ಅಮ್ನೆಸ್ಟಿ ಇಂಡಿಯಾ ಕಚೇರಿ ಮೇಲೆ ಸಿಬಿಐ ದಾಳಿ, ಪರಿಶೀಲನೆ
ಬೆಂಗಳೂರು, ನವೆಂಬರ್ 15: ಅಮ್ನೆಸ್ಟಿ ಇಂಟರ್ನ್ಯಾಷನಲ್ ಇಂಡಿಯಾ ಪ್ರೈ ಲಿಮಿಟೆಡ್ ಮತ್ತು ಇಂಡಿಯನ್ಸ್ ಫಾರ್ ಅಮ್ನೆಸ್ಟಿ ಇಂಟರ್ನ್ಯಾಷನಲ್ ಟ್ರಸ್ಟ್ನ ಬೆಂಗಳೂರು ಹಾಗೂ ದೆಹಲಿ ಕಚೇರಿಗಳ ಮೇಲೆ ಶುಕ್ರವಾರ ದಾಳಿ ನಡೆಸಿದ ಸಿಬಿಐ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಭಾರತದಲ್ಲಿನ ಎನ್ಜಿಓಗಳಿಗೆ ವಿದೇಶಿ ದೇಣಿಗೆಯ ನೀತಿ ಹಾಗೂ ನಿಯಮಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್ಸಿಆರ್ಎ) ಉಲ್ಲಂಘಿಸಿದ ಆರೋಪ ಹೊಂದಿರುವ ಎನ್ಜಿಓಗಳ ಪಟ್ಟಿಯನ್ನು ಇತ್ತೀಚೆಗಷ್ಟೇ ಗೃಹ ಸಚಿವಾಲಯ ಸಿಬಿಐಗೆ ನೀಡಿತ್ತು. ಅದರಲ್ಲಿ ಅಮ್ನೆಸ್ಟಿ ಕೂಡ ಇತ್ತು ಎನ್ನಲಾಗಿದೆ.
ಅಮ್ನೆಸ್ಟಿ ವಿರುದ್ಧ ಸಿಬಿಐ ಪ್ರತ್ಯೇಕ ಪ್ರಕರಣ ಕೂಡ ದಾಖಲಿಸಿದೆ ಎಂದು ವರದಿಯಾಗಿದೆ.

'ಸಿಬಿಐ ಇಂದು ಬೆಂಗಳೂರು ಮತ್ತು ದೆಹಲಿಯಲ್ಲಿರುವ ಸಂಸ್ಥೆ ಹಾಗೂ ಟ್ರಸ್ಟ್ನ ಕಚೇರಿಗಳಲ್ಲಿ ಹುಡುಕಾಟ ನಡೆಸಿದೆ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಅಮ್ನೆಸ್ಟಿ ಇಂಟರ್ನ್ಯಾಷನಲ್ ಇಂಡಿಯಾ ಧ್ವನಿ ಎತ್ತಿದಾಗಲೆಲ್ಲಾ ಒಂದಲ್ಲ ಒಂದು ರೀತಿಯಲ್ಲಿ ಕಿರುಕುಳ ನೀಡಲಾಗುತ್ತಿದೆ' ಎಂದು ಅಮ್ನೆಸ್ಟಿ ಪ್ರತಿಕ್ರಿಯಿಸಿದೆ.
'ಭಾರತ ಮತ್ತು ಅಂತಾರಾಷ್ಟ್ರೀಯ ಕಾನೂನುಗಳಿಗೆ ಅಮ್ನೆಸ್ಟಿ ಸಂಪೂರ್ಣ ಬದ್ಧವಾಗಿರುತ್ತದೆ. ಭಾರತದಲ್ಲಿಯೇ ಆಗಿರಲಿ ಅಥವಾ ಇನ್ನೆಲ್ಲೇ ಆಗಿರಲಿ ನಮ್ಮ ಕೆಲಸ ಸಾರ್ವತ್ರಿಕ ಮಾನ ಹಕ್ಕುಗಳನ್ನು ಎತ್ತಿ ಹಿಡಿಯುವುದು ಮತ್ತು ಅದಕ್ಕಾಗಿ ಹೋರಾಡುವುದು. ಭಾರತದ ಸಂವಿಧಾನದಲ್ಲಿಯೂ ಈ ಮೌಲ್ಯಗಳನ್ನು ಮುಖ್ಯವಾಗಿ ಹೇಳಲಾಗಿದೆ' ಎಂದು ಹೇಳಿಕೆ ನೀಡಿದೆ.
2016ರಲ್ಲಿ ಬೆಂಗಳೂರು ಪೊಲೀಸರು ಅಮ್ನೆಸ್ಟಿ ಇಂಟರ್ನ್ಯಾಷನಲ್ ಇಂಡಿಯಾ ವಿರುದ್ಧ ಎಬಿವಿಪಿ ನೀಡಿದ್ದ ದೂರಿನ ಅಡಿ ದೇಶದ್ರೋಹದ ಪ್ರಕರಣ ದಾಖಲಿಸಿದ್ದರು.
-
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications