ಲಾಟರಿ ಹಗರಣ; ಅಧಿಕೃತವಾಗಿ ಸಿಬಿಐ ತನಿಖೆ ಶುರು
ಬೆಂಗಳೂರು, ಆಗಸ್ಟ್ 11: ಕರ್ನಾಟಕದ ಬಹುಕೋಟಿ ಲಾಟರಿ ಹಗರಣದ ತನಿಖೆ ಮಂಗಳವಾರದಿಂದ ಅಧಿಕೃತವಾಗಿ ಆರಂಭಗೊಂಡಿದೆ ಎಂದು ಸಿಬಿಐ ವಕ್ತಾರರು ಹೇಳಿದ್ದಾರೆ.
ಲಾಟರಿ ನಿಷೇಧ ಕಾಯ್ದೆ ಹಾಗೂ ಕ್ರಿಮಿನಲ್ ಸಂಚು ಸೇರಿದಂತೆ ಅನೇಕ ದಂಡ ಸಂಹಿತೆ ಅನ್ವಯ ಅನಾಮಧೇಯ ವ್ಯಕ್ತಿಗಳ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. [ಲಾಟರಿ ಹಗರಣ ಸಿಬಿಐ ತನಿಖೆಗೆ ಕೊಟ್ಟಿದ್ದೇಕೆ?]
ಈ ಮುಂಚೆ ಕರ್ನಾಟಕ ಸರ್ಕಾರ ಹಾಗೂ ಭಾರತ ಸರ್ಕಾರದ ಆದೇಶದ ಅನ್ವಯ ರಾಜ್ಯದ ಅಬಕಾರಿ ನಿಯಂತ್ರಣ ಹಾಗೂ ಲಾಟರಿ ನಿಷೇಧ ವಿಭಾಗ, ಕೆಜಿಎಫ್, ಕೋಲಾರ(ಕರ್ನಾಟಕ) ಪೊಲೀಸರು ಪ್ರಕರಣ ದಾಖಲಿಸಿಕೊಂಡು ಎಫ್ ಐಆರ್ (FIR No.64/2015) ಹಾಕಿದ್ದಾರೆ ಎಂದು ಸಿಬಿಐ ವಕ್ತಾರರು ಹೇಳಿದರು.

ಸಾರ್ವಜನಿಕರ ಮತ್ತು ಪ್ರತಿಪಕ್ಷಗಳ ಒತ್ತಾಯಕ್ಕೆ ಮಣಿದಿದ್ದ ಕರ್ನಾಟಕ ಸರ್ಕಾರ ಒಂದಂಕಿ ಲಾಟರಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಆದರೆ, ಪ್ರಕರಣದ ತನಿಖೆ ಆರಂಭಿಸುವ ಮೊದಲು ಸಿಬಿಐ ಪ್ರಾಥಮಿಕ ಮಾಹಿತಿ ಸಂಗ್ರಹಣೆ ಮಾಡಿದೆ. ಅದರ ಅನ್ವಯ ಈ ಹಗರಣದ ತನಿಖೆಯನ್ನು ಕೈಗೆತ್ತಿಕೊಂಡಿದೆ. [ಲಾಟರಿ ಹಗರಣ ಸಿಬಿಐ ತನಿಖೆ ಎಲ್ಲಿಗೆ ಬಂತು?]
ಒಂದಂಕಿ ಲಾಟರಿ ಹಗರಣದಲ್ಲಿ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಭಾಗಿಯಾಗಿರುವ ಕುರಿತು ಸೂಕ್ತವಾದ ಸಾಕ್ಷ್ಯಗಳು ಸಿಕ್ಕಿಲ್ಲ. ಕರ್ನಾಟಕ ಸರ್ಕಾರ ಅಲೋಕ್ ಕುಮಾರ್ ಹೆಸರು ಕೇಳಿಬಂದ ತಕ್ಷಣ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿತ್ತು. [ಲಾಟರಿ ಸಾಮ್ರಾಜ್ಯಕ್ಕೆ ಈತನೇ ಕಿಂಗ್]
ಲಾಟರಿ ಹಗರಣ ಕಿಂಗ್ ಪಿನ್ ಪಾರಿರಾಜನ್ ಪರಿಚಯವಿದೆ. ಆದರೆ, ಆತನ ಜೊತೆ ಯಾವುದೇ ಅಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ತಮ್ಮ ಮೇಲೆ ಆರೋಪ ಕೇಳಿಬಂದಾಗಲೇ ಅಲೋಕ್ ಕುಮಾರ್ ಸ್ಪಷ್ಟಪಡಿಸಿದ್ದರು. ಈಗ ಸಿಬಿಐ ಸಹ ತನ್ನ ಪ್ರಾಥಮಿಕ ತನಿಖೆ ಯಿಂದ ತಿಳಿದು ಬಂದಿದೆ.
2015ರ ಮೇ 26ರಂದು ಕರ್ನಾಟಕ ಸರ್ಕಾರ ಒಂದಂಕಿ ಲಾಟರಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿ ಆದೇಶ ಹೊರಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.(ಒನ್ ಇಂಡಿಯಾ ಸುದ್ದಿ)
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications