ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ರೌಡಿ ಶೀಟರ್‌ ಮೇಲೆ ಗುಂಡು ಹಾರಿಸಿದ ಪೊಲೀಸರು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 17 : ಬೆಂಗಳೂರಿನಲ್ಲಿ ರೌಡಿ ಶೀಟರ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದರು. ರೌಡಿ ವಾಸು ಮೇಲೆ ದಾಳಿ ನಡೆಸಲಾಗಿದ್ದು, ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಂಗಳವಾರ ರಾತ್ರಿ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮರಿಯಪ್ಪನಪಾಳ್ಯದಲ್ಲಿ ರೌಡಿ ಶೀಟರ್ ವಾಸು ಅಲಿಯಾಸ್ ಅಂದ್ರಹಳ್ಳಿ ವಾಸು ಮೇಲೆ ಸಿಸಿಬಿ ಇನ್‌ಸ್ಪೆಕ್ಟರ್ ಮಂಜುನಾಥ್ ಗುಂಡು ಹಾರಿಸಿದರು.

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಕಾಲಿಗೆ ಗುಂಡೇಟು!ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಕಾಲಿಗೆ ಗುಂಡೇಟು!

rowdy sheeter

ಬ್ಯಾಡರಹಳ್ಳಿ, ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ವಾಸು ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಕೊಲೆ, ಕೊಲೆಯತ್ನ, ದರೋಡೆ, ಹಲ್ಲೆ ಸೇರಿದಂತೆ 10 ಪ್ರಕರಣಗಳಲ್ಲಿ ವಾಸು ಪೊಲೀಸರಿಗೆ ಬೇಕಾಗಿದ್ದ. ಒಂದೂವರೆ ವರ್ಷದಿಂದ ತಲೆಮರೆಸಿಕೊಂಡು ಓಡಾಡಿಕೊಂಡಿದ್ದ.

ಬೀದಿ ಜಗಳಕ್ಕೆ ಆಕ್ಸೆಂಚರ್ ಕಂಪನಿ ಟೆಕ್ಕಿ ಕೊಲೆ, ಆರೋಪಿ ಪೊಲೀಸರ ಬಲೆಗೆಬೀದಿ ಜಗಳಕ್ಕೆ ಆಕ್ಸೆಂಚರ್ ಕಂಪನಿ ಟೆಕ್ಕಿ ಕೊಲೆ, ಆರೋಪಿ ಪೊಲೀಸರ ಬಲೆಗೆ

ಮಂಗಳವಾರ ರಾತ್ರಿ ಮರಿಯಪ್ಪನಪಾಳ್ಯದಲ್ಲಿ ವಾಸು ಇರುವ ಬಗ್ಗೆ ಖಚಿತ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಮಂಜುನಾಥ್ ನೇತೃತ್ವದ ತಂಡವು ಸ್ಥಳಕ್ಕೆ ತೆರಳಿ, ವಾಸುವನ್ನು ಬಂಧಿಸಲು ಮುಂದಾಯಿತು.

ಲಂಚ ಕೇಳಿದ ತಿಲಕ್ ನಗರ ಠಾಣೆ ಇನ್ಸ್‌ಪೆಕ್ಟರ್ ಅಮಾನತುಲಂಚ ಕೇಳಿದ ತಿಲಕ್ ನಗರ ಠಾಣೆ ಇನ್ಸ್‌ಪೆಕ್ಟರ್ ಅಮಾನತು

ಪೊಲೀಸರನ್ನು ಕಂಡ ತಕ್ಷಣ ವಾಸು ಪರಾರಿಯಾಗಲು ಯತ್ನಿಸಿದ. ಈ ವೇಳೆ ಆತನನ್ನು ಸುತ್ತುವರೆದು ಶರಣಾಗಲು ಸೂಚಿಸಲಾಯಿತು. ಆಗ ಆರೋಪಿ ಚಾಕುವಿನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾದ. ಆಗ ಆತ್ಮರಕ್ಷಣೆಗಾಗಿ ಮಂಜುನಾಥ್ ವಾಸು ಕಾಲಿಗೆ ಗುಂಡು ಹಾರಿಸಿದರು.

English summary
CCB police opened fire at a rowdy Jnanabharathi police station limits on October 17, 2017. The accused, Vasu was wanted in several cases of robbery, attempt to murder in various police stations across the Bengaluru city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X