ಪಾಯಲ್ ಸುರೇಖಾ ಮರ್ಡರ್: ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ
ಬೆಂಗಳೂರು, ಆಗಸ್ಟ್ 12: ಜೆ.ಪಿ ನಗರದ ನಿವಾಸಿ ಡೆಲ್ ಸಂಸ್ಥೆ ಉದ್ಯೋಗಿ ಪಾಯಲ್ ಸುರೇಖಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಸಿಬಿಐ ತಂಡ 17ನೇ ಎಸಿಎಂಎಂ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದೆ. ಜಿಮ್ ತರಬೇತುದಾರ ಜೇಮ್ಸ್ ಕುಮಾರ್ ರೇ ಅವರನ್ನು ಕೊಲೆಗಾರ ಎಂದು ಹೆಸರಿಸಲಾಗಿದೆ.
ಪಾಯಲ್ ತಂದೆ ದೀನದಯಾಳ್ ಸುರೇಖಾ ಮತ್ತು ಆರೋಪಿ ಜೇಮ್ಸ್ ಕುಮಾರ್ ರೇ ಸಲ್ಲಿಸಿದ ಎರಡು ಪ್ರತ್ಯೇಕ ಮೇಲ್ಮನವಿಗಳ ವಿಚಾರಣೆ ನಡೆಸಿದ ನ್ಯಾ. ಕೆ.ಎಸ್.ರಾಧಾಕೃಷ್ಣನ್ ಹಾಗೂ ನ್ಯಾ. ದೀಪಕ್ ಮಿಶ್ರ ಅವರಿದ್ದ ನ್ಯಾಯಪೀಠ ಸಿಬಿಐ ತನಿಖೆಗೆ ನಿರ್ದೇಶಿಸಿತ್ತು. ಅದರಂತೆ ತನಿಖೆ ಕೈಗೆತ್ತಿಕೊಂಡ ಸಿಬಿಐ ತಂಡಕ್ಕೆ ಜೇಮ್ಸ್ ಕುಮಾರ್ ರೇ ಮಾತ್ರ ಈ ಪ್ರಕರಣದ ಪ್ರಮುಖ ಆರೋಪಿ ಎನ್ನುವುದಕ್ಕೆ ಸೂಕ್ತ ಆಧಾರ ಸಿಕ್ಕಿದೆ. [ಕೇಸ್ ಹಿಸ್ಟರಿ: ಡೆಲ್ ಪಾಯಲ್ ಹತ್ಯೆ]

ಜೆಪಿ ನಗರ ಪೊಲೀಸರು ಮುಂಚೆ ತನಿಖೆ ಕೈಗೊಂಡು ಜೇಮ್ಸ್ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು. ಇದನ್ನು ಎತ್ತಿ ಹಿಡಿದಿರುವ ಸಿಬಿಐ ತಂಡ ಜೇಮ್ಸ್ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.
ಕ್ಲೋಸ್ ಆದ ಕೇಸ್ ರೀ ಓಪನ್ : ಡೆಲ್ ಬಿಪಿಒ ಉದ್ಯೋಗಿ, ಜೆಪಿನಗರ ಏಳನೇ ಹಂತದ ನಿವಾಸಿ ಪಾಯಲ್ ಸುರೇಖಾ(29) ಅಮಾನುಷ ಕೊಲೆ ಕೇಸ್ ಕ್ಲೋಸ್ ಆಗಿತ್ತು. ಈ ಪ್ರಕರಣ ತನಿಖೆಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಷರಾ ಹಾಕಿತ್ತು. ಸಿಬಿಐ ಸಲ್ಲಿಸಿದ ಅಫಿಡವಿಟ್ ಪರಿಶೀಲಿಸಿದ ನ್ಯಾ ಆನಂದ್ ಅವರು ಎಸಿಪಿ ಜಿತೇಂದ್ರನಾಥ್ ಅವರಿಗೆ ನಿರ್ದೇಶನ ನೀಡಿ ಡಿಸಿಪಿ ಮಟ್ಟದ ಅಧಿಕಾರಿಗಳಿಂದ ತನಿಖೆ ಮುಂದುವರೆಸುವಂತೆ ಸೂಚಿಸಿದ್ದರು.
ಅಸ್ಸಾಂ ಮೂಲದ ಪಾಯಲ್ (29) ಅವರನ್ನು ಡಿ.17,2010ರಂದು ಜೆಪಿ ನಗರದ ತಮ್ಮ ಅಪಾರ್ಟ್ಮೆಂಟ್ ನಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಸಿಸಿಬಿ ಪೊಲೀಸರು ಜೇಮ್ಸ ಕುಮಾರ್ ರೇ ಅವರನ್ನು ನಾಲ್ಕು ದಿನದ ನಂತರ ಬಂಧಿಸಿದ್ದರು. ಅನಂತರ ಸುಪ್ರೀಂ ಕೋರ್ಟಿನಿಂದ ಜಾಮೀನು ಪಡೆದ ರೇ ಸಿಬಿಐ ತನಿಖೆ ನಡೆಸುವಂತೆ ಮನವಿ ಮಾಡಿದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications