ಡಿವೈಎಸ್ಪಿ ಗಣಪತಿ ಸಾವು ಪ್ರಕರಣ: ಕಾಲಾವಕಾಶ ಕೇಳಿದ ಸಿಬಿಐ
ಬೆಂಗಳೂರು, ಡಿಸೆಂಬರ್ 18: ರಾಜ್ಯಾದ್ಯಂತ ಕುತೂಹಲ ಕೆರಳಿಸಿರುವ ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ವರದಿ ಜನರ ಮುಂದೆ ಬರಲು ಇನ್ನಷ್ಟು ತಡವಾಗುವ ಸಾಧ್ಯತೆ ಇದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು, ಹೆಚ್ಚುವರಿಯಾಗಿ ಆರು ತಿಂಗಳ ಕಾಲಾವಕಾಶ ಕೋರಿ ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿದ್ದಾರೆ.
ಗಣಪತಿ ಅವರ ತಂದೆ ಕುಶಾಲಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಮರು ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸೆಪ್ಟೆಂಬರ್ 5ರಂದು ಆದೇಶಿಸಿತ್ತು. ಈ ಅವಧಿ ಡಿಸೆಂಬರ್ 5ಕ್ಕೆ ಕೊನೆಗೊಂಡಿದೆ. ಈವರೆಗಿನ ಮಾಡಲಾಗಿರುವ ತನಿಖೆಯ ಪ್ರಮುಖ ಅಂಶಗಳು ಹಾಗೂ ತನಿಖಾ ಪ್ರಗತಿಯ ವರದಿ ಸಲ್ಲಿಸಿರುವ ಸಿಬಿಐ ಹೆಚ್ಚುವರಿ ಕಾಲಾವಕಾಶ ಕೋರಲಾಗಿದೆ.

ಈ ಪ್ರಕರಣದ ಸಂಬಂಧ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ.ಎಂ. ಪ್ರಸಾದ್ ವಿರುದ್ಧ ಅ.26ರಂದು ಎಫ್ಐಆರ್ ದಾಖಲಿಸಿಕೊಂಡಿದ್ದ ಸಿಬಿಐ, ತನಿಖೆ ಚುರುಕುಗೊಳಿಸಿದೆ.
ಗಣಪತಿ ಶವ ದೊರೆತ ವಸತಿ ಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಅಧಿಕಾರಿಗಳು, ಗಣಪತಿಯ ತಂದೆ, ತಾಯಿ, ಸಹೋದರಿಯಿಂದ ಹೇಳಿಕೆ ಪಡೆದಿದ್ದಾರೆ. ಆತ್ಮಹತ್ಯೆ ಪ್ರಕರಣವನ್ನು ತನಿಖೆ ನಡೆಸಿದ್ದ ಮಡಿಕೇರಿ ಪೊಲೀಸ್ ಇನ್ಸ್ಪೆಕ್ಟರ್ ಮೇದಪ್ಪ ಅವರ ವಿಚಾರಣೆಯನ್ನೂ ಸಿಬಿಐ ಅಧಿಕಾರಿಗಳು ನಡೆಸಿದ್ದಾರೆ.
ಗಣಪತಿ ಸಾವಿನ ಬಗ್ಗೆ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಕೇಶವನಾರಾಯಣ ಆಯೋಗದಿಂದಲೂ ಸಿಬಿಐ ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯೋಗದ ಬಳಿ ಇರುವ ದಾಖಲೆಗಳನ್ನು ನೀಡುವಂತೆ ಮನವಿ ಸಲ್ಲಿಸಿದ್ದಾರೆ.
ನಮ್ಮ ಕುಟುಂಬವು ಈಗಾಗಲೇ ನೊಂದಿದ್ದು ತನಿಖೆಯು ಮತ್ತಷ್ಟು ತಡವಾಗುವುದು ಬೇಡ. ವಕೀಲರೊಂದಿಗೆ ಚರ್ಚಿಸಿ ಎಷ್ಟು ಸಮಯ ನೀಡಬಹುದು ಎಂಬುದರ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಲಾಗುವುದು. ಸಿಬಿಐನಿಂದ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಡಿವೈಎಸ್ಪಿ ಗಣಪತಿ ಸಹೋದರ ಎಂ.ಕೆ. ಮಾಚಯ್ಯ ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications