ಆಂಬಿಡೆಂಟ್ ಪ್ರಕರಣ: ಜನಾರ್ದನ ರೆಡ್ಡಿ ಸೇರಿ ಹಲವರ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ
ಬೆಂಗಳೂರು, ಫೆಬ್ರವರಿ 19: ಬಹುಕೋಟಿ ವಂಚನೆಯ ಆಂಬಿಡೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಂದು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಫರೀದ್ ಎಂಬಾತ ಆಂಬಿಡೆಂಟ್ ಸಂಸ್ಥೆ ಸ್ಥಾಪಿಸಿ ಅಧಿಕ ಬಡ್ಡಿ ನೀಡುವುದಾಗಿ ನಂಬಿಸಿ ನೂರಾರು ಜನರಿಂದ 600 ಕೋಟಿಗೂ ಹೆಚ್ಚು ಹಣ ಹೂಡಿಕೆ ಮಾಡಿಸಿಕೊಂಡು ವಂಚನೆ ಮಾಡಿದ್ದ. ಈ ಪ್ರಕರಣವನ್ನು ಸಿಸಿಬಿ ತನಿಖೆ ನಡೆಸುತ್ತಿತ್ತು.
ನನ್ನ 'ಪಾರಿಜಾತ' ಜಪ್ತಿಯಾಗಿಲ್ಲ, ಮನೆ ಮಾರಾಟಕ್ಕಿಲ್ಲ : ಗಾಲಿ ರೆಡ್ಡಿ
ಈ ಪ್ರಕರಣದಲ್ಲಿ ಫರೀದ್ನನ್ನು ಇಡಿ ಅಧಿಕಾರಿಗಳ ತನಿಖೆಯಿಂದ ಬಚಾವ್ ಮಾಡುತ್ತೇನೆ ಎಂದು ಫರೀದ್ನಿಂದ 20 ಕೋಟಿ ಹಣ ಪಡೆದಿದ್ದರು ಎನ್ನಲಾಗಿತ್ತು. ಸಿಸಿಬಿಯು ಜನಾರ್ದನ ರೆಡ್ಡಿ ಅವರನ್ನು ವಿಚಾರಣೆ ಕೂಡ ನಡೆಸಿತ್ತು. ಆಗ ಈ ಪ್ರಕರಣವು ರಾಜಕೀಯ ವಲಯದಲ್ಲಿಯೂ ಬಹು ಚರ್ಚೆಗೆ ಸಿಲುಕಿತ್ತು.
ಅಕ್ರಮ ಗಣಿಗಾರಿಕೆ : ಜನಾರ್ದನ ರೆಡ್ಡಿ ವಿರುದ್ಧ ಎಸ್ಐಟಿ ಚಾರ್ಜ್ಶೀಟ್
ಇದೀಗ ತನಿಖೆ ಪೂರ್ಣಗೊಳಿಸಿರುವ ಸಿಸಿಬಿ ಪೊಲೀಸರು 4000 ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದು, ಡೀಲ್ಬಗ್ಗೆ ಜನಾರ್ದನ ರೆಡ್ಡಿ, ಫರೀದ್ ನಡುವೆ ಮಾತುಕತೆ ನಡೆದಿದೆ ಎನ್ನಲಾಗಿದ್ದ ತಾಜ್ ವೆಸ್ಟೆಂಡ್ ಹೋಟೆಲ್ ನ ನೌಕರರು, ಜನಾರ್ದನ ರೆಡ್ಡಿ ಮನೆಗೆಲದವರು, ಇನ್ನೂ ಹಲವರನ್ನು ತನಿಖೆಗೊಳಪಡಿಸಿ ದೋಷಾರೋಪಪಟ್ಟಿ ಸಲ್ಲಿಸಲಾಗಿದೆ.