ಒಂಟಿ ಮಹಿಳೆ ಅಡ್ಡಗಟ್ಟಿ ಅಸಭ್ಯವಾಗಿ ವರ್ತಿಸಿದ ಚೋಟು ಬಂಧನ
ಜೆಸಿನಗರ, ಅ. 28: ಮುಂಜಾನೆ ವಾಯುವಿಹಾರಕ್ಕಾಗಿ ಮನೆಯಿಂದ ಹೊರ ಹೋಗುತ್ತಿದ್ದ ಒಂಟಿ ಮಹಿಳೆಯನ್ನು ಅಟ್ಟಗಟ್ಟಿ ಅಸಭ್ಯವಾಗಿ ವರ್ತಿಸಿ, ಪ್ಯಾಂಟ್ ಬಿಚ್ಚಲು ಯತ್ನಿಸಿದ್ದ ಆರೋಪಿಯನ್ನು ಜೆಸಿ ನಗರ ಪೊಲೀಸರು ಬಂಧಿಸಿದ್ದಾರೆ.
ಜೆಸಿ ನಗರದ ಮೋದಿ ಗಾರ್ಡನ್ ಸಮೀಪ ಇಕ್ಕಟ್ಟಾದ ರಸ್ತೆಯಲ್ಲಿ ಮಹಿಳೆಯೊಬ್ಬರು ಬೆಳಗ್ಗೆ ವಾಕಿಂಗ್ ಹೋಗುವುದನ್ನು ನೋಡಿದ ಆರೋಪಿ 20 ವರ್ಷ ವಯಸ್ಸಿನ ಟಾಟಾ ದತ್ತು ಅಲಿಯಾಸ್ ಚೋಟು ಅವರನ್ನು ಅಟ್ಟಗಟ್ಟಿ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಪ್ಯಾಂಟ್ ಬಿಚ್ಚಿ ಲೈಂಗಿಕ ಶೋಷಣೆ ಮಾಡಲು ಯತ್ನಿಸಿದ್ದಾನೆ.
ಇದ್ದಕ್ಕಿದ್ದಂತೆ ನಡೆದ ಘಟನೆಯಿಂದ ವಿಚಲಿತರಾದರೂ ಆ ಮಹಿಳೆ ಜೋರಾಗಿ ಕೂಗಾಡಿದ್ದಾರೆ. ಚಪ್ಪಲಿ ತೆಗೆದು ಆರೋಪಿಗೆ ಬಾರಿಸಿದ್ದಾರೆ. ಘಟನಾ ಸ್ಥಳದ ಬಳಿ ಇದ್ದ ಮನೆಗಳಲ್ಲಿ ಲೈಟ್ ಆನ್ ಆಗುತ್ತಿದ್ದಂತೆ ಅಲ್ಲಿಂದ ಪರಾರಿಯಾಗಿದ್ದಾನೆ.

ಜೆಸಿ ನಗರ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ಮಂಗಳವಾರದಂದು ದೂರು ದಾಖಲಿಸಿದ್ದಾರೆ. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿ ಬಗ್ಗೆ ಮಾಹಿತಿ ಪಡೆಯಲು ಡಿಜೆ ಹಳ್ಳಿ ಠಾಣೆಗೆ ವಾಟ್ಸಾಪ್ ಮಾಡಲಾಗಿದೆ. ಅಲ್ಲಿನ ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಯಲ್ಲಿ ಮಾಸ್ಕ್ ಧರಿಸಿದ್ದರೂ ಚೋಟುವನ್ನು ಗುರುತಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ಸುಲಭವಾಗಿ ಚೋಟು ಟ್ರ್ಯಾಕ್ ಮಾಡಿ ಬಂಧಿಸಲಾಗಿದ್ದು, ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.

Recommended Video
''ಮಂಗಳವಾರ ಬೆಳಗ್ಗೆ 5.05 ರ ಸುಮಾರಿಗೆ ಈ ಘಟನೆ ನಡೆದಿದ್ದು, ಮಧ್ಯಾಹ್ನ ನಮ್ಮ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ನೀಡಿದ ಒಂದು ಗಂಟೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಡಿಜೆ ಹಳ್ಳಿ ಗಲಭೆ ವೇಳೆ ಚೋಟು ಕಾಣಿಸಿಕೊಂಡಿದ್ದ ಹಾಗೂ ಹಲವು ರಾಬರಿ ಕೇಸ್ ನಲ್ಲಿ ಸಿಕ್ಕಿಬಿದ್ದಿದ್ದ. ಆ ಠಾಣೆಯವರು ಸುಲಭವಾಗಿ ಗುರುತಿಸಿ ನಮ್ಮ ತನಿಖಾಧಿಕಾರಿಗಳಿಗೆ ನೆರವಾದರು. ಘಟನಾ ಸ್ಥಳದಿಂದ ತನ್ನ ಮನೆಗೆ ಚೋಟು ಓಡಿ ಹೋಗುವ ದೃಶ್ಯವನ್ನು ವಿವಿಧ ಸಿಸಿಟಿವಿಯಲ್ಲಿ ಗುರುತಿಸಿ ಆತನನ್ನು ಹಿಂಬಾಲಿಸಿ ಬಂಧಿಸಲಾಗಿದೆ. ಬಂಧಿತನ ಮೇಲೆ ಐಪಿಸಿ ಸೆಕ್ಷನ್ 354, 354ಎ ಅನ್ವಯ ದೂರು ದಾಖಲಿಸಲಾಗಿದೆ'' ಎಂದು ಜೆಸಿನಗರ ಠಾಣಾಧಿಕಾರಿ ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications