Dhanveer Gowda: ದರ್ಶನ್ ಆಪ್ತ ಧ್ವನೀರ್ ಗೌಡಗೂ ಸಂಕಷ್ಟ: ಸಿಸಿಬಿಯಿಂದ ತೀವ್ರ ವಿಚಾರಣೆ, ಮೊಬೈಲ್ ವಶ!
Actor Dhanveer Gowda News: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ತೂಗುದೀಪ ಅವರೊಂದಿಗೆ ಹೆಚ್ಚಿನ ಆತ್ಮಿಯತೆ ಹೊಂದಿರುವ ನಟ ಧನ್ವಿರ್ ಗೌಡ ಅವರಿಗೂ ಸಂಕಷ್ಟ ಎದುರಾಗಿದೆ. ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಸುದ್ದಿ ಹರಿದಾಡಿತು. ಆ ಬಗ್ಗೆ ಇಂದು ಸರ್ಕಾರದ ಮಟ್ಟದಲ್ಲಿ ಸಭೆ ಇದೆ. ಈ ಮಧ್ಯ ಸಿಸಿಬಿ ಪೊಲೀಸರು ನಟ ಧನ್ವಿರ್ ಗೌಡ ಅವರನ್ನು ವಶಕ್ಕೆ ಪಡೆದು ತೀವ್ರ ನಡೆಸಿದ್ದಾರೆ.
ಜೈಲಿನಲ್ಲಿನ ವಿಡಿಯೋಗಳನ್ನು ನಟ ಧನ್ವೀರ್ ಅವರು ಬಿಡುಗಡೆ ಮಾಡಿದ್ದಾರೆ ಎಂಬ ಅನುಮಾನ ಸಿಸಿಬಿಗೆ ಬಂದಿದೆ. ನಟ ದರ್ಶನ್ ಬಂಧನ ಬಳಿಕ ಆರಂಭದಿಂದಲೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರೊಂದಿಗೆ ಜೈಲಿಗೆ ಧನ್ವೀರ್ ಗೌಡ ಆಗಾಗ ಭೇಟಿ ನೀಡುತ್ತಿದ್ದರು. ದರ್ಶನ್ ಆಪ್ತರ ಬಣದಲ್ಲಿ ಮುಖ್ಯವಾಗಿದ್ದ ನಟ ಧನ್ವೀರ್ ಅವರು ಡಿಬಾಸ್ ಕುಟುಂಬದೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಸದ್ಯ ಜೈಲಿನ ವಿಡಿಯೋ ಸೋರಿಕೆ ಹಿಂದೆ ಧನ್ವೀರ್ ಇದ್ದಾರೆಂಬ ಶಂಕೆ ಹಿನ್ನೆಲೆಅವರನ್ನು ವಶಕ್ಕೆ ಪಡೆದಿರುವ ಸಿಸಿಬಿ ವಿಚಾರಣೆ ನಡೆಸಿದೆ. ಸದ್ಯ ಅವರ ಮೊಬೈಲ್ನಲ್ಲಿ ಯಾವುದೇ ವಿಡಿಯೋಗಳು ಸಿಕ್ಕಿಲ್ಲ ಎನ್ನಲಾಗಿದೆ.

ಧನ್ವೀರ್ ಮೊಬೈಲ್ ವಶಕ್ಕೆ, ಲ್ಯಾಬ್ಗೆ ರವಾನೆ
ಭಾನುವಾರ ಸಂಜೆಯಿಂದ ನಟ ಧನ್ವೀರ್ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಜೈಲಿನ ವಿಡಿಯೋ ಬಿಡುಗಡೆಗೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳನ್ನು ಅವರ ಮುಂದಿಟ್ಟಿದ್ದಾರೆ. ಅವರ ಮೊಬೈಲ್ ವಶಕ್ಕೆ ಪಡೆದು ಅದರಲ್ಲಿನ ಮಾಹಿತಿ ಪಡೆಯಲು ಸಿಸಿಬಿ ಮುಂದಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಧನ್ವೀರ್ ಅವರ ಮೊಬೈಲ್ ಅನ್ನು ಕಳುಹಿಸಲಾಗಿದೆ. ಪರಿಶೀಲನೆ ಬಳಿಕ ಮತ್ತಷ್ಟು ಮಾಹಿತಿ ಲಭ್ಯವಾಗುವ ನಿರೀಕ್ಷೆ ಇದೆ.
ಜೈಲಿನ ವಿಡಿಯೋಗಳು ಹೇಗೆ ಸೋರಿಕೆ ಆಗಿವೆ. ಜೈಲಿನ ಭೇಟಿ, ವಿಡಿಯೋ ತೆಗೆದಿದ್ದು ಯಾರು?= ಅವುಗಳನ್ನು ಹಂಚಿಕೊಂಡಿದ್ದು ಸೇರಿದಂತೆ ಎಲ್ಲ ಆಯಾಮಗಳಲ್ಲಿ ಸಿಸಿಬಿ ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ. ಈ ಮಧ್ಯೆ ದರ್ಶನ್ ಆಪ್ತರಾದ ನಟ ಧನ್ವೀರ್ ಗೌಡ ಅವರನ್ನು ನಿರಂತರ ವಿಚಾರಣೆ ನಡೆಸಿದ್ದು ಸುದ್ದಿಯಾಗಿದೆ. ಈ ಮೂಲಕ ನಟನ ಅಭಿಮಾನಿಗಳಿಗೆ ಸಿಸಿಬಿ ಶಾಕ್ ನೀಡಿದೆ.
ಜೈಲಿನಲ್ಲಿ ತಿಂಗಳುಗಳಿಂದ ನಟ ದರ್ಶನ್ ಗೆ ಹಾಸಿಗೆ, ದಿಂಬು, ಬೆಡ್ ಸಿಗುತ್ತಿಲ್ಲ. ಈ ಸಂಬಂಧ ಅರ್ಜಿ ಹಾಕಿದ್ದಾರೆ. ಮತ್ತೊಂದೆಡೆ ಅವರಿರುವ ಜೈಲಿನಲ್ಲಿನ ನಟೋರಿಯಸ್ ಕ್ರಮಿನಲ್ ಗಳಿಗೆ ರಾಜಾತಿಥ್ಯ ಸಿಗುತ್ತಿವೆ ಎಂಬ ವಿಚಾರ ಗೊತ್ತಿದೆ. ಆ ಸಂಬಂಧದ ವಿಡಿಯೋಗಳು ಸೋರಿಕೆ ಆಗುತ್ತಿದ್ದಂತೆ ತನಿಖೆಗೆ ಇಳಿದ ಸಿಸಿಬಿ ಪೊಲೀಸರು ಹಲವರನ್ನು ಕಚೇರಿಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ನದ ಧ್ವನ್ವೀರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಈ ಸಂಬಂಧ ಇಂದು ಸೋಮವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ, ಸಿಎಂ ಸಿದ್ದರಾಮಯ್ಯ ಹಾಗೂ ಪೊಲೀಸ್ ಅಧಿಕಾರಗಳ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಯಲಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications