ಪ್ರಜ್ವಲ್ ರೇವಣ್ಣ ಪಾಸ್ಪೋರ್ಟ್ ರದ್ದಿಗೆ ಕೇಂದ್ರ ಸ್ಪಂದಿಸಿಲ್ಲ: ಪಕ್ಷದ ಅಧ್ಯಕ್ಷರ ಬದಲಾವಣೆ ಬಗ್ಗೆ ಜಿ.ಪರಮೇಶ್ವರ ಹೇಳಿದ್ದೇನು?
ಬೆಂಗಳೂರು, ಮೇ 22: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದರುವ ಪ್ರಜ್ವಲ್ ಪಾಸ್ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಆದರೆ ಈವರೆಗೂ ಕೇಂದ್ರ ಸ್ಪಂದಿಸಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಮಾಹಿತಿ ನೀಡಿದರು.
ಬಧವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. ಎಸ್ಐಟಿ ಸಹ ಪತ್ರ ಬರೆದಿದೆ. ಈವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ ಎಂದರು.

ಕೇಂದ್ರ ಸರ್ಕಾರವು ಕಾನೂನಿನ ಚೌಕಟ್ಟಿನಲ್ಲಿ ಸಹಾಯ ಮಾಡಬೇಕು. ಬರೀ ಟೀಕೆ ಮಾಡಿದರೆ ಅರ್ಥವಿಲ್ಲ. ಪ್ರಜ್ವಲ್ ರೇವಣ್ಣ ಅವರ ಮೇಲೆ ವಾರಂಟ್ ಜಾರಿ ಮಾಡಿರುವುದನ್ನು ತಿಳಿಸಲಾಗಿದೆ. ವಾರಂಟ್ ಜಾರಿಯಾದ ನಂತರ ಪಾಸ್ಪೋರ್ಟ್ ರದ್ದುಗೊಳಿಸುವುದು ಕೇಂದ್ರ ಸರ್ಕಾರದ ಕರ್ತವ್ಯ ಎಂದು ಹೇಳಿದರು.
ಎಚ್ಡಿ ಕುಮಾರಸ್ವಾಮಿ ಹೇಳಿಕೆಗೆ ಸಚಿವರ ತಿರುಗೇಟು
ಉಪಮುಖ್ಯಮಂತ್ರಿಯವರದ್ದು ಎನ್ನಲಾದ ಆಡಿಯೋ ಕುರಿತು ಹೆಚ್.ಡಿ.ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು ಪ್ರತಿಯೊಂದಕ್ಕು ಮಾತನಾಡುತ್ತಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಎಸ್ಐಟಿ ಏನೆಲ್ಲ ಕೆಲಸ ಮಾಡಬೇಕೋ ಅದನ್ನು ಮಾಡುತ್ತಿದೆ. ಕುಮಾರಸ್ವಾಮಿ ಅವರು ತನಿಖೆ ಹೀಗೆ ನಡೆಯಬೇಕು, ಹಾಗೇ ಮಾಡಬೇಕು ಅಂತ ಹೇಳಿದ ಹಾಗೇ ಕಾಣುತ್ತಿದೆ ಎಂದು ಆರೋಪಿಸಿದರು.
ಬಿಜೆಪಿಯವರ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ ಎಂಬುದನ್ನು ನಾನು ಮತ್ತು ಮುಖ್ಯಮಂತ್ರಿಯವರು ಅಂಕಿ-ಅಂಶವನ್ನು ಪ್ರಕಟಿಸಿದ್ದೇವೆ. ಯಾರ ಕಾಲದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗಿದ್ದವು ಎಂಬುದಕ್ಕೆ ಅಂಕಿ-ಅಂಶಗಳಿವೆ. ಅದಕ್ಕೆ ಬಿಜೆಪಿಯವರು ಮೊದಲು ಉತ್ತರ ನೀಡಲಿ ಎಂದರು.
ಹೊರಗುತ್ತಿಗೆ ನೇಮಕಾತಿಗೆ ಸ್ಪಷ್ಟನೆ ಕೊಟ್ಟ ಸಚಿವರು
ಖಾಸಗಿ ವಲಯದಲ್ಲಿ ಮೀಸಲಾತಿ ನೀಡಬೇಕೆಂದು ಬಹಳ ಹಿಂದಿನಿಂದಲೂ ನಾವು ಒತ್ತಾಯಿಸಿಕೊಂಡು ಬಂದಿದ್ದೇವೆ. ಲಕ್ಷಾಂತರ ಹುದ್ದೆಗಳನ್ನು ಯಾರಿಗೂ ಗೊತ್ತಿಲ್ಲದೆ ನೇಮಕ ಮಾಡಿಕೊಳ್ಳುತ್ತಿದ್ದರು. ಹೀಗಾಗಿ ಹೊರಗುತ್ತಿಗೆ ಹುದ್ದೆಗಳಿಗೆ ಮೀಸಲಾತಿ ನೀಡಲಾಗುತ್ತಿದೆ.

ನೇಮಕ ಮಾಡಿಕೊಳ್ಳುವಾಗ ಮೆರಿಟ್ನಲ್ಲಿ ಹೊಂದಾಣಿಕೆಯಾಗುವುದು ಬೇಡ. ದಲಿತ ಸಮುದಾಯದ ಪದವೀದರರು ಮೆರಿಟ್ನಲ್ಲಿ ಬರುತ್ತಿದ್ದಾರೆ. ಮೆರಿಟ್ ನಿರ್ವಹಣೆ ಮಾಡಿಕೊಂಡರೆ, ಗುಣಮಟ್ಟ ಹಾಳಾಗುವುದಿಲ್ಲ.
ಸ್ಥಳೀಯ ಸಂಸ್ಥೆಯ ಚುನಾವಣೆ ನೆನೆಗುದಿಗೆ ಬಿದ್ದಿವೆ. ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾದರೆ ಸ್ಥಳೀಯ ಸಂಸ್ಥೆಗಳಲ್ಲಿ ಜನಪ್ರಿತಿನಿಧಿಗಳು ಬೇಕು. ಕೋರ್ಟ್ನ ಆದೇಶ ಯಾವಾಗ ಬೇಕಾದರು ಬರಬಹುದು. ಇದನ್ನು ಗಮನದಲ್ಲಿಡ್ಡುಕೊಂಡು ಚುನಾವಣೆಗೆ ತಯಾರಿ ಮಾಡಿಕೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷರು ತಿಳಿಸಿರಬಹುದು ಎಂದು ಹೇಳಿದರು.
ಪಕ್ಷದ ಅಧ್ಯಕ್ಷರ ಬದಲಾವಣೆ ಬಗ್ಗೆ ಪ್ರತಿಕ್ರಿಯೆ
ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ಗಳಲ್ಲಿ ಜನಪ್ರಿತಿನಿಧಿಗಳು ಇಲ್ಲ. ಸರಿಯಾದ ಕೆಲಸ ಕಾರ್ಯಗಳು ಆಗುತ್ತಿಲ್ಲ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಪಕ್ಷದ ಅಧ್ಯಕ್ಷರ ಬದಲಾವಣೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ ಗೃಹ ಸಚಿವರು, ಅಧ್ಯಕ್ಷರ ಬದಲಾವಣೆ ಕುರಿತು ಯಾವುದೇ ರೀತಿಯ ಚರ್ಚೆ ಆಗಿಲ್ಲ. ಹೈಕಮಾಂಡ್ಗೆ ಬಿಟ್ಟಿರುವ ವಿಚಾರ. ಅಧ್ಯಕ್ಷರನ್ನು ಬದಲಾಯಿಸಬೇಕು ಅನ್ನಿಸಿದರೆ ಬದಲಾಯಿಸುತ್ತಾರೆ. ಇಲ್ಲವಾದರೆ ಇಲ್ಲ ಎಂದು ಸ್ಪಷ್ಟಪಡಿಸಿದರು.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ












Click it and Unblock the Notifications