ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣ; ಬಾಲಚಂದ್ರ ಜಾರಕಿಹೊಳಿ ತುರ್ತು ಸುದ್ದಿಗೋಷ್ಠಿ
ಬೆಂಗಳೂರು, ಮಾರ್ಚ್ 7: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣದ ದೂರು ಹಿಂಪಡೆಯಲು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಮುಂದಾಗಿರುವ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಸಹೋದರ ಬಾಲಚಂದ್ರ ಜಾರಕಿಹೊಳಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದಾರೆ.
ಬೆಂಗಳೂರಿನ ಅರಮನೆ ರಸ್ತೆಯ ಕುಮಾರ ಕೃಪಾ ಗೆಸ್ಟ್ಹೌಸ್ನಲ್ಲಿ ಸುದ್ದಿಗೋಷ್ಠಿ ನಡೆಸಿರುವ ಅವರು, ಯುವತಿಯನ್ನು ಮುಂದೆ ಬಿಟ್ಟು ಹನಿಟ್ರ್ಯಾಪ್ ಮಾಡಲಾಗಿದೆ ಎಂದು ದೂರಿದ್ದಾರೆ. ಈ ಕೇಸ್ ಅನ್ನು ದಿನೇಶ್ ಅವರು ವಾಪಸ್ ಪಡೆದುಕೊಂಡರೂ ನಾವು ಸುಮ್ಮನಿರುವುದಿಲ್ಲ. ನಾವು ಪ್ರಕರಣ ದಾಖಲಿಸುತ್ತೇವೆ. ಪ್ರಕರಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ರಮೇಶ್ ಜಾರಕಿಹೊಳಿ ಅವರು ಯುವತಿಯೊಂದಿಗಿದ್ದ ವಿಡಿಯೋ ಸಿ.ಡಿಯೊಂದು ಈಚೆಗೆ ಬೆಳಕಿಗೆ ಬಂದಿದ್ದು, ಕೆಲಸ ಕೊಡಿಸುವ ನೆಪದಲ್ಲಿ ಯುವತಿಯನ್ನು ಸಚಿವರು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಭಾನುವಾರ ಈ ದೂರು ಹಿಂಪಡೆಯುವುದಾಗಿ ದಿನೇಶ್ ಕಲ್ಲಹಳ್ಳಿ ಮಾತನಾಡಿದ್ದರು. ಮುಂದೆ ಓದಿ...

"ಬಿಜೆಪಿಗೆ ಕೆಟ್ಟ ಹೆಸರು ತರುವ ಹುನ್ನಾರ"
ಪ್ರಸ್ತುತ ಐದು ರಾಜ್ಯಗಳಲ್ಲಿ ಚುನಾವಣೆ ಘೋಷಣೆಯಾಗಿದೆ. ಹೀಗಾಗಿಯೇ ಬಿಜೆಪಿಗೆ ಕೆಟ್ಟ ಹೆಸರು ಬರಬೇಕು ಎಂಬ ಉದ್ದೇಶವೂ ಇದರ ಹಿಂದಿದೆ. ಈ ಪ್ರಕರಣದಲ್ಲಿ ಯುವತಿಯ ಹಿಂದೆ ನಾಲ್ಕು ಪುರುಷರಿದ್ದಾರೆ. ಆ ನಾಲ್ಕು ಜನರು ಯಾರು ಎಂದು ತಿಳಿಯಬೇಕು. ಆಗ ಪ್ರಕರಣ ಸಂಪೂರ್ಣವಾಗಿ ಹೊರಗೆ ಬರಲಿದೆ. ಸತ್ಯ ತಿಳಿಯಲಿದೆ ಎಂದು ಆರೋಪಿಸಿದ್ದಾರೆ.

"ರಾಜಕೀಯವಾಗಿ ರಮೇಶ್ ಜಾರಕಿಹೊಳಿ ಮುಗಿಸಲು ಷಡ್ಯಂತ್ರ"
ಈಗಲೂ ನಾನು ಮಾತನಾಡುತ್ತಿರುವುದನ್ನು ಷಡ್ಯಂತ್ರ ಮಾಡಿದವರು ನೋಡುತ್ತಿದ್ದಾರೆ. ದಿನೇಶ್ ಕಲ್ಲಹಳ್ಳಿ ಅವರನ್ನು ಈ ಪ್ರಕರಣದಲ್ಲಿ ದಾರಿ ತಪ್ಪಿಸಲಾಗಿದೆ. ಅವರಿಗೆ ಮಾಹಿತಿ ಕೊಟ್ಟಿರುವವರು ಅವರನ್ನು ದಾರಿ ತಪ್ಪಿಸಿರುವ ಸಾಧ್ಯತೆಯಿದೆ. ರಾಜಕೀಯವಾಗಿ ರಮೇಶ್ ಜಾರಕಿಹೊಳಿ ಮುಗಿಸಲು ಷಡ್ಯಂತ್ರ ನಡೆದಿದೆ. ರಮೇಶ್ ಜಾರಕಿಹೊಳಿ ಅವರು ದೂರು ಕೊಡದಿದ್ದರೆ ನಾವೇ ಕೊಡುತ್ತೇವೆ. ಅವರನ್ನು ಸಂಪರ್ಕಿಸಿ ಅವರು ಒಪ್ಪಿದ ಬಳಿಕ ನಾವು ದೂರು ಕೊಡುತ್ತೇವೆ ಎಂದು ತಿಳಿಸಿದ್ದಾರೆ.

"ಸಚಿವ ಸ್ಥಾನ ಮರಳಿಸುವ ಬಗ್ಗೆ ಮಾತುಕತೆ ನಡೆಸುತ್ತೇವೆ"
ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ಅವರಿಗೆ ಸಚಿವ ಸ್ಥಾನ ಮರಳಿಸುವ ಬಗ್ಗೆ ನಾವು ಪಕ್ಷದ ವೇದಿಕೆಯಲ್ಲಿ ಮಾತನಾಡುತ್ತೇನೆ. ಮೊದಲು ಹೊರಗೆ ಬಂದು ರಮೇಶ್ ಜಾರಕಿಹೊಳಿ ಅವರು ದೂರು ಕೊಡಲಿ. ಈ ಪ್ರಕರಣ ಯಾವಾಗ ಏನು ತಿರುವು ಪಡೆದುಕೊಳ್ಳುತ್ತದೆ ಎಂಬುದು ಗೊತ್ತಿಲ್ಲ. ರಾಜೀನಾಮೆ ಕೊಟ್ಟ ದಿನ ರಮೇಶ್ ಸಿಕ್ಕಿದ್ದರು, ಬಳಿಕ ಅವರು ಸಿಕ್ಕಿಲ್ಲ ಎಂದು ಹೇಳಿದ್ದಾರೆ.
Recommended Video

ಸೂಕ್ತ ತನಿಖೆಗೆ ಬಾಲಚಂದ್ರ ಜಾರಕಿಹೊಳಿ ಆಗ್ರಹ
ದಿನೇಶ್ ಕಲ್ಲಹಳ್ಳಿ ಈಗ ದೂರು ವಾಪಸ್ ಪಡೆದುಕೊಳ್ಳುವ ಮಾತನ್ನಾಡುತ್ತಿದ್ದಾರೆ. ಆದರೆ ನಾವು ಸುಮ್ಮನಾಗುವುದಿಲ್ಲ. ಈ ಪ್ರಕರಣದ ಕುರಿತು ವಕೀಲರೊಂದಿಗೆ ಚರ್ಚಿಸಿ ಮುಂದುವರೆಯುತ್ತೇವೆ. ಈಗಾಗಲೇ ಬಿಡುಗಡೆ ಆಗಿರುವ 'ಸಿ.ಡಿ'ಯನ್ನು ಪರೀಕ್ಷೆಗೆ ಕಳುಹಿಸಬೇಕು. ಈ ಸಿ.ಡಿ ನಕಲಿ ಎಂದು ನಾನು ಈ ಮೊದಲು ಹೇಳಿದ್ದೇನೆ, ಈಗಲೂ ಹೇಳುತ್ತೇನೆ. ಈ ಸಿ.ಡಿ ನಕಲಿ ಎಂದು ನಾವು ನೀವು ಹೇಳಿದರೆ ಆಗುವುದಿಲ್ಲ, ಅದನ್ನು ಪರೀಕ್ಷೆ ಮಾಡಿ ತನಿಖೆ ಬಳಿಕ ನಕಲಿ ಎಂದು ಬಯಲಾಗಬೇಕು ಎಂದು ಆಗ್ರಹಿಸಿದ್ದಾರೆ.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications