Namma Metro: ಮೆಟ್ರೋ ಪಿಲ್ಲರ್ಗಳ ಮೇಲೆ ಸೆಲೆಬ್ರೆಟಿಗಳ ವರ್ಣಮಯ ಚಿತ್ರ ಕಲಾಕೃತಿಗಳು
ಬೆಂಗಳೂರು, ಫೆಬ್ರವರಿ 13: ಬೆಂಗಳೂರಿನ ಜನರಿಗೆ ಸಮಯ ಉಳಿತಾಯದ ಸಾರಿಗೆ ಸೇವೆ ನೀಡುತ್ತಿರುವ ನಮ್ಮ ಮೆಟ್ರೋ ಪಿಲ್ಲಟ್, ಕಟ್ಟಡ ಗೋಡೆಗಳ ಸುಂದರೀಕರಣ ಹೆಚ್ಚಿಸಲು ಹಲವು ಉಪಕ್ರಮ ಕೈಗೊಳ್ಳಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ 50ಕ್ಕೂ ಹೆಚ್ಚು ಮೆಟ್ರೋ ಸ್ಥಂಭಗಳಿಗೆ ಚನ್ನಪಟ್ಟಣದ ಕಲೆಯನ್ನು ಬಿಂಬಿಸುವ ಕಲಾಕೃತಿಗಳನ್ನು ಚಿತ್ರಿಸಲಾಗಿದೆ. ಸೆಲೆಬ್ರಟಿಗಳ ಚಿತ್ರಗಳು ಪಿಲ್ಲರ್ಗಳ ಮೇಲೆ ಚಿತ್ರಿಸಲಾಗಿದೆ.
ಬಯೋಕಾನ್ ಫೌಂಡೇಷನ್ನ ಸಿಎಸ್ಆರ್ ಅಡಿಯಲ್ಲಿ ನಗರದ ಹುಸ್ಕೂರು ಗೇಟ್ನಿಂದ ಹೆಬ್ಬಗೋಡಿ ಮೆಟ್ರೋ ನಿಲ್ದಾಣದವರೆಗೂ ಬರುವ 50 ಮೆಟ್ರೋ ಪಿಲ್ಲರ್ಗಳ ಮೇಲೆ ಚೆನ್ನಪಟ್ಟಣದ ಕಲೆಯನ್ನು ಬಿಂಬಿಸುವ ಕಲಾಕೃತಿ ಸುಂದರವಾಗಿ ಚಿತ್ರಿಸಲಾಗಿದೆ. "ಪಿಲ್ಲರ್ ಆಫ್ ಬೆಂಗಳೂರು- ಪ್ರತಿನಿತ್ಯದ ಚಾಂಪಿಯನ್ಗಳ ಸಂಭ್ರಮಾಚರಣೆ" ಶೀರ್ಷಿಕೆಯಡಿ ಈ ಚಿತ್ತಾರ ಬಿಡಿಸಿ ನಗರದ ಅಂದೆ ಹೆಚ್ಚಿಸುವ ಪ್ರಯತ್ನ ಮಾಡಿದೆ.

ನಮ್ಮ ದೈನಂದಿನ ಜೀವನದ ಚಾಪಿಂಯನ್ಸ್ಗಳಾದ ಹೂ ಮಾರಾಟಗಾರರು, ಎಲೆಕ್ಟ್ರೀಷಿಯನ್, ಟೈಲರ್ಗಳು, ಪ್ಲಂಬರ್ಸ್, ವೈದ್ಯರು, ದಾದಿಯರು, ಸಂಗೀತಗಾರರು, ವಿಜ್ಞಾನಿಗಳು, ಐಟಿ ವೃತ್ತಿಪರರು, ಏರೋಸ್ಪೇಸ್ ಸೇರಿದಂತೆ ನಮ್ಮ ಪ್ರತಿನಿತ್ಯದ ಜೀವನದ ಭಾಗವಾಗಿರುವ ಎಲ್ಲಾ ಪಾತ್ರದಾರಿಗಳ ಚಿತ್ರವನ್ನು ಚನ್ನಪಟ್ಟಣದ ಗೊಂಬೆಗಳಂತೆ ಸುಂದರವಾದ ಕೆತ್ತನೆಯ ರೀತಿಯಲ್ಲಿ ಚಿತ್ರಿಸಲಾಗಿದೆ.
ಬಯೋಕಾನ್ ಫೌಂಡೇಶನ್ನ ಮಿಷನ್ ನಿರ್ದೇಶಕ ಡಾ. ಅನುಪಮಾ ಶೆಟ್ಟಿ ಮಾತನಾಡಿ, ಪಿಲ್ಲರ್ಸ್ ಆಫ್ ಬೆಂಗಳೂರು ನಮ್ಮ ದೈನಂದಿನ ಸೆಲೆಬ್ರೆಟೀಸ್ಗಳನ್ನು ನೆನೆಯಲು ಈ ವಿನೂತನ ಉಪಕ್ರಮವನ್ನು ಕೈಗೆತ್ತಿಕೊಳ್ಳಲಾಗಿದೆ.
ಹುಸ್ಕೂರ್ ಗೇಟ್ ನಿಂದ ಪ್ರಾರಂಭವಾಗುವ ಮೆಟ್ರೋ ಪಿಲ್ಲರ್ಗಳ ಮೇಲೆ ಕ್ರಿಯಾತ್ಮಕವಾಗಿ ಹಾಗೂ ನಮ್ಮ ನಗರದ ಸಾಂಪ್ರದಾಯಿಕ ಕಲೆಯನ್ನು ಬಿಂಬಿಸುವ ಕಲಾ ಕೃತಿಗಳನ್ನು ಚಿತ್ರಿಸಲಾಗಿದೆ. ಇವೆಲ್ಲ ಬಣ್ಣ ಬಣ್ಣಗಳಿಂದ ಕೂಡಿದ್ದು, ನೋಡುಗರನ್ನು ಮನಸೂರೆಗೊಳಿಸುವಂತಿವೆ.
ಈ ಎಲ್ಲಾ ಕಲಾಕೃತಿಗಳು ಬೀದಿ ಬದಿ ವ್ಯಾಪಾರಿಗಳು, ಆಟೋ ಡ್ರೈವರ್ಗಳಿಂದ ಹಿಡಿದು ಐಟಿ ವೃತ್ತಿಪರರವರೆಗೂ ಎಲ್ಲರನ್ನೂ ಒಳಗೊಂಡ ಚನ್ನಪಟ್ಟಣದ ಗೊಂಬೆಗಳ ಸ್ಪರ್ಷ ನೀಡಿ ಚಿತ್ರಿಸಿರುವುದು ಇನ್ನಷ್ಟು ವಿಭಿನ್ನವೆನಿಸುತ್ತದೆ. ಈ ಬಗ್ಗೆ ಬೆಂಗಳೂರು ಸಾರ್ವಜನಿಕರು, ವಾಹನ ಸವಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
-
RCB: ಆರ್ ಸಿಬಿ ತಂಡದ ಅಧಿಕೃತ ಪೇಮೆಂಟ್ಸ್ ಪಾಲುದಾರ ನವಿ ಯುಪಿಐ, ಫ್ಯಾನ್ಸ್ ಗಮನಿಸಿ -
2000 ರೈಲು ನಿಲ್ದಾಣಗಳಲ್ಲಿ ಸ್ಥಳೀಯ ಕಲೆಯ ಸೊಬಗು: 1.32 ಲಕ್ಷ ಕುಶಲಕರ್ಮಿಗಳಿಗೆ ಮಾರುಕಟ್ಟೆ ಭಾಗ್ಯ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications