ರೇಸ್ಕೋರ್ಸ್ ಮೇಲೆ ಸಿಸಿಬಿ ದಾಳಿ: 96 ಲಕ್ಷ ರೂ ನಗದು ಜಪ್ತಿ
ಬೆಂಗಳೂರು, ಡಿಸೆಂಬರ್ 6: ನಗರದ ರೇಸ್ಕೋರ್ಸ್ನ ಟರ್ಫ್ ಕ್ಲಬ್ ಮೇಲೆ ಶುಕ್ರವಾರ ದಾಳಿ ನಡೆಸಿರುವ ಪೊಲೀಸರು 96 ಲಕ್ಷ ರೂ. ಹಣ ಜಪ್ತಿ ಮಾಡಿದ್ದಾರೆ.
ಟರ್ಫ್ ಕ್ಲಬ್ನಲ್ಲಿ ಅವ್ಯವಹಾರ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರ ಅಪರಾಧ ದಳದ (ಸಿಸಿಬಿ) ಪೊಲೀಸರು ದಾಳಿ ನಡೆಸಿದ್ದರು. ಸಿಸಿಬಿ ಡಿಸಿಪಿಗಳಾದ ಕುಲದೀಪ್ ಜೈನ್ ಹಾಗೂ ರವಿಕುಮಾರ್ ನೇತೃತ್ವದಲ್ಲಿ ನಾಲ್ವರು ಎಸಿಬಿ ಮತ್ತು 20 ಪೊಲೀಸ್ ಇನ್ಸ್ಪೆಕ್ಟರ್ಗಳ ತಂಡ ಈ ದಾಳಿ ನಡೆಸಿದೆ.
ಟರ್ಫ್ ಕ್ಲಬ್ ವಿರುದ್ಧ ವಿವಿಧ ವಂಚನೆ ಆರೋಪಗಳು ಕೇಳಿಬಂದಿದ್ದವು. ರೇಸ್ ಪಂದ್ಯಗಳಲ್ಲಿ ಕೆಲವು ಖಾಸಗಿ ಬುಕ್ಕಿಗಳು ಸಾರ್ವಜನಿಕರಿಂದ ಸಂಗ್ರಹ ಮಾಡಿದ ಹಣಕ್ಕೆ ಸರಿಯಾದ ದಾಖಲೆಗಳನ್ನು ನಿರ್ವಹಿಸಿರಲಿಲ್ಲ. ಸರ್ಕಾರಕ್ಕೆ ಜಿಎಸ್ಟಿ ಸಲ್ಲಿಸಿರಲಿಲ್ಲ. ಹಾಗೆಯೇ ವಿವಿಧ ಅವ್ಯವಹಾರಗಳನ್ನು ನಡೆಸುವ ಮೂಲಕ ವಂಚನೆ ಮಾಡಲಾಗುತ್ತಿದೆ ಎಂಬ ದೂರು ಬಂದಿತ್ತು. ಬುಕ್ಕಿಗಳು ಮತ್ತು ಕೌಂಟರ್ ಸಿಬ್ಬಂದಿ ನಡುವೆ ಒಳ ಒಪ್ಪಂದಗಳು ನಡೆಯುತ್ತಿದ್ದವು ಎನ್ನಲಾಗಿದೆ.

ದಾಳಿಯ ವೇಳೆ 96 ಲಕ್ಷ ರೂ. ನಗದು ಹಣವನ್ನು ಜಪ್ತು ಮಾಡಲಾಗಿದೆ. 40 ಮಂದಿ ಖಾಸಗಿ ಬುಕ್ಕಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಬುಕ್ಕಿಯಿಂದ ಒಂದು ಕೋಟಿ ರೂ ಬೆಟ್ಟಿಂಗ್ ನಡೆಸಿದರೆ ಹತ್ತು ಲಕ್ಷ ರೂ. ಕೌಂಟರ್ ಸಿಬ್ಬಂದಿಗೆ ಸಿಗುತ್ತಿತ್ತು. ಹೆಚ್ಚು ಬೆಟ್ಟಿಂಗ್ ಆದ ಕುದುರೆಯನ್ನು ಸೋಲಿಸಲು ಅವರೇ ಸಂಚು ರೂಪಿಸುತ್ತಿದ್ದರು. ಅದಕ್ಕಾಗಿ ಜಾಕಿಗೆ ಆಮಿಷವೊಡ್ಡುತ್ತಿದ್ದರು ಎಂದು ಹೇಳಲಾಗಿದೆ.
ನ.17ರಂದು ನಡೆದ ಈ ಅವಧಿಯ ಮೊದಲ ರೇಸ್ ವೇಳೆ ಒಂದು ಕುದುರೆ ಕಾಲುಮುರಿದುಕೊಂಡು ಬಿದ್ದಿತ್ತು. ಇದರಿಂದ ಹಿಂದೆ ಬರುತ್ತಿದ್ದ ಇನ್ನೂ ಎರಡು ಕುದುರೆಗಳು ಆಯತಪ್ಪಿ ಬಿದ್ದಿದ್ದವು. ಆಗ ಜಾಕಿಗಳು ಗಾಯಗೊಂಡಿದ್ದರು. ಹಿಂದೆ ಉಳಿದಿದ್ದ ಕುದುರೆ ಮುಂದೆ ಸಾಗಿ ಗುರಿಮುಟ್ಟಿತ್ತು. ಇದರಿಂದ ಆ ಕುದುರೆಗಳ ಮೇಲೆ ಬಾಜಿ ಕಟ್ಟಿದ್ದವರು ಗಲಾಟೆ ಮಾಡಿದ್ದರು. ಅದು ದೊಡ್ಡ ದಾಂದಲೆಗೆ ತಿರುಗಿ ಗಲಾಟೆ ನಡೆದಿತ್ತು. ಆಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾಗ ಅಲ್ಲಿನ ಅವ್ಯವಹಾರಗಳ ಬಗ್ಗೆ ಮಾಹಿತಿ ದೊರಕಿತ್ತು.
-
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications