ಸಿದ್ಧಾರ್ಥ ಕನಸಿನ ಕೂಸು ಕೆಫೆ ಕಾಫಿ ಡೇ ಮುಂದುವರೆಸಲು ನಿರ್ದೇಶಕರ ತೀರ್ಮಾನ
ಬೆಂಗಳೂರು, ಜುಲೈ 31: ವಿಜಿ ಸಿದ್ಧಾರ್ಥ ಅವರ ಕನಸಿನ ಕೂಸಾಗಿದ್ದ ಕಾಫಿ ಕೆಫೆ ಡೇ ಮುಚ್ಚದಿರಲು ಸಿಸಿಡಿ ನಿರ್ದೇಶಕರು ತೀರ್ಮಾನ ತೆಗೆದುಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಸಿದ್ಧಾರ್ಥ ಅವರು ಕಾಣೆಯಾಗಿದ್ದ ದಿನದಿಂದ ಕಾಫಿ ಡೇ ಷೇರು ಕೂಡ ಕುಸಿದು ಒಂದೇ ದಿನದಲ್ಲಿ 800 ಕೋಟಿಗೂ ಅಧಿಕ ನಷ್ಟ ಅನುಭವಿಸಿತ್ತು. ಹೀಗಾಗಿ ಸಿಸಿಡಿಯ ಮುಂದಿನ ಭವಿಷ್ಯದ ಕುರಿತು ಬೆಂಗಳೂರಿನಲ್ಲಿರುವ ಕೇಂದ್ರ ಕಚೇರಿಯಲ್ಲಿ ನಿರ್ದೇಶಕರು ಸಭೆ ಕರೆದಿದ್ದರು.
ಸಭೆಯಲ್ಲಿ ಸಿದ್ಧಾರ್ಥ ಅವರ ಕನಸಿನ ಕೂಸಾದ ಕೆಫೆ ಕಾಫಿ ಡೇಯನ್ನು ಯಾವುದೇ ಕಾರಣಕ್ಕು ಮುಚ್ಚಬಾರದು ಎಂಬ ತೀರ್ಮಾನ ವನ್ನು ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ. ಕಾಫಿ ಡೇ ಷೇರು ಶೇ. 20 ರಷ್ಟು ಕುಸಿತ, ಮಂಗಳವಾರ ಶೇ. 18 ರಷ್ಟು ಕುಸಿತ ಕಂಡಿತ್ತು, ಒಟ್ಟು 800 ಕೋಟಿಗೂ ಅಧಿಕ ನಷ್ಟವಾಗಿತ್ತು.

ವಿಜಿ ಸಿದ್ಧಾರ್ಥ ಅವರು ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದರು. ಒಂದು ದಿನ ಪೂರ್ತಿ ಕಾರ್ಯಾಚರಣೆ ನಡೆಸಿದ್ದರೂ ಅವರು ಪತ್ತೆಯಾಗಿರಲಿಲ್ಲ. ಬಳಿಕ ಇಂದು ಬುಧವಾರ ಮೀನುಗಾರರು ನೇತ್ರಾವತಿ ನದಿಯಲ್ಲಿ ಹೋಗುತ್ತಿರುವಾಗ ನದಿ ಮಧ್ಯದಲ್ಲಿ ಮೃತದೇಹ ಪತ್ತೆಯಾಗಿತ್ತು. ಬಳಿಕ ದಡಕ್ಕೆ ತಂದು ಪೊಲೀಸರಿಗೆ ಮಾಹಿತಿ ನೀಡಿದ್ದರು.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications