Namma Metro: ಮೆಟ್ರೋ ಪಿಲ್ಲರ್ಗಳ ಮೇಲೆ ಸೆಲೆಬ್ರೆಟಿಗಳ ವರ್ಣಮಯ ಚಿತ್ರ ಕಲಾಕೃತಿಗಳು
ಬೆಂಗಳೂರು, ಫೆಬ್ರವರಿ 13: ಬೆಂಗಳೂರಿನ ಜನರಿಗೆ ಸಮಯ ಉಳಿತಾಯದ ಸಾರಿಗೆ ಸೇವೆ ನೀಡುತ್ತಿರುವ ನಮ್ಮ ಮೆಟ್ರೋ ಪಿಲ್ಲಟ್, ಕಟ್ಟಡ ಗೋಡೆಗಳ ಸುಂದರೀಕರಣ ಹೆಚ್ಚಿಸಲು ಹಲವು ಉಪಕ್ರಮ ಕೈಗೊಳ್ಳಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ 50ಕ್ಕೂ ಹೆಚ್ಚು ಮೆಟ್ರೋ ಸ್ಥಂಭಗಳಿಗೆ ಚನ್ನಪಟ್ಟಣದ ಕಲೆಯನ್ನು ಬಿಂಬಿಸುವ ಕಲಾಕೃತಿಗಳನ್ನು ಚಿತ್ರಿಸಲಾಗಿದೆ. ಸೆಲೆಬ್ರಟಿಗಳ ಚಿತ್ರಗಳು ಪಿಲ್ಲರ್ಗಳ ಮೇಲೆ ಚಿತ್ರಿಸಲಾಗಿದೆ.
ಬಯೋಕಾನ್ ಫೌಂಡೇಷನ್ನ ಸಿಎಸ್ಆರ್ ಅಡಿಯಲ್ಲಿ ನಗರದ ಹುಸ್ಕೂರು ಗೇಟ್ನಿಂದ ಹೆಬ್ಬಗೋಡಿ ಮೆಟ್ರೋ ನಿಲ್ದಾಣದವರೆಗೂ ಬರುವ 50 ಮೆಟ್ರೋ ಪಿಲ್ಲರ್ಗಳ ಮೇಲೆ ಚೆನ್ನಪಟ್ಟಣದ ಕಲೆಯನ್ನು ಬಿಂಬಿಸುವ ಕಲಾಕೃತಿ ಸುಂದರವಾಗಿ ಚಿತ್ರಿಸಲಾಗಿದೆ. "ಪಿಲ್ಲರ್ ಆಫ್ ಬೆಂಗಳೂರು- ಪ್ರತಿನಿತ್ಯದ ಚಾಂಪಿಯನ್ಗಳ ಸಂಭ್ರಮಾಚರಣೆ" ಶೀರ್ಷಿಕೆಯಡಿ ಈ ಚಿತ್ತಾರ ಬಿಡಿಸಿ ನಗರದ ಅಂದೆ ಹೆಚ್ಚಿಸುವ ಪ್ರಯತ್ನ ಮಾಡಿದೆ.

ನಮ್ಮ ದೈನಂದಿನ ಜೀವನದ ಚಾಪಿಂಯನ್ಸ್ಗಳಾದ ಹೂ ಮಾರಾಟಗಾರರು, ಎಲೆಕ್ಟ್ರೀಷಿಯನ್, ಟೈಲರ್ಗಳು, ಪ್ಲಂಬರ್ಸ್, ವೈದ್ಯರು, ದಾದಿಯರು, ಸಂಗೀತಗಾರರು, ವಿಜ್ಞಾನಿಗಳು, ಐಟಿ ವೃತ್ತಿಪರರು, ಏರೋಸ್ಪೇಸ್ ಸೇರಿದಂತೆ ನಮ್ಮ ಪ್ರತಿನಿತ್ಯದ ಜೀವನದ ಭಾಗವಾಗಿರುವ ಎಲ್ಲಾ ಪಾತ್ರದಾರಿಗಳ ಚಿತ್ರವನ್ನು ಚನ್ನಪಟ್ಟಣದ ಗೊಂಬೆಗಳಂತೆ ಸುಂದರವಾದ ಕೆತ್ತನೆಯ ರೀತಿಯಲ್ಲಿ ಚಿತ್ರಿಸಲಾಗಿದೆ.
ಬಯೋಕಾನ್ ಫೌಂಡೇಶನ್ನ ಮಿಷನ್ ನಿರ್ದೇಶಕ ಡಾ. ಅನುಪಮಾ ಶೆಟ್ಟಿ ಮಾತನಾಡಿ, ಪಿಲ್ಲರ್ಸ್ ಆಫ್ ಬೆಂಗಳೂರು ನಮ್ಮ ದೈನಂದಿನ ಸೆಲೆಬ್ರೆಟೀಸ್ಗಳನ್ನು ನೆನೆಯಲು ಈ ವಿನೂತನ ಉಪಕ್ರಮವನ್ನು ಕೈಗೆತ್ತಿಕೊಳ್ಳಲಾಗಿದೆ.
ಹುಸ್ಕೂರ್ ಗೇಟ್ ನಿಂದ ಪ್ರಾರಂಭವಾಗುವ ಮೆಟ್ರೋ ಪಿಲ್ಲರ್ಗಳ ಮೇಲೆ ಕ್ರಿಯಾತ್ಮಕವಾಗಿ ಹಾಗೂ ನಮ್ಮ ನಗರದ ಸಾಂಪ್ರದಾಯಿಕ ಕಲೆಯನ್ನು ಬಿಂಬಿಸುವ ಕಲಾ ಕೃತಿಗಳನ್ನು ಚಿತ್ರಿಸಲಾಗಿದೆ. ಇವೆಲ್ಲ ಬಣ್ಣ ಬಣ್ಣಗಳಿಂದ ಕೂಡಿದ್ದು, ನೋಡುಗರನ್ನು ಮನಸೂರೆಗೊಳಿಸುವಂತಿವೆ.
ಈ ಎಲ್ಲಾ ಕಲಾಕೃತಿಗಳು ಬೀದಿ ಬದಿ ವ್ಯಾಪಾರಿಗಳು, ಆಟೋ ಡ್ರೈವರ್ಗಳಿಂದ ಹಿಡಿದು ಐಟಿ ವೃತ್ತಿಪರರವರೆಗೂ ಎಲ್ಲರನ್ನೂ ಒಳಗೊಂಡ ಚನ್ನಪಟ್ಟಣದ ಗೊಂಬೆಗಳ ಸ್ಪರ್ಷ ನೀಡಿ ಚಿತ್ರಿಸಿರುವುದು ಇನ್ನಷ್ಟು ವಿಭಿನ್ನವೆನಿಸುತ್ತದೆ. ಈ ಬಗ್ಗೆ ಬೆಂಗಳೂರು ಸಾರ್ವಜನಿಕರು, ವಾಹನ ಸವಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
-
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು












Click it and Unblock the Notifications