ಕಾವೇರಿ ಅಂತಿಮ ತೀರ್ಪು: ಬೆಂಗಳೂರಿಗೆ 4.75 ಟಿಎಂಸಿ ಹೆಚ್ಚುವರಿ ನೀರು
ಬೆಂಗಳೂರು, ಫೆಬ್ರವರಿ 16 : ಕರ್ನಾಟಕದ ಜನತೆ ಕಾತುರದಿಂದ ಕಾಯುತ್ತಿದ್ದ ಕಾವೇರಿ ನದಿಯ ಅಂತಿಮ ತೀರ್ಪು ಹೊರಬಿದ್ದಿದೆ. ಬೆಂಗಳೂರಿಗೆ 4.75 ಹೆಚ್ಚುವರಿ ಟಿಎಂಸಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.
ಸಿಜೆಐ ದೀಪಕ್ ಮಿಶ್ರಾ ಅವರಿದ್ದ ಪೀಠದಿಂದ ತೀರ್ಪು ಹೊರಬಿದ್ದಿದೆ.
ಬೆಂಗಳೂರಿಗೆ 4.75 ಟಿಎಂಸಿ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವಂತೆ ಆದೇಶ ನೀಡಿದ್ದು ಈ ಹಿಂದೆ 7.5 ಟಿಎಂಸಿ ನೀರನ್ನು ಬೆಂಗಳೂರಿಗೆ ನೀಡಲಾಗುತ್ತಿತ್ತು. 30 ಟಿಎಂಸಿ ನೀರು ಬಿಡುಗಡೆ ಮಾಡಬೇಕೆಂದು ಮನವಿ ಮಾಡಲಾಗಿತ್ತು.

15 ವರ್ಷಗಳ ಬಳಿಕ ಸುಪ್ರೀಂಕೋರ್ಟ್ ತೀರ್ಪನ್ನು ಮರುಪರಿಶೀಲಿಸಬಹುದು. 1892 ಹಾಗೂ 1924 ಎರಡೂ ಒಪ್ಪಂದಗಳು ಸಿಂಧು ಎಂದು ಸುಪ್ರೀಂಕೋರ್ಟ್ ಹೇಳಿದೆ. ರಾಜ್ಯದ ವಾದವನ್ನು ಸುಪ್ರೀಂಕೋರ್ಟ್ ಭಾಗಶಃ ಎತ್ತಿ ಹಿಡಿದಿದೆ. ಎರಡು ರಾಜ್ಯಗಳು ಸಮಾನ ಹಂಚಿಕೆ ತತ್ವ ಪಾಲಿಸಬೇಕು ಎಂದಿದೆ.
ಕುಡಿಯುವ ನೀರಿನ ತೀವ್ರ ಅಭಾವ ಎದುರಿಸುತ್ತಿರುವ ನಗರ ಜಿಲ್ಲೆಯ 161 ಹಳ್ಳಿಗಳಿಗೆ ಕಾವೇರಿ ನೀರು ಸಂಪರ್ಕ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿತ್ತು. ಅದಕ್ಕೆ ಸುಪ್ರೀಂಕೋರ್ಟ್ ಅಸ್ತು ಎಂದಿದೆ. ಇದಕ್ಕಾಗಿ ಜಲಮಂಡಳಿಯು ನಿತ್ಯ 16.10 ದಶಲಕ್ಷ ಲೀಟರ್ ನೀರು ಪೂರೈಸಲಿದೆ.
ಬಿಬಿಎಂಪಿ ವ್ಯಾಪ್ತಿಯಿಂದ ಹೊರಗಿರುವ ಕರ್ನಾಟಕ ಗೃಹ ಮಂಡಳಿಯ ಸೂರ್ಯನಗರ 1,2,3 , ಮತ್ತು 4 ನೇ ಹಂತ ಆನೇಕಲ್ ಪಟ್ಟಣ ಮತ್ತು ಸುತ್ತಮುತ್ತಲಿನ 17 ಗ್ರಾಮಗಳಿಗೆ ಕಾವೇರಿ ನೀರು ಸರಬರಾಜು ಮಾಡಲು ಸರ್ಕಾರ ಅನುಮೋದನೆ ನೀಡಿದೆ.
30 ಎಂಎಲ್ ಡಿ ನೀಡು ಹಂಚಿಕೆ: ರಾಜ್ಯ ಸರ್ಕಾರವು ಸೂರ್ಯನಗರ ವಸತಿ ಬಡಾವಣೆಗಳಿಗೆ 15 ಎಂ ಎಲ್ ಡಿ , ಆನೇಕಲ್ ಪಟ್ಟಣಕ್ಕೆ 7.5 ಎಂಎಲ್ ಡಿ ಮತ್ತು 17 ಹಳ್ಳಿಗಳಿಗೆ 7.5 ಎಂಎಲ್ ಡಿ ಸೇರಿ ಒಟ್ಟು 30 ಎಂಎಲ್ ಡಿ ಕಾವೇರಿ ನೀಡು ಹಂಚಿಕೆ ಮಾಡಿದೆ. ಕರ್ನಾಟಕ ನೀರಾವರಿ ಪ್ರದೇಶವನ್ನು ವಿಸ್ತರಣೆ ಮಾಡಲು ಸುಪ್ರೀಂಕೋರ್ಟ್ ಸೂಚಿಸಿದೆ.












Click it and Unblock the Notifications