Bengaluru: ತಾಪಮಾನ ಹೆಚ್ಚಳದಿಂದ ಕಾವೇರಿ ನೀರಿನ ಅಭಾವ- ಯಾವ ಏರಿಯಾಗಳಲ್ಲಿ ತಿಳಿಯಿರಿ
ಬೇಸಿಗೆಯ ತಾಪಮಾನ ಹೆಚ್ಚುತ್ತಿದ್ದು, ರಾಜ್ಯ ರಾಜಧಾನಿಯಲ್ಲಿ ನೀರಿನ ಅಭಾವ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನೀರನ್ನು ಕುಡಿಯಲು ಮತ್ತು ಅಡುಗೆಗೆ ಮಾತ್ರ ಬಳಸುವಂತೆ ಮನವಿ ಮಾಡಲಾಗಿದೆ.
ಬೆಂಗಳೂರು, ಮಾರ್ಚ್ 17: ಬೇಸಿಗೆಯ ತಾಪಮಾನ ಹೆಚ್ಚುತ್ತಿದ್ದು, ರಾಜ್ಯ ರಾಜಧಾನಿಯಲ್ಲಿ ನೀರಿನ ಅಭಾವ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನೀರನ್ನು ಕುಡಿಯಲು ಮತ್ತು ಅಡುಗೆಗೆ ಮಾತ್ರ ಬಳಸುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಾರ್ವಜನಿಕರಿಗೆ ಮನವಿ ಮಾಡಿದೆ. ಕಾವೇರಿ ನೀರನ್ನು ಮಿತವಾಗಿ ಬಳಸುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು ಪೂರ್ವದ ಕೆಲವು ಪ್ರದೇಶಗಳಲ್ಲಿ ಅಸಮರ್ಪಕ ನೀರು ಪೂರೈಕೆಯ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಪ್ರದೇಶಗಳಲ್ಲಿ ಹೆಚ್ಚು ಶುಲ್ಕ ವಿಧಿಸುವ ನೀರಿನ ಟ್ಯಾಂಕರ್ಗಳ ಮೇಲೆ ಜನರು ಅವಲಂಬಿತರಾಗಿದ್ದಾರೆ ಎಂದು ತಿಳಿದುಬಂದಿದೆ.

ಪ್ರತಿ ದಿನ ಬೆಂಗಳೂರಿಗೆ 1,450 ಮಿಲಿಯನ್ ಲೀಟರ್ ಕಾವೇರಿ ಕುಡಿಯುವ ನೀರು ಪೂರೈಕೆಯಾಗುತ್ತಿದೆ ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಶೌಚಾಲಯ, ಉದ್ಯಾನ ಹಾಗೂ ವಾಹನಗಳನ್ನು ಸ್ವಚ್ಛಗೊಳಿಸಲು ಕಾವೇರಿ ನೀರನ್ನು ಬಳಸದಂತೆ ನಿವಾಸಿಗಳಿಗೆ ಮನವಿ ಮಾಡಲಾಗಿದೆ. ಅಂತಹ ಉದ್ದೇಶಗಳಿಗಾಗಿ ಕೊಳವೆ ಬಾವಿ ನೀರು ಮತ್ತು ತ್ಯಾಜ್ಯ ನೀರಿನ ಸ್ಥಾವರಗಳಿಂದ ಸಂಸ್ಕರಿಸಿದ ನೀರನ್ನು ಬಳಸಬೇಕು ಎಂದೂ ಮಂಡಳಿ ಕೇಳಿಕೊಂಡಿದೆ.
'ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವ ಸಾಧ್ಯತೆ ಇದೆ. ಮಂಡಳಿಯ ಅಧೀನದಲ್ಲಿ 68 ಲಾರಿ ಟ್ಯಾಂಕರ್ಗಳ ಸಹಾಯದಿಂದ ನಗರದಲ್ಲಿ ನೀರಿನ ಕೊರತೆ ಇರುವ ಪ್ರದೇಶಗಳಿಗೆ ನೀರು ಸರಬರಾಜು ಮಾಡಲಾಗುವುದು. ಅಲ್ಲದೆ, ಸುಮಾರು 10,710 ಸಾರ್ವಜನಿಕ ಕೊಳವೆ ಬಾವಿಗಳನ್ನು ಮಂಡಳಿಯಿಂದ ನಿರ್ವಹಣೆ ಮಾಡಲಾಗುತ್ತಿದ್ದು, ಹೆಚ್ಚುವರಿಯಾಗಿ ನೀರು ಸರಬರಾಜು ಮಾಡಲಾಗುತ್ತಿದೆ' ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

35 ಉಪ ವಿಭಾಗಗಳಿಗೆ ನೀರು ಸರಬರಾಜಿನ ಮೇಲ್ವಿಚಾರಣೆ ಮಾಡಲು ಮಂಡಳಿಯ ಅಧಿಕಾರಿಗಳನ್ನು ನೇಮಿಸಲಾಗಿದೆ ಮತ್ತು ಉಪವಿಭಾಗಗಳಲ್ಲಿ ವ್ಯಾಪಕ ತಪಾಸಣೆ ನಡೆಸಲಾಗುತ್ತಿದೆ ಎಂದೂ ಪ್ರಕಟಣೆ ಹೇಳಿದೆ.
ಸಾಮಾನ್ಯವಾಗಿ ಬೇಸಿಗೆಯಲ್ಲಿ ಶೇ. 5 ರಷ್ಟು ಹೆಚ್ಚುವರಿ ನೀರಿನ ಬೇಡಿಕೆ ಬರಲಿದ್ದು, ನೀರು ಉಳಿಸದಿದ್ದಲ್ಲಿ ಸೌಕರ್ಯ ಕಲ್ಪಿಸುವುದು ಕಷ್ಟ ಎಂದು ಮಂಡಳಿಯ ಅಧಿಕಾರಿಯೊಬ್ಬರು 'ಇಂಡಿಯನ್ ಎಕ್ಸ್ಪ್ರೆಸ್' ಪತ್ರಿಕೆಗೆ ತಿಳಿಸಿದ್ದಾರೆ. ಹೊಸದಾಗಿ ಸೇರ್ಪಡೆಯಾದ 110 ಗ್ರಾಮಗಳಿಗೆ ಇನ್ನೂ ನೀರಿನ ಸಂಪರ್ಕ ಕಲ್ಪಿಸಲಾಗಿಲ್ಲ. ಮಾರತಹಳ್ಳಿ, ಸರ್ಜಾಪುರ, ಕೆಆರ್ ಪುರಂ ಮತ್ತು ವರ್ತೂರು ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ.
ಕಾವೇರಿ ನೀರಿನ ಅಭಾವದ ಕುರಿತು ಮಾತನಾಡಿರುವ ಕೆಆರ್ ಪುರಂನ ಫ್ಲಾಟ್ ಮಾಲೀಕ ಶ್ರೀ ಕುಮಾರ್ ಅವರು, ತಮ್ಮ ಅಪಾರ್ಟ್ಮೆಂಟ್ ನೀರಿನ ಟ್ಯಾಂಕರ್ಗಳ ಮೇಲೆ ಅವಲಂಬಿತವಾಗಿದೆ. ಆದರೆ ಇಂಧನ ವೆಚ್ಚದಲ್ಲಿ ಹೆಚ್ಚಳವನ್ನು ಉಲ್ಲೇಖಿಸಿ ಟ್ಯಾಂಕರ್ಗಳ ಮಾಲಿಕರು ಹೆಚ್ಚಿನ ಬೆಲೆಗೆ ಬೇಡಿಕೆಯಿಟ್ಟಿದ್ದಾರೆ ಎಂದು ಹೇಳಿದ್ದಾರೆ.
5,000 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕರ್ಗೆ ರೂ 700 ಆಗುತ್ತದೆ. ಹೆಚ್ಚುವರಿ ಇಂಧನ ವೆಚ್ಚವನ್ನು ವಿಧಿಸಲಾಗುವುದು ಎಂದು ಸೇವಾ ಪೂರೈಕೆದಾರರು ತಿಳಿಸಿದ್ದಾರೆ.
ನಗರದಲ್ಲಿ ಗುರುವಾರ 33 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ಇದು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಕೆಲವು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಬೆಂಗಳೂರು ನಗರವು ಭಾನುವಾರ ನೀರು ಪೂರೈಕೆಯಲ್ಲಿ ವ್ಯತ್ಯಯವನ್ನು ಎದುರಿಸಲಿದೆ. 100 ಕ್ಕೂ ಹೆಚ್ಚು ಪ್ರದೇಶಗಳು ಪರಿಣಾಮ ಬೀರಲಿವೆ ಎಂದು ಟೈಮ್ಸ್ ನೌ ವರದಿ ಮಾಡಿದೆ.
BWSSB ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ನ (BMRCL) ಕೊನೇನ ಅಗ್ರಹಾರ - ನಾಗವಾರ ನಮ್ಮ ಮೆಟ್ರೋ ಮಾರ್ಗದ ಬಳಿ ಹಾಕಲಾದ ಕೆಲವು ಪೈಪ್ಗಳನ್ನು ನವೀಕರಿಸಲು ಮತ್ತು ಸ್ಥಳಾಂತರಿಸಲು ಕೆಲಸ ಮಾಡುತ್ತದೆ ಮತ್ತು ಹೊಸ ಪೈಪ್ಗಳನ್ನು ನೀರು ಸರಬರಾಜು ಮಾರ್ಗದ ಜಾಲಕ್ಕೆ ಜೋಡಿಸುತ್ತದೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru Water: ಬೆಂಗಳೂರು ಕೆಸಿ, ಎಚ್ ಎನ್ ವ್ಯಾಲಿ ನೀರಿನಿಂದ ಅಪಾಯವಿಲ್ಲ: ಸಚಿವ ಭೋಸರಾಜು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications