ಐಎಂಎ ವಂಚನೆ ಪ್ರಕರಣ: ರೋಷನ್ ಬೇಗ್ ಕಸ್ಟಡಿಗೆ ಕೇಳಿ ಸಿಬಿಐ ಅರ್ಜಿ
ಬೆಂಗಳೂರು, ನವೆಂಬರ್ 25: ಐಎಂಎ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವ ಮಾಜಿ ಸಚಿವ ಆರ್. ರೋಷನ್ ಬೇಗ್ ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆಗೆ ಒಳಪಡಿಸಲು ಸಿಬಿಐ ಮುಂದಾಗಿದೆ. ಈ ಕುರಿತು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿ ಆರೋಪಿ ಬೇಗ್ ರನ್ನು ವಿಚಾರಣೆಗೆ ಒಳಪಡಿಸಲು ಕಸ್ಡಡಿಗೆ ಕೇಳಿದೆ.
ಐಎಂಎ ಕಂಪನಿಂದ ನಾನೂರು ಕೋಟಿ ರೂಪಾಯಿ ಪಡೆದ ಆರೋಪ ರೋಷನ್ ಬೇಗ್ ಮೇಲೆ ಕೇಳಿ ಬಂದಿತ್ತು. ಐಎಂಎ ಹಗರಣ ಬೆಳಕಿಗೆ ಬರುವ ಆರಂಭದ ದಿನಗಳಲ್ಲಿ ಪ್ರಮುಖ ಆರೋಪಿ ಮನ್ಸೂರ್ ಕಾನ್ ವಿಡಿಯೋ ಮಾಡಿದ್ದ. ಜತೆಗೆ ಅಂದಿನ ನಗರ ಪೊಲೀಸ್ ಆಯುಕ್ತರಿಗೂ ಅಡಿಯೋ ರವಾನಿಸಿದ್ದ.
ಅದರ ಪ್ರಕಾರ ರೋಷನ್ ಬೇಗ್ ಅವರು ಐಎಂಎನಿಂದ ಕೋಟ್ಯಂತರ ರೂಪಾಯಿ ಪಡೆದ ಕೊಂಡ ಆರೋಪ ಕೇಳಿ ಬಂದಿತ್ತು. ಆರೋಪದ ಹಿನ್ನೆಲೆಯಲ್ಲಿ ಬೇಗ್ ಅವರನ್ನು ವಿಶೇಷ ತನಿಖಾ ತಂಡ ವಿಚಾರಣೆಗೆ ಒಳಪಡಿಸಲು ಮುಂದಾಗಿತ್ತು.ಸ ಇದಾದ ಬಳಿಕ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಉಪ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದರು.
ಕಳೆದ ಭಾನುವಾರ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು. ಬಂಧನದ ಬಳಿಕ ಪುಲಿಕೇಶಿನಗರದಲ್ಲಿರುವ ಅವರ ನಿವಾಸ ಪುತ್ರ ರೋಹಾನ್ ಕಚೇರಿ ಮೇಲೆ ದಾಳಿ ನಡಿಸಿ ಸಿಬಿಐ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಇದಕ್ಕೂ ಮೊದಲೇ ಐಎಂಎ ಸಂಸ್ಥೆಯ ಬ್ಲೇಡ್ ಸ್ಕೀಮ್ ಗಳ ಬಗ್ಗೆ ಶಾಸಕ ರೋಷನ್ ಬೇಗ್ ಪ್ರಚಾರ ಪಡಿಸಿ ಅದರಿಂದ ಲಾಭ ಮಾಡಿಕೊಂಡ ಬಗ್ಗೆ ಐಎಂಎ ಪ್ರಕರಣದ ಸಂತ್ರಸ್ತರ ಅರ್ಜಿಗಳ ವಿಚಾರಣೆಗೆ ರಚಿಸಿರುವ ಸಕ್ಷಮ ಪ್ರಧಿಕಾರ ಮುಖ್ಯಸ್ಥ ಹರ್ಷ ಗುಪ್ತಾ ಕಂದಾಯ ಇಲಾಖೆಗೆ ಪತ್ರ ಬರೆದಿದ್ದರು. ಪತ್ರದಲ್ಲಿ ರೋಷನ್ ಬೇಗ್ ಮತ್ತು ಐಎಂಎ ಸಂಸ್ಥೆ ಜತೆಗಿನ ಸಂಬಂಧವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದರು. ಇದರ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದ್ದು, ಮಾಹಿತಿ ತರಿಸಿಕೊಳ್ಳಲು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಬಹಿರಂಗವಾಗಿತ್ತು.

Recommended Video
ಸದ್ಯ ಜೈಲಿನಲ್ಲಿರುವ ರೋಷನ್ ಬೇಗ್ ಅವರಿಗೆ ಆರೋಗ್ಯದಲ್ಲಿ ಏರು ಪೇರಾಗಿತ್ತು. ಜೈಲಿನ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆದಿದ್ದು, ವೈದ್ಯಕೀಯ ಪರೀಕ್ಷೆ ಸಹ ನಡೆಸಲಾಗಿದೆ. ವಿಚಾರಣೆ ನಡೆಸಲು ಯಾವುದೇ ಅಭ್ಯಂತರ ಇಲ್ಲ ಎಂದು ವೈದ್ಯಾಧಿಕಾರಿಗಳು ಖಚಿತ ಪಡಿಸಿದ ಹಿನ್ನೆಲೆಯಲ್ಲಿ ಬೇಗ್ ಅವರನ್ನು ಇದೀಗ ವಶಕ್ಕೆ ಪಡದು ವಿಚಾರಣೆ ನಡೆಸಲಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications