ಸಮುದ್ರದಲ್ಲಿ ತೇಲುವ ಈ ಅಂಬರ್ ಗ್ರಿಸ್ ಒಂದು ಕೆ.ಜಿ. ಬೆಲೆ 1 ಕೋಟಿ ರೂ. !
ಬೆಂಗಳೂರು, ಆ. 10: ಬೆಲೆಯಲ್ಲಿ ಚಿನ್ನವನ್ನು ಮೀರಿಸುವ ತಿಮಿಂಗಲದ ವೀರ್ಯ ಅಂಬರ್ ಗ್ರಿಸ್ ಮಾರಾಟ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದಾರೆ. ಐವರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು 80 ಕೋಟಿ ಮೌಲ್ಯದ ಅಂಬರ್ ಗ್ರಿಸ್ ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಪಂತ್, ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೆ.ಜಿ. ಒಂದು ಕೋಟಿ ರೂ. ಬೆಲೆ ಇರುವ ಅಂಬರ್ ಗ್ರಿಸ್ ಮಾರಾಟ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದಾರೆ. 80 ಕೋಟಿ ಮೌಲ್ಯದ 80 ಕೆ.ಜಿ. ಅಂಬರ್ ಗ್ರಿಸ್ನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಐವರು ಪೊಲೀಸರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. ಸಿಸಿಬಿ ಪೊಲೀಸರ ಕಾರ್ಯಾಚರಣೆಯನ್ನು ಶ್ಲಾಘಿಸಿ ತನಿಖಾ ತಂಡಕ್ಕೆ ಒಂದು ಲಕ್ಷ ರೂ. ಬಹುಮಾನ ಘೋಷಣೆ ಮಾಡಿದರು.
ಬೆಂಗಳೂರಿನ ಮಜೀದ್ ಪಾಷಾ, ಮಹಮದ್ ಮುನ್ನಾ, ಗುಲಾಬ್ ಚಂದ್, ಸಂತೋಷ್, ರಾಯಚೂರು ಮೂಲದ ಜಗನ್ನಾಥಾಚಾರ್ ಬಂಧಿತ ಆರೋಪಿಗಳು. ಇವರಿಂದ 80 ಕೆ.ಜಿ. ಮೌಲ್ಯದ ಅಂಬರ್ ಗ್ರಿಸ್ ಗಟ್ಟಿ, ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ರೆಡ್ ಮರ್ಕೈರಿ ತಾಮ್ರದ ಬಾಟಲಿ, ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ಪುರಾತನವಾದ ಸ್ಟೀಮ್ ಫ್ಯಾನ್ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕಾರ್ಯಾಚರಣೆ ಹೇಗೆ ?
ಸುಂಗಂಧ ದ್ರವ್ಯಕ್ಕೆ ಬಳಸುವ ಅಂಬರ್ ಗ್ರಿಸ್ಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅತಿ ದುಬಾರಿ ಬೆಲೆ. ಒಂದು ಕೆ.ಜಿ ಅಂಬರ್ ಗ್ರಿಸ್ ಒಂದು ಕೋಟಿ ರೂ.ಗೆ ಬೆಲೆಯಿದೆ. ಅದೇ ಚಿನ್ನ ಒಂದು ಕೆ.ಜಿ. 40 ರಿಂದ 50 ಲಕ್ಷ ರೂ. ಹೀಗಾಗಿ ಇದನ್ನು ಫ್ಲೋಟಿಂಗ್ ಗೋಲ್ಡ್ ಎಂದೇ ಕರೆಯುತ್ತಾರೆ. ಇದನ್ನು ಅಕ್ರಮವಾಗಿ ಸಂಗ್ರಹ ಮಾಡಿಕೊಂಡು ಮಾರಾಟ ಮಾಡಲು ಯತ್ನಿಸಿದ ಖಚಿತ ಮಾಹಿತಿ ಆಧರಿಸಿ ಡಿಸಿಪಿ ಕೆ.ಪಿ. ರವಿಕುಮಾರ್ ಮಾರ್ಗದರ್ಶನದಲ್ಲಿ ವಿಶೇಷ ವಿಚಾರಣಾ ದಳ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಐವರು ಆರೋಪಿಗಳು ಸಿಕ್ಕಿಬಿದ್ದಿದ್ದು ಅವರಿಂದ 80 ಕೋಟಿ ರೂ. ಮೌಲ್ಯದ ಅಂಬರ್ ಗ್ರಿಸ್ ವಶಪಡಿಸಿಕೊಳ್ಳಲಾಗಿದೆ.
ಕೆ.ಜಿ. ಹಳ್ಳಿ ಪೊಲೀಸರ ಮೊದಲ ಕಾರ್ಯಾಚರಣೆ: ಕೆ.ಜಿ. ಹಳ್ಳಿ ಪೊಲೀಸರು ಕರ್ನಾಟಕದಲ್ಲಿ ಮೊದಲ ಬಾರಿಗೆ ಅಂಬರ್ ಗ್ರಿಸ್ ಜಾಲವನ್ನು ಪತ್ತೆ ಮಾಡಿದ್ದರು. ಮಾಗಡಿ ಮುಖ್ಯ ರಸ್ತೆಯ ಸಯ್ಯದ್ ತಜ್ಮುಲ್ ಪಾಷಾ, ಪ್ಯಾಲೇಸ್ ಗುಟ್ಟಹಳ್ಳಿ ನಿವಾಸಿ ಸಲೀಂಪಾಷಾ, ಜೆ.ಪಿ.ನಗರ ನಿವಾಸಿ ರಫೀ ಉಲ್ಲಾ, ಹಾಗೂ ನಾಸೀರ್ ಪಾಷಾ ಎಂಬುವರನ್ನು ಕಾಡುಗೊಂಡನಹಳ್ಳಿ ಪೊಲೀಸರು ಬಂಧಿಸಿದ್ದರು.

ಏನಿದು ಅಂಬರ್ ಗ್ರಿಸ್
ಅಂಬರ್ ಗ್ರಿಸ್ ಎಂಬುದು ತಿಮಿಂಗಲದ ವೀರ್ಯ. ಇದು ಘನ ಮೇಣದ ವಾಸನೆಯಿಂದ ಕೂಡಿರುತ್ತದೆ. ಜಗತ್ತಿನಲ್ಲಿಯೇ ಅತಿ ದುಬಾರಿ ಬೆಲೆ ಬಾಳುವ ಸುಗಂಧ ದ್ರವ್ಯಕ್ಕೆ ಇದನ್ನು ಬಳಸುತ್ತಾರೆ. ಇದನ್ನು ಸುಗಂಧ ದ್ರವ್ಯ ಮತ್ತು ಔಷಧ ತಯಾರಿಕೆಯಲ್ಲಿ ಬಳಸುತ್ತಾರೆ. ಅರಬ್ ಹಾಗೂ ಚೀನಾ ದೇಶಗಳಲ್ಲಿ ಈ ಅಂಬಗ್ರಿಸ್ಗೆ ತುಂಬಾ ಬೇಡಿಕೆಯಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಕೆ.ಜಿ ಅಂಬರ್ ಗ್ರಿಸ್ ಬೆಲೆ ಒಂದು ಕೋಟಿ ರೂ.ಗೂ ಅಧಿಕ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಮೊದಲ ಪ್ರಕರಣ
ಕೋಲಾರ ಮೂಲದ ವ್ಯಕ್ತಿಯಿಂದ ವ್ಯವಹಾರ ಕುದುರಿಸಿ ತಂದಿದ್ದ ಸುಮಾರು ಎಂಟು ಕೋಟಿ ಮೌಲ್ಯದ 6.7 ಕೆ.ಜಿ. ತೂಕದ ಅಂಬರ್ ಗ್ರಿಸ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಕರ್ನಾಟಕ ಪೊಲೀಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಂತಹ ಅಪರೂಪದ ಪ್ರಕರಣ ದಾಖಲಿಸಿರುವುದು ಇದೇ ಮೊದಲು. ಅಂಬರ್ ಗ್ರಿಸ್ ಮಾರಾಟ ನಿಷೇಧವಾಗಿರುವ ಹಿನ್ನೆಲೆಯಲ್ಲಿ ವನ್ಯ ಜೀವಿ ಸಂರಕ್ಷಣಾ ಕಾಯ್ದೆ ಅಡಿ ಆರೋಪಿಗಳ ವಿರುದ್ಧ ಕೇಸು ದಾಖಲಿಸಿದ್ದರು. ಇದೀಗ ಸಿಸಿಬಿ ಪೊಲೀಸರು 80 ಕೋಟಿ ರೂ. ಮೌಲ್ಯದ ಅಂಬರ್ ಗ್ರಿಸ್ ಮಾರಾಟ ಜಾಲ ಪತ್ತೆ ಮಾಡಿದ್ದಾರೆ.
Recommended Video

ಯಾಕಿಷ್ಟು ಅಂಬರ್ ಗ್ರಿಸ್ಗೆ ಬೆಲೆ
ತಿಮಿಂಗಲ ಸಾಮಾನ್ಯವಾಗಿ ಮೀನುಗಳನ್ನು ತಿನ್ನುತ್ತದೆ. ಸ್ಪರ್ಮ್ ವೇಲ್ ಪ್ರಬೇಧದ ತಿಮಿಂಗಳು ಅಂಬರ್ ಗ್ರಿಸ್ ದ್ರವ್ಯವನ್ನು ಹೊರ ಹಾಕುತ್ತವೆ. ಕ್ರಮೇಣ ಅದ ಕಲ್ಲಿನಂತಾಗುತ್ತದೆ. ಈ ತಿಮಿಂಗಲ ತಿನ್ನುವ ಮೀನುಗಳು ಕೆಲವು ತಿಂಗಳು ಹೊಟ್ಟೆಯಲ್ಲಿ ಇರುವುದರಿಂದ ರಾಸಾಯನಿಕ ಪ್ರಕ್ರಿಯೆಗೆ ಒಳಗಾಗಿ ಅದು ಮೇಣದಂತಾಗುತ್ತದೆ. ಸುಗಂಧಿತವಾಗಿ ಪರಿವರ್ತನೆಯಗುವ ವೇಳೆಗೆ ಅದನ್ನು ವಾಂತಿ ಮಾಡುವ ಮೂಲಕ ಹೊರ ಹಾಕುತ್ತವೆ. ಇದು ಹಗುರವಾಗಿರುವ ಕಾರಣ ಸಮುದ್ರದಲ್ಲಿ ತೇಲಾಡುತ್ತದೆ. ಇದನ್ನೇ ಅಂಬರ್ ಗ್ರಿಸ್ ಎಂದು ಕರೆಯುತ್ತಾರೆ. ಸಮುದ್ರ ತೀರದಲ್ಲಿ ಈ ಅಪರೂದಪ ಅಂಬರ್ ಗ್ರಿಸ್ ಸಿಗುತ್ತದೆ. ಇದನ್ನು ಕಾನೂನು ಪ್ರಕಾರ ಕೊಳ್ಳುವುದು, ಮಾರುವುದು ಅಪರಾಧ. ಆದರೆ ವೈದ್ಯಕೀಯ ಸಂಶೋಧನೆಗೆ ಬಳಸಲಾಗುತ್ತದೆ. ಇಂತಹ ಅಪರೂಪದ ಅಂಬರ್ ಗ್ರಿಸ್ ಮಾರಾಟ ಮಾಡುವ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದಾರೆ.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
IPL 2026: ಬೆಂಗಳೂರು ಕ್ರಿಕೆಟ್ ಪ್ರೇಮಿಗಳೇ ಗಮನಿಸಿ, ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗುವ ಮುನ್ನ ಈ ಹೊಸ ರೂಲ್ಸ್ ಗೊತ್ತಿರಲಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?












Click it and Unblock the Notifications