ಫೋನ್ ಕದ್ದಾಲಿಕೆ ಸಿಬಿಐ ತನಿಖೆ ಚುರುಕು: ಎಚ್ಡಿಕೆಗೆ ಸಂಕಷ್ಟ
ಬೆಂಗಳೂರು, ಸೆಪ್ಟೆಂಬರ್ 02: ಫೋನ್ ಕದ್ದಾಲಿಕೆ ಪ್ರಕರಣದ ತನಿಖೆಯನ್ನು ಸಿಬಿಐ ಚುರುಕುಗೊಳಿಸಿದ್ದು, ನಿನ್ನೆ ಸತತ ಹಲವು ಗಂಟೆಗಳ ಕಾಲ ಸೈಬರ್ ಕ್ರೈಂ ವಿಭಾಗದ ಅಧಿಕಾರಿಗಳನ್ನು ವಿಚಾರಣೆ ನಡೆಸಿದ್ದಾರೆ.
ನಿನ್ನೆ ಸೈಬರ್ ಕ್ರೈಂ ವಿಭಾಗಕ್ಕೆ ಬಂದಿದ್ದ ಸಿಬಿಐ ಎಸ್ಐ ಕಿರಣ್ ನೇತೃತ್ವದ ತಂಡ, ಹಲವು ಗಂಟೆಗಳ ಕಾಲ ಅಲ್ಲಿನ ಅಧಿಕಾರಿಗಳು, ಸಿಬ್ಬಂದಿಯನ್ನು ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದಾರೆ.
ಕುಮಾರಸ್ವಾಮಿ ಅವರ ಸೂಚನೆ ಮೇರೆಗೆ ಕಾಂಗ್ರೆಸ್ನ ಕೆಲ ಹಿರಿಯ ನಾಯಕರು, ಬಿಜೆಪಿ ನಾಯಕರು, ಅತೃಪ್ತ ಶಾಸಕರ ಫೋನ್ ಕದ್ದಾಲಿಕೆ ನಡೆದಿದೆ ಎಂಬ ಆರೋಪವೂ ಎದ್ದಿದ್ದು, ಈ ಪ್ರಕರಣವನ್ನು ಬಿಜೆಪಿ ಸರ್ಕಾರವು ಸಿಬಿಐಗೆ ವಹಿಸಿದೆ.

ಕುಮಾರಸ್ವಾಮಿ ಆದೇಶದ ಮೇರೆಗೆ ಫೋನ್ ಕದ್ದಾಲಿಕೆಗಳು ನಡೆದಿವೆ ಎಂದು ಅನರ್ಹ ಶಾಸಕ ವಿಶ್ವನಾಥ್ ಆರೋಪ ಮಾಡಿದ್ದರು. ಇದಕ್ಕೆ ಪೂರಕವೆಂಬಂತೆ ಅದೇ ಸಮಯದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮತ್ತು ಮಧ್ಯವರ್ತಿಯೊಬ್ಬರ ನಡುವೆ ನಡೆದ ಮಾತುಕತೆಯ ಆಡಿಯೋ ವೈರಲ್ ಆಗಿತ್ತು. ಆ ಆಡಿಯೋವನ್ನು ಕುಮಾರಸ್ವಾಮಿ ಅವರ ಆಪ್ತ ಐಪಿಎಸ್ ಅಧಿಕಾರಿಯೇ ಬಿಡುಗಡೆ ಮಾಡಿಸಿದ್ದಾರೆ. ಹಾಗೂ ಭಾಸ್ಕರ್ ರಾವ್ ಅವರ ಫೋನ್ ಕದ್ದಾಲಿಕೆ ಮಾಡಿದ್ದರು ಎಂಬ ಆರೋಪವೂ ಕೇಳಿ ಬಂದಿತ್ತು.
ಸಿಬಿಐ ತಂಡವು ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ ಅವರನ್ನು ನಿನ್ನೆ ಭೇಟಿ ಮಾಡಿದೆ. ಆಗಸ್ಟ್ 2018ರಿಂದ ಮೇ 2019ರವರೆಗೆ ನಡೆದ ಫೋನ್ ಟ್ಯಾಪಿಂಗ್ ಬಗ್ಗೆ ಮಾಹಿತಿ ಕೇಳಿದೆ. ಫೋನ್ ಟ್ಯಾಪಿಂಗ್ಗೆ ಪೊಲೀಸರು ಅನುಮತಿ ನೀಡಿರುವ ವಿವರ ಹಾಗೂ ತಾವು ಈ ಸಂಬಂಧ ಸಹಿ ಮಾಡಿರುವ ದಾಖಲೆ ಒದಗಿಸಿ ಎಂದು ಗೃಹ ಕಾರ್ಯದರ್ಶಿ ಅವರಿಗೆ ಸಿಬಿಐ ಅಧಿಕಾರಿಗಳು ಕೇಳಿದ್ದಾರೆ.
ಇಂದೂ ಸಹ ತನಿಖೆ ಮುಂದುವರೆರಿಸಿರುವ ಸಿಬಿಐ ತಂಡ, ಫೋನ್ ಕದ್ದಾಲಿಕೆ ಪ್ರಕರಣಗ ಸ್ಥಳಗಳ ಮಹಜರ್ ಮಾಡಿದ್ದಾರೆ. ಜೊತೆಗೆ ಫೋನ್ ಕದ್ದಾಲಿಕೆಯಿಂದ ಸಂಗ್ರಹವಾಗಿರುವ ಭಾರಿ ಪ್ರಮಾಣದ ಮಾಹಿತಿಯನ್ನು ಸಿಬಿಐ ವಶಪಡಿಸಿಕೊಳ್ಳಲಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications