ಗಣೇಶ ಮೂರ್ತಿ ಕೂರಿಸಿದರೆ ಸಿಸಿಟಿವಿ ಕ್ಯಾಮರಾ ಅಳವಡಿಸಲೇಬೇಕು
ಬೆಂಗಳೂರು, ಸೆಪ್ಟೆಂಬರ್ 12: ಗಣೇಶ ಚತುರ್ಥಿ ಶಾಂತಿಯುತವಾಗಿ ನಡೆಯಬೇಕು ಎಂಬ ಕಳಕಳಿಯಿಂದ ಪ್ರತಿ ಗಣೇಶ ಪೆಂಡಾಲ್ ನಲ್ಲಿಯೂ ಸಿಸಿಟಿವಿ ಕ್ಯಾಮರಾ ಗಳನ್ನು ಅಳವಡಿಸಲು ನಗರ ಪೊಲೀಸ್ ಕಮಿಷನರ್ ಸೂಚನೆ ನೀಡಿದ್ದಾರೆ.
ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಧ್ವನಿವರ್ಧಕಗಳನ್ನು ಮಾತ್ರ ಬಳಕೆ ಮಾಡಬೇಕು, ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ಆಗುವವರೆಗೂ ಪ್ರತಿಷ್ಠಾಪನೆ ಸ್ಥಳದಲ್ಲಿ ಆಯೋಜಕರ ಪರವಾದ ಕಾರ್ಯಕರ್ತರು ಇರಬೇಕು. ಪೆಂಡಾಲ್ ನ್ನು ಮತ್ತು ಗಣೇಶ ವಿಗ್ರಹವನ್ನು ಖಾಳಿ ಬಿಟ್ಟು ಹೋಗಬಾರದು ಎಂದು ತಿಳಿಸಿದ್ದಾರೆ.
ದಿನದ 24 ಗಂಟೆಯೂ ಆಯೋಜಕರು ಸ್ಥಳದಲ್ಲಿಯೇ ಇದ್ದು ಏನು ಅಪಾಯವಾಗದಂತೆ ಎಚ್ಚರವಹಿಸಬೇಕು, ವಿವಾದಿತ ಸ್ಥಳದಲ್ಲಿ ಪ್ರತಿಷ್ಠಾಪನೆ ಮಾಡಬಾರದು, ಪ್ರತಿಷ್ಠಾಪನೆ ಮಾಡುವ ಸ್ಥಳದ ಮಾಲೀಕರ ಒಪ್ಪಿಗೆಯನ್ನು ಕಡ್ಡಾಯವಾಗಿ ಪಡೆದು ಅದನ್ನು ವ್ಯಾಪ್ತಿಯ ಪೊಲೀಸ್ ಠಾಣೆಗೆ ನೀಡಬೇಕು ಎಂದು ಸೂಚಿಸಿದ್ದಾರೆ.

ಗಣೇಶ ವಿಸರ್ಜನೆ ಸಮಯದಲ್ಲಿ ಸಿಡಿಮದ್ದು ಸಿಡಿಸಬಾರದು
ಗಣೇಶ ವಿಸರ್ಜನಾ ಮೆರವಣಿಗೆಯು ಸೂಕ್ಷ್ಮ ಸ್ಥಳ, ಅತೀ ಸೂಕ್ಷ್ಮ ಸ್ಥಳ ಹಾಗೂ ಪ್ರಾರ್ಥನಾ ಸ್ಥಳಗಳ ಮುಂಭಾಗದಲ್ಲಿ ಸಾಗುವಾಗ ಸಿಡಿಮದ್ದು, ಪಟಾಕಿಗಳನ್ನು ಸಿಡಿಸದಂತೆ ನೋಡಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬಲವಂತವಾಗಿ ವಂತಿಗೆ ಸ್ವೀಕರಿಸಿದರೆ ಕಠಿಣ ಕ್ರಮ
ಗಣೇಶ ಪ್ರತಿಷ್ಠಾಪನೆ ಹಾಗೂ ಇತರೆ ಕಾರ್ಯಕ್ರಮಗಳ ಆಯೋಜನೆಗಾಗಿ ಬಲವಂತವಾಗಿ ಹಾಗೂ ಕಾನೂನು ಬಾಹಿರವಾಗಿ ವಂತಿಗೆ ಸ್ವೀಕರಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಪ್ಪರ ಬೆಂಕಿ ನಂದಿಸುವ ಸಾಮಗ್ರಿ ಇರಬೇಕು
ಚಪ್ಪರದಲ್ಲಿ ಬೆಂಕಿ ನಂದಿಸುವ ಸಾಮಗ್ರಿಗಳನ್ನು ಇಟ್ಟುಕೊಂಡಿರಬೇಕು, ಯಾವುದೇ ಕಾರಣಕ್ಕೂ ಪೆಂಡಾಲ್ ನಲ್ಲಿ ಅಡುಗೆ ಮಾಡಬಾರದು, ಸಂಭ್ರಮದ ಆಚರಣೆಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು.

ಆಯೋಜಕರು ಪಾಲಿಸಬೇಕಾದಂತೆ ಕೆಲವು ಸೂಚನೆಗಳು
-ಗಣೇಶ ಪ್ರತಿಷ್ಠಾಪನಾ ಸ್ಥಳದಲ್ಲಿ 24 ಗಂಟೆಯೂ ಸಮರ್ಪಕ ಬೆಳಕು ಇರುವಂತೆ ನೋಡಿಕೊಳ್ಳಬೇಕು
-ವಿದ್ಯುತ್ ಸಂಪರ್ಕ ಹಾಗೂ ವಿದ್ಯುತ್ ಅಲಂಕಾರಕ್ಕೆ ಸಂಬಂಧಿಸಿದಂತೆ ಬೆಸ್ಕಾಂನಿಂದ ಅನುಮತಿ ಪಡೆಯಬೇಕು
-ಗಣೇಶ ವಿಸರ್ಜನಾ ಸಮಯ ವೇಳೆ ಯಾವುದೇ ರೀತಿಯ ಅಪರಾಧ ನಡೆಯದಂತೆ, ಕಾನೂನು ಸುವ್ಯವಸ್ಥೆಗೆ ಭಂಗ ಆಗದಂತೆ ಎಚ್ಚರವಹಿಸಬೇಕು
-ವಿಸರ್ಜನಾ ಮೆರವಣಿಗೆಯಲ್ಲಿ ಸ್ವಯಂಸೇವಕರಿಗೆ ಗುರುತಿನ ಚೀಟಿ, ಬ್ಯಾಡ್ಜ್, ಟೀ-ಶರ್ಟ್, ಕ್ಯಾಪ್ ಗಳನ್ನು ನೀಡಿ ಶಾಂತರೀತಿಯಿಂದ ಮೆರವಣಿಗೆ ವಿಸರ್ಜನಾ ಸ್ಥಳ ತಲುಪುವಂತೆ ಸಹಕರಿಸಬೇಕು
-ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಸ್ಥಳದಲ್ಲಿ ಮೊದಲೇ ಪೊಲೀಸರಿಗೆ ತಿಳಿಸಿ ಬಿಗಿ ಬಂದೋಬಸ್ತ್ ಮಾಡಿಕೊಳ್ಳಬೇಕು
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ












Click it and Unblock the Notifications