ಆದಿತ್ಯ ಆಳ್ವ ನಿವಾಸದಲ್ಲಿ ಮಾದಕ ವಸ್ತು ಪತ್ತೆ; ಸಿಸಿಬಿ ಪೊಲೀಸ್
ಬೆಂಗಳೂರು, ಅಕ್ಟೋಬರ್ 19 : ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿರುವ ಬೆಂಗಳೂರು ಸಿಸಿಬಿ ಪೊಲೀಸರು ಆದಿತ್ಯ ಆಳ್ವಗಾಗಿ ಹುಡುಕಾಟ ಮುಂದುವರೆಸಿದ್ದಾರೆ. ಈ ಪ್ರಕರಣದಲ್ಲಿ ತಮ್ಮ ಹೆಸರು ಕೈ ಬಿಡುವಂತೆ ಆದಿತ್ಯ ಆಳ್ವ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಸಿಸಿಬಿ ಪೊಲೀಸರು ಆದಿತ್ಯ ಆಳ್ವ ಅರ್ಜಿಗೆ ಆಕ್ಷೇಪಣೆಯನ್ನು ಸಲ್ಲಿಸಿದ್ದಾರೆ. ಪೊಲೀಸರು ಸೆಪ್ಟೆಂಬರ್ 15ರಂದು ಹೆಬ್ಬಾಳದಲ್ಲಿರುವ ಆದಿತ್ಯ ಆಳ್ವ ಒಡೆತನದ 'ಹೌಸ್ ಆಫ್ ಲೈಫ್' ರೆಸಾರ್ಟ್ ಮೇಲೆ ದಾಳಿ ನಡೆಸಿದ್ದರು.
ಆದಿತ್ಯ ಆಳ್ವ ನಿವಾಸದ ಮೇಲೆ ದಾಳಿ ಮಾಡಿದಾಗ ಮಾತ್ರೆ, ಗಾಂಜಾ ಸೇರಿದಂತೆ ಮಾದಕ ವಸ್ತಗಳು ದೊರೆತಿವೆ ಎಂದು ಆಕ್ಷೇಪಣೆಯಲ್ಲಿ ಸಿಸಿಬಿ ಪೊಲೀಸರು ತಿಳಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ಅರ್ಜಿಯ ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಿದೆ.

ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ನಲ್ಲಿ ಆದಿತ್ಯ ಆಳ್ವ 6ನೇ ಆರೋಪಿ. ಸೆಪ್ಟೆಂಬರ್ 4ರಿಂದ ಅವರು ತಲೆಮರೆಸಿಕೊಂಡಿದ್ದಾರೆ. ಮುಂಬೈನಲ್ಲಿ ಆದಿತ್ಯ ಆಳ್ವ ಸಂಬಂಧಿ, ನಟ ವಿವೇಕ್ ಓಬೆರಾಯ್ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಹುಡುಕಾಟ ನಡೆಸಿದ್ದಾರೆ.
ಬೆಂಗಳೂರಿನ ಹೆಬ್ಬಾಳದಲ್ಲಿರುವ 'ಹೌಸ್ ಆಫ್ ಲೈಫ್' ರೆಸಾರ್ಟ್ನಲ್ಲಿ ಪಾರ್ಟಿಗಳು ನಡೆಯುತ್ತಿದ್ದವು. ಬಿಬಿಎಂಪಿ ವ್ಯಾಪ್ತಿಗೆ ಬರುವ ಈ ಪ್ರದೇಶದ ಲೈಸೆನ್ಸ್ ಅವಧಿ 2018ರಲ್ಲಿಯೇ ಮುಗಿದಿತ್ತು. ಆದರೂ ಅದನ್ನು ನವೀಕರಣ ಮಾಡದೆ ಪಾರ್ಟಿ ಮಾಡಲಾಗುತಿತ್ತು.
ಎಫ್ಐಆರ್ನಲ್ಲಿ ಪೊಲೀಸರು ಆದಿತ್ಯ ಆಳ್ವ ಹೆಸರು ಸೇರಿಸಿದ್ದಾರೆ. ಹೈಕೋರ್ಟ್ಗೆ ಸಲ್ಲಿಸಿರುವ ಅರ್ಜಿಯಲ್ಲಿ ಆಳ್ವ, "ನಾನು ಲಂಡನ್ನಲ್ಲಿ ಕಾನೂನು ಪದವಿ ಪಡೆದಿದ್ದೇನೆ. ಕುಟುಂಬಕ್ಕೆ ಸಮಾಜದಲ್ಲಿ ಗೌರವದ ಸ್ಥಾನವಿದೆ. ಆಧಾರ ರಹಿತವಾಗಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ"ಎಂದು ತಿಳಿಸಿದ್ದಾರೆ.
-
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ












Click it and Unblock the Notifications