ್ರೋಶ ಮುಂದುವರಿದಿದೆ. ಅನೇಕ ಕಡೆಗಳಲ್ಲಿ ಪ್ರತಿಭಟನೆ ಬಳಿಕವು ಸ್ಪಂದಿಸದ ರಾಜ್ಯ ಸರ್ಕಾರದ ವಿರುದ್ಧ ಇಂದು ಮಂಗಳವಾರ ಮಧ್ಯಾಹ್ನ 'ಕನ್ನಡ ಒಕ್ಕೂಟ-ಕರ್ನಾಟಕ ರಾಜ್ಯ' ವತಿಯಿಂದ ಹೋರಾಟಗಾರರು ವಿಧಾನಸೌಧ ಮುತ್ತಿಗೆ ಹಾಕಲಿದ್ದಾರೆ.
ಕಾವೇರಿ ನೀರನ್ನ ತಮಿಳುನಾಡಿಗೆ ಹರಿಸದಂತೆ ಒತ್ತಾಯಿಸಿದ ಕನ್ನಡ ಚಳವಳಿ ವಾಟಾಳ್ ಪಕ್ಷ ಮತ್ತು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ವಿಧಾನಸೌಧ ಮುತ್ತಿಗೆ ಹಾಕಲು ಕನ್ನಡಪರ ಸಂಘಟನೆ ಮುಖಂಡರು ಮತ್ತು ಕಾರ್ಯಕರ್ತರು ಸಜ್ಜಾಗಿದ್ದಾರೆ.

ಇದಕ್ಕೂ ಮೊದಲು ಮೊದಲು ಕನ್ನಡ ಒಕ್ಕೂಟದ ಆಶ್ರಯದಲ್ಲಿ ದೇವರಾಜ ಅರಸು ಅವರ ಪ್ರತಿಮೆಯಿಂದ ಹೊರಟು ನೇರವಾಗಿ ವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದು ವಾಟಾಳ್ ನಾಗರಾಜ್ ಅವರು ತಿಳಿಸಿದ್ದಾರೆ.
ಕಾವೇರಿ ಜಲಾಶಯದಲ್ಲಿ ನೀರಿಲ್ಲದೇ ಬಣಗುಡುತ್ತಿದೆ. ತಮಿಳುನಾಡಿಗೆ ಬಿಡುತ್ತಿರುವ ನೀರನ್ನು ಕೂಡಲೇ ನಿಲ್ಲಿಸಿ. ತುರ್ತು ವಿಧಾನಸಭೆ ಕರೆದು, ಸರ್ವಾನುಮತದಿಂದ ನಿರ್ಣಯ ಮಾಡಿ. ಲೋಕಸಭಾ ಸದಸ್ಯರು ಕೂಡಲೇ ರಾಜೀನಾಮೆ ನೀಡಬೇಕು. ಕಾವೇರಿ ಪ್ರಾಧಿಕಾರ ಮತ್ತು ಕಾವೇರಿ ನೀರು ನಿರ್ವಹಣಾ ಸಮಿತಿ ನಮಗೆ ತೀವ್ರ ಅನ್ಯಾಯ ಮಾಡಿದ್ದಾರೆ. ಕೇಂದ್ರ ಸರ್ಕಾರ ನಮ್ಮನ್ನು ಕಡೆಗಣಿಸಿದೆ. ಇತ್ತ ರಾಜ್ಯ ಸರ್ಕಾರ ಯಾವುದೇ ಅಡ್ಡಿ ಆತಂಕ ಇಲ್ಲದೇ ನೀರು ಬಿಡುತ್ತಿದ್ದಾರೆ.
ಇದರ ವಿರುದ್ಧ ನಾವು ಹೋರಾಟ ನಡೆಸಲಿದ್ದೇವೆ. ಅದರ ಭಾಗವಾಗೇ ಇಂದು ವಿಧಾನಸೌಧ ಮುತ್ತಿಗೆ ಹಾಕುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಲಿದ್ದೇವೆ ಎಂದರು.
ಈ ವೇಳೆ ಒಕ್ಕೂಟದ ಮುಖಂಡರು, ಡಾ.ರಾಜ್ ಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷ ಡಾ.ಸಾ.ರಾ. ಗೋವಿಂದು, ಕನ್ನಡ ಸೇನೆ ರಾಜ್ಯಾಧ್ಯಕ್ಷ ಕುಮಾರ್.ಕೆ.ಆರ್, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಶಿವರಾಮೇಗೌಡ, ಪ್ರವೀಣ್ ಶೆಟ್ಟಿ, ಕನ್ನಡ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಮಂಜುನಾಥ್ ದೇವ್, ಎಚ್ವಿ ಗಿರೀಶ್ ಗೌಡ ಸೇರಿದಂತೆ ಕನ್ನಡಪರ ಸಂಘಟನೆಗಳು, ಕನ್ನಡಿಗರು ಪಾಲ್ಗೊಳ್ಳಲಿದ್ದಾರೆ ಸಂಘಟನೆಯ ಪ್ರಕಟಣೆ ತಿಳಿಸಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications