ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನೇಮಕಾತಿ ಹಗರಣ: ಎಸ್ಪಿ ಸೇರಿ ನಾಲ್ವರು ಪೊಲೀಸರ ಬಂಧನ

By Nayana
|
Google Oneindia Kannada News

ಬೆಂಗಳೂರು, ಜು.11: ಸರ್ಕಾರಿ ಹುದ್ದೆ ಕೊಡಿಸುವುದಾಗಿ ವಂಚನೆ ಮಾಡಿ ಕೋಟಿಗಟ್ಟಲೆ ಹಣ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಎಸ್‌ಪಿ ಸೇರಿದಂತೆ ಮೂವರು ಪೊಲೀಸ್‌ ಪೇದೆಗಳನ್ನು ಬಂಧಿಸಿದ್ದಾರೆ.

ಎಡಿಜಿಪಿ ರಾಘವೇಂದ್ರ ಹೆಚ್ ಔರಾದ್ಕರ್ ಅವರು ಕೆಲ ದಿನಗಳ ಹಿಂದಷ್ಟೇ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಪತ್ರವೊಂದನ್ನು ಬರೆದಿದ್ದರು. ಪಿಎಸ್ಐ ಪರೀಕ್ಷಾ ಆಕಾಂಕ್ಷಿಗಳಿಗೆ ಉದ್ಯೋಗ ಕೊಡಿಸುವುದಾಗಿ ಕೆಲವರು ವಂಚನೆ ಮಾಡುತ್ತಿದ್ದಾರೆ, ಈ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ಹೇಳಿದ್ದರು.

ಕಳ್ಳನನ್ನು ಹಿಡಿದ ಬೆಂಗಳೂರು ಪೇದೆಗೆ ಕೇರಳ ಹನಿಮೂನ್‌ ಪ್ಯಾಕೇಜ್‌ ಕಳ್ಳನನ್ನು ಹಿಡಿದ ಬೆಂಗಳೂರು ಪೇದೆಗೆ ಕೇರಳ ಹನಿಮೂನ್‌ ಪ್ಯಾಕೇಜ್‌

ಈ ಕುರಿತು ತನಿಖೆ ನಡೆಸಿದಾಗ 14 ಕೋಟಿ ರೂ. ವಂಚನೆ ಮಾಡಿರುವುದು ತಿಳಿದುಬಂದಿದೆ. ನೇಮಕಾತಿ ವಿಭಾಗದ ಎಸ್ಪಿ ರಾಜೇಶ್‌, ನಾಗರಾಜ್‌, ಲಕ್ಷ್ಮೀಕಾಂತ್‌, ಉಪ್ಪಾರಪೇಟೆ ಸಂಚಾರ ಪೊಲೀಸ್‌ ಠಾಣಾ ಮಹಿಳಾ ಮುಖ್ಯಪೇದೆ ಶಬೀನಾ ಬೇಗಂ ಎಂದು ಗುರುತಿಸಲಾಗಿದೆ.

CCB police arrested four cops including SP

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದ ಇಲಾಖೆ ಸಿಸಿಬಿ ತನಿಖೆಗೆ ವಹಿಸಿತ್ತು. ತನಿಖೆ ಮುಂದಾದ ಸಿಸಿಬಿ ತಂಡವನ್ನು ರಚನೆ ಮಾಡಿತ್ತು. ತನಿಖೆ ವೇಳೆ ವಂಚನೆ ಮಾಡುತ್ತಿರುವುದು ಸಾಬೀತಾಗಿತ್ತು. ಇದರಂತೆ ಎಸಿಪಿಯವರು ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ನಾಲ್ವರನ್ನು ಬಂಧನಕ್ಕೊಳಪಡಿಸಿದರು.

ನಾವು ಪೊಲೀಸ್ ಇಲಾಖೆಯಲ್ಲಿಯೇ ಇರುವುದರಿಂದ ಪಿಎಸ್ಐ ಹುದ್ದೆ ಕೊಡಿಸುತ್ತೇವೆಂದು ನಾಲ್ವರು ಆಕಾಂಕ್ಷಿಗಳಿಗೆ ಭರವಸೆಗಳನ್ನು ನೀಡುತ್ತಿದ್ದರು. ಶಬಾನಾ ಅವರು ಐಎಎಸ್ ಅಧಿಕಾರಿ ಎಂಬಂತೆ ಬಿಂಬಿಸಿದ್ದರು ಎಂದು ತಿಳಿದುಬಂದಿದೆ.

English summary
Bengaluru central crime branch police have arrested four police personnel regarding cheating case in recruitment, including SP Rajesh and other three constables. earlier ADGP recruitment cell Raghavendra auradkar had written a letter to director general of police regarding cheating case during recruitment in 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X