ಆಂಬಿಡೆಂಟ್ ವಿರುದ್ಧ 4,800 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ
ಬೆಂಗಳೂರು, ಫೆಬ್ರವರಿ 20: ಆಂಬಿಡೆಂಟ್ ಕಂಪನಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 4,800 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಸಿಸಿಬಿ ಪೊಲೀಸರು 1 ನೇ ಸಿಸಿಎಚ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
2016ರಲ್ಲಿ ಆರೋಪಿಗಳಾದ ಸೈಯದ್ ಫರೀದ್ ಅಹಮದ್, ಸೈಯದ್ ಅಫಾಕ್ ಅಹಮದ್, ಇರ್ಫಾನ್ ಮಿರ್ಜಾ ಆಂಬಿಡೆಂಟ್ ಕಂಪನಿ ಆರಂಭಿಸಿ ಹೆಚ್ಚಿನ ಬಡ್ಡಿ ಆಮಿಷ ಒಡ್ಡಿ 10,564 ಜನರಿಂದ 120 ಕೋಟಿ ರೂ ಸಂಗ್ರಹ ಮಾಡಿದ್ದರು.
ಪ್ರಕರಣಗಳ ತನಿಖೆ ಕೈಗೊಂಡು ಆರೋಪಿಗಳಾದ ಇರ್ಫಾನ್ ಮಿರ್ಜಾ, ಮಾಜಿ ಸಚಿವ ಜನಾರ್ದನ ರೆಡ್ಡಿ, ಮೆಹಫೂಜ್ ಅಲಿ ಖಾನ್, ಬಳ್ಳಾರಿಯ ರಮೇಶ್, ಇನಾಯತ್ ಉಲ್ಲಾ ಮತ್ತು ಅಶ್ರಫ್ ಅಲಿ ಎಂಬುವವರನ್ನು ಬಂಧಿಸಲಾಗಿತ್ತು. ಎಲ್ಲ ಆರೋಪಿಗಳು ಜಾಮೀನು ಪಡೆದಿದ್ದಾರೆ.

ಆಂಬಿಡೆಂಟ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ತನಿಖೆಯಲ್ಲಿ ಸಹಾಯ ಮಾಡುವುದಾಗಿ ಆರೋಪಿ ಸೈಯದ್ ಫರೀದ್ ನಿಂದ ಜನಾರ್ದನ ರೆಡ್ಡಿ 18 ಕೆಜಿ ಚಿನ್ನ ಪಡೆದಿರುವುದು ತನಿಖೆಯಲ್ಲಿ ಸಾಬೀತಾಗಿದೆ. ತನಿಖೆ ವೇಳೆ ಸಾಕ್ಷ್ಯಾಧಾರ ಸಂಗ್ರಹಿಸಿ 4,800 ಪುಟಗಳ 12 ಸಂಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications