ರೇಸ್ಕೋರ್ಸ್ ಮೇಲೆ ಸಿಸಿಬಿ ದಾಳಿ: 96 ಲಕ್ಷ ರೂ ನಗದು ಜಪ್ತಿ
ಬೆಂಗಳೂರು, ಡಿಸೆಂಬರ್ 6: ನಗರದ ರೇಸ್ಕೋರ್ಸ್ನ ಟರ್ಫ್ ಕ್ಲಬ್ ಮೇಲೆ ಶುಕ್ರವಾರ ದಾಳಿ ನಡೆಸಿರುವ ಪೊಲೀಸರು 96 ಲಕ್ಷ ರೂ. ಹಣ ಜಪ್ತಿ ಮಾಡಿದ್ದಾರೆ.
ಟರ್ಫ್ ಕ್ಲಬ್ನಲ್ಲಿ ಅವ್ಯವಹಾರ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರ ಅಪರಾಧ ದಳದ (ಸಿಸಿಬಿ) ಪೊಲೀಸರು ದಾಳಿ ನಡೆಸಿದ್ದರು. ಸಿಸಿಬಿ ಡಿಸಿಪಿಗಳಾದ ಕುಲದೀಪ್ ಜೈನ್ ಹಾಗೂ ರವಿಕುಮಾರ್ ನೇತೃತ್ವದಲ್ಲಿ ನಾಲ್ವರು ಎಸಿಬಿ ಮತ್ತು 20 ಪೊಲೀಸ್ ಇನ್ಸ್ಪೆಕ್ಟರ್ಗಳ ತಂಡ ಈ ದಾಳಿ ನಡೆಸಿದೆ.
ಟರ್ಫ್ ಕ್ಲಬ್ ವಿರುದ್ಧ ವಿವಿಧ ವಂಚನೆ ಆರೋಪಗಳು ಕೇಳಿಬಂದಿದ್ದವು. ರೇಸ್ ಪಂದ್ಯಗಳಲ್ಲಿ ಕೆಲವು ಖಾಸಗಿ ಬುಕ್ಕಿಗಳು ಸಾರ್ವಜನಿಕರಿಂದ ಸಂಗ್ರಹ ಮಾಡಿದ ಹಣಕ್ಕೆ ಸರಿಯಾದ ದಾಖಲೆಗಳನ್ನು ನಿರ್ವಹಿಸಿರಲಿಲ್ಲ. ಸರ್ಕಾರಕ್ಕೆ ಜಿಎಸ್ಟಿ ಸಲ್ಲಿಸಿರಲಿಲ್ಲ. ಹಾಗೆಯೇ ವಿವಿಧ ಅವ್ಯವಹಾರಗಳನ್ನು ನಡೆಸುವ ಮೂಲಕ ವಂಚನೆ ಮಾಡಲಾಗುತ್ತಿದೆ ಎಂಬ ದೂರು ಬಂದಿತ್ತು. ಬುಕ್ಕಿಗಳು ಮತ್ತು ಕೌಂಟರ್ ಸಿಬ್ಬಂದಿ ನಡುವೆ ಒಳ ಒಪ್ಪಂದಗಳು ನಡೆಯುತ್ತಿದ್ದವು ಎನ್ನಲಾಗಿದೆ.

ದಾಳಿಯ ವೇಳೆ 96 ಲಕ್ಷ ರೂ. ನಗದು ಹಣವನ್ನು ಜಪ್ತು ಮಾಡಲಾಗಿದೆ. 40 ಮಂದಿ ಖಾಸಗಿ ಬುಕ್ಕಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಬುಕ್ಕಿಯಿಂದ ಒಂದು ಕೋಟಿ ರೂ ಬೆಟ್ಟಿಂಗ್ ನಡೆಸಿದರೆ ಹತ್ತು ಲಕ್ಷ ರೂ. ಕೌಂಟರ್ ಸಿಬ್ಬಂದಿಗೆ ಸಿಗುತ್ತಿತ್ತು. ಹೆಚ್ಚು ಬೆಟ್ಟಿಂಗ್ ಆದ ಕುದುರೆಯನ್ನು ಸೋಲಿಸಲು ಅವರೇ ಸಂಚು ರೂಪಿಸುತ್ತಿದ್ದರು. ಅದಕ್ಕಾಗಿ ಜಾಕಿಗೆ ಆಮಿಷವೊಡ್ಡುತ್ತಿದ್ದರು ಎಂದು ಹೇಳಲಾಗಿದೆ.
ನ.17ರಂದು ನಡೆದ ಈ ಅವಧಿಯ ಮೊದಲ ರೇಸ್ ವೇಳೆ ಒಂದು ಕುದುರೆ ಕಾಲುಮುರಿದುಕೊಂಡು ಬಿದ್ದಿತ್ತು. ಇದರಿಂದ ಹಿಂದೆ ಬರುತ್ತಿದ್ದ ಇನ್ನೂ ಎರಡು ಕುದುರೆಗಳು ಆಯತಪ್ಪಿ ಬಿದ್ದಿದ್ದವು. ಆಗ ಜಾಕಿಗಳು ಗಾಯಗೊಂಡಿದ್ದರು. ಹಿಂದೆ ಉಳಿದಿದ್ದ ಕುದುರೆ ಮುಂದೆ ಸಾಗಿ ಗುರಿಮುಟ್ಟಿತ್ತು. ಇದರಿಂದ ಆ ಕುದುರೆಗಳ ಮೇಲೆ ಬಾಜಿ ಕಟ್ಟಿದ್ದವರು ಗಲಾಟೆ ಮಾಡಿದ್ದರು. ಅದು ದೊಡ್ಡ ದಾಂದಲೆಗೆ ತಿರುಗಿ ಗಲಾಟೆ ನಡೆದಿತ್ತು. ಆಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾಗ ಅಲ್ಲಿನ ಅವ್ಯವಹಾರಗಳ ಬಗ್ಗೆ ಮಾಹಿತಿ ದೊರಕಿತ್ತು.
-
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್











Click it and Unblock the Notifications