ಆಂಬಿಡೆಂಟ್ ಹಗರಣ: ಅಲಿಖಾನ್ ಜಾಮೀನಿಗೆ ಸಿಸಿಬಿ ಆಕ್ಷೇಪ
ಬೆಂಗಳೂರು, ಡಿಸೆಂಬರ್ 1: ಆಂಬಿಡೆಂಟ್ ಕಂಪನಿ 950 ಕೋಟಿ ಚಿಟ್ ಫಂಡ್ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಅಲಿಖಾನ್ಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.
ಸಿಸಿಬಿ ಅಧಿಕಾರಿಗಳ ಮನವಿ ಮೇರೆಗೆ 8 ದಿನಗಳ ಕಾಲ ವಿಚಾರಣೆಗೆಂದು ಅಲಿಖಾನ್ನನ್ನು ಸಿಸಿಬಿ ಪೊಲೀಸರ ವಶಕ್ಕೆ ನೀಡಲಾಗಿತ್ತು. ಅಲಿಖಾನ್ಗೆ ಜಾಮೀನು ನೀಡದಂತೆ ಸಿಸಿಬಿ ಪೊಲೀಸರು 1 ನೇ ಎಸಿಎಂಎಂ ನ್ಯಾಯಾಲಯದಲ್ಲಿ ಆಕ್ಷೇಪಣೆ ಸಲ್ಲಿಸಿದ್ದಾರೆ.
ಎಂಟು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ ಅಲಿಖಾನ್ನನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತಿ. ಪೊಲೀಸ್ ಕಸ್ಟಡಿಯಲ್ಲಿದ್ದ ಅವಧಿಯಲ್ಲೂ ಅಲಿಖಾನ್ ತನಿಕೆಗ ಸಮರ್ಪಕವಾಗ ಸಹಕರಿಸಿಲ್ಲ. ಅಲ್ಲದೆ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಂತೆ ನಡೆದುಕೊಳ್ಳದೆ ನ್ಯಾಯಾಲಯಕ್ಕೂ ವಂಚನೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಆಂಬಿಡೆಂಟ್ ಪ್ರಕರಣದಲ್ಲಿ ಆಗಿರುವ ತನಿಖೆ ಮತ್ತು ಹೂಡಿಕೆದಾರರ ಹಣ ಎಲ್ಲೆಲ್ಲಿ ಹೋಗಿದೆ ಎನ್ನುವ ಕುರಿತಂತೆ ಅಪರಾಧ ವಿಭಾಗದ ಹೆಚ್ಚುವರಿ ಆಯುಕ್ತ ಅಲೋಕ್ ಕುಮಾರ್ ಶುಕ್ರವಾರ ಸಂಜೆ ಸತತ ಮೂರು ಗಂಟೆಗಳ ಕಾಲ ತನಿಖಾಧಿಕಾರಿಗಳ ಜೊತೆ ಚರ್ಚೆ ನಡೆಸಿ ದಾಖಲೆ ಸಂಗ್ರಹಿಸಿದ್ದಾರೆ.












Click it and Unblock the Notifications