ಮೆಟ್ರೋ ಮುಷ್ಕರ: ನೌಕರರ ಮೇಲೆ ಎಸ್ಮಾ ಜಾರಿಗೆ ಕೇಂದ್ರ ಚಿಂತನೆ
ಬೆಂಗಳೂರು ಜೂನ್ 1: ಮೆಟ್ರೋ ನೌಕರರಿಗೆ ಎಸ್ಮಾ ಕಾಯ್ದೆ ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ ಎನ್ನುವ ಮಾಹಿತಿಗಳು ಲಭ್ಯವಾಗಿದೆ.
ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮೆಟ್ರೋ ನೌಕರರು ಮುಷ್ಕರ ನಡೆಸುವುದಾಗಿ ಪದೇ ಪದೇ ಬೆದರಿಕೆ ಒಡ್ಡುತ್ತಿದ್ದಾರೆ ಹಾಗಾಗಿ ಈ ಹೋರಾಟವನ್ನು ಇಲ್ಲಿಯೇ ಕೈಬಿಡುವಂತೆ ಎಚ್ಚರಿಸಲು ಕೇಂದ್ರ ಸರ್ಕಾರ ಎಸ್ಮಾ ಜಾರಿಗೆ ಮುಂದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಜೂ 4 ರಂದು ಮೆಟ್ರೋ ಸಿಬ್ಬಂದಿಗಳು ಮುಷ್ಕರ ನಡೆಸಲು ಮುಂದಾಗಿದ್ದರು, ಹೈಕೋರ್ಟ್ ಜೂನ್ 4 ರಂದು ವಿಚಾರಣೆ ಮುಂದೂಡಿರುವ ಹಿನ್ನೆಲೆಯಲ್ಲಿ ಮುಷ್ಕರವನ್ನು ಅಂದು ಕೈಬಿಟ್ಟಿದ್ದಾರೆ. ಆದರೆ ಇನ್ನೊಂದು ದಿನ ಮುಷ್ಕರ ನಡೆಸುವುದಾಗಿ ತಿಳಿಸಿದ್ದಾರೆ. ಹಾಗಾಗಿ ಇವರ ನಿರ್ಧಾರಗಳಿಗೆ ಬಿಸಿ ಮುಟ್ಟಿಸಲು ಈ ಚಿಂತನೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ಅಗತ್ಯ ಸೇವೆಗಳಡಿ ಮೇಟ್ರೋ ಸೇವೆ ಬರುವುದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುವ ಯಾವುದೇ ಸೇವೆಯನ್ನು ಎಸ್ಮಾ ಕಾಯ್ದೆಯಡಿಯಲ್ಲಿ ತರುವುದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಅವಕಾಶವಿದೆ. ಈ ಹಿನ್ನಲೆಯಲ್ಲಿ ಮೆಟ್ರೋ ನೌಕರರ ಪ್ರತಿಭಟನೆಯನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಸ್ಮಾ ಕಾಯ್ದೆಯನ್ನು ನೌಕರರ ಪ್ರತಿಭಟನೆ ವೇಳೆ ಜಾರಿಗೊಳಿಸಲು ಮುಂದಾಗಿವೆ.
ಬಿಎಂಆರ್'ಸಿಎಲ್ ಎಂಡಿ ಮಹೇಂದ್ರ ಜೈನ್ ಅವರು ಮಾತನಾಡಿ, ಮೆಟ್ರೋ ಸೇವೆಯಲ್ಲಿ ಗುಣಮಟ್ಟವನ್ನು ಕಾಪಾಡಿಕೊಂಡು ಬರಲಾಗಿದೆ. ಮೆಟ್ರೋ ಸೇವೆಗಳನ್ನು ಅಗತ್ಯ ಸೇವೆಗಳ ವ್ಯಾಪ್ತಿಗೆ ತರಲುವ ಅಗತ್ಯವಿದೆ. ನಗರದ ಜೀವನದಲ್ಲಿ ಚಲನಶೀಲತೆ ಎಂಬುದು ಅತ್ಯಂತ ಮುಖ್ಯವಾದದ್ದು. ಇಂತಹ ಚಲನಶೀಲತೆಯನ್ನು ಪ್ರತಿಬಂಧಿಸುವ ಶಕ್ತಿಗಳನ್ನು ನಿಯಂತ್ರಸಬೇಕು ಎಂದು ಹೇಳಿದ್ದಾರೆ.
ಎಸ್ಮಾ (ಅಗತ್ಯ ಸೇವೆ ನಿರ್ವಹಣೆ ಕಾಯ್ದೆ) ಎನ್ನುವುದು ಕೆಲವು ಸೇವೆಗಳ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಸ್ಥಾಪಿಸಲಾದ ಭಾರತದ ಸಂಸತ್ತಿನ ಒಂದು ಕಾರ್ಯವಾಗಿದೆ. ಸರ್ಕಾರ ನೌಕರರ ಮೇಲೆ ಅಂಕುಶ ಹಾಕುವ ಕಾಯ್ದೆ ಇದಾಗಿದ್ದು, 1968ರಲ್ಲಿ ಜಾರಿಗೆ ತರಲಾಗಿತ್ತು.
-
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications