ಪಿಯು ಕಾಲೇಜುಗಳಲ್ಲಿ 'ಸೂರ್ಯ ನಮಸ್ಕಾರ'ಕ್ಕೆ ಕೇಂದ್ರ ಸೂಚನೆ : ಉಪನ್ಯಾಸಕರ ವಿರೋಧ
ಬೆಂಗಳೂರು, ಡಿಸೆಂಬರ್ 27: ಕರ್ನಾಟಕದ ಎಲ್ಲ ಪದವಿ ಪೂರ್ವ ಕಾಲೇಜುಗಳಲ್ಲಿ ಜ.1ರಿಂದ ಫೆ. 7ರವರೆಗೆ 'ಸೂರ್ಯ ನಮಸ್ಕಾರ' ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ. ಅಲ್ಲದೆ, ಜ.26ರಂದು ಸಂಗೀತದೊಂದಿಗೆ ಸೂರ್ಯ ನಮಸ್ಕಾರ (ಮ್ಯೂಸಿಕಲ್ ಪರ್ಫಾರ್ಮೆನ್ಸ್ ಆನ್ ಸೂರ್ಯ ನಮಸ್ಕಾರ) ಆಯೋಜಿಸಬೇಕೆಂದು ಆದೇಶ ಹೊರಡಿಸಿದೆ.
75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಅಂಗವಾಗಿ 'ಸೂರ್ಯ ನಮಸ್ಕಾರ ಕಾರ್ಯಕ್ರಮ' ಆಯೋಜಿಸುವಂತೆ ಕೇಂದ್ರ ಶಿಕ್ಷಣ ಸಚಿವಾಲಯ ಎಲ್ಲ ರಾಜ್ಯಗಳ ಶಿಕ್ಷಣ ಇಲಾಖೆಗಳ ಮುಖ್ಯಸ್ಥರಿಗೆ ಡಿ.15ರಂದು ಪತ್ರ ಬರೆದು ಸೂಚಿಸಿತ್ತು.
ಅದರಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು, ಬಳಿಕ ಕಾರ್ಯಕ್ರಮದ ಕ್ರೋಡೀಕೃತ ಮಾಹಿತಿಯನ್ನು ಇಲಾಖೆಯ ಶೈಕ್ಷಣಿಕ ಶಾಖೆಗೆ ಸಲ್ಲಿಸಬೇಕು ಎಂದು ಎಲ್ಲ ಜಿಲ್ಲಾ ಉಪ ನಿರ್ದೇಶಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು (ಶೈಕ್ಷಣಿಕ) ತಿಳಿಸಿದ್ದಾರೆ.

'ಸೂರ್ಯ ನಮಸ್ಕಾರ'ವು ಯೋಗಾಸನದ 10 ಭಂಗಿಗಳನ್ನು ಒಳಗೊಂಡಿದ್ದು, ವಿದ್ಯಾರ್ಥಿಗಳ ಆರೋಗ್ಯ ವೃದ್ಧಿಗೆ ಹಾಗೂ ಮನೋಬಲ ಹೆಚ್ಚಿಸುವುದಕ್ಕೆ ನೆರವಾಗಲಿದೆ. ಕೇಂದ್ರದ ಸೂಚನೆಯಂತೆ ಜ.1ರಿಂದ ಫೆ.7ರವರೆಗಿನ ಒಟ್ಟು 38 ದಿನಗಳ ಪೈಕಿ, 21 ದಿನ ಬೆಳಗಿನ ಅವಧಿಯಲ್ಲಿ ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ ಮಾಡಬೇಕಿದೆ.
ಪ್ರತಿ ದಿನ 13 ಸೂರ್ಯ ನಮಸ್ಕಾರಗಳಂತೆ ಒಟ್ಟು 273 (21 ದಿನಗಳಲ್ಲಿ ಸೂರ್ಯ ನಮಸ್ಕಾರಗಳನ್ನು ಮಾಡಿದವರಿಗೆ ಪ್ರಮಾಣಪತ್ರ ನೀಡುವುದಾಗಿ ರಾಷ್ಟ್ರೀಯ ಯೋಗಾಸನ ಸ್ಪೋರ್ಟ್ಸ್ ಫೆಡರೇಷನ್ ತಿಳಿಸಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಉಪನ್ಯಾಸಕರ ವಿರೋಧ
ಆದರೆ, ಪದವಿ ಪೂರ್ವ ಕಾಲೇಜುಗಳಲ್ಲಿ 'ಸೂರ್ಯ ನಮಸ್ಕಾರ' ಕಾರ್ಯಕ್ರಮಕ್ಕೆ ಉಪನ್ಯಾಸಕರ ವಲಯದಿಂದ ವಿರೋಧ ವ್ಯಕ್ತವಾಗಿದೆ. '75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವಕ್ಕೂ, ಸೂರ್ಯ ನಮಸ್ಕಾರಕ್ಕೂ ಏನು ಸಂಬಂಧವಿದೆ? ಸ್ವಾತಂತ್ರ್ಯ ಹೋರಾಟಗಾರರ ಜೀವನಗಾಥೆ ತಿಳಿಸುವ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಅರಳಿಸುವಂಥ ಕಾರ್ಯಕ್ರಮಗಳ ಬದಲು ಸೂರ್ಯ ನಮಸ್ಕಾರದಂಥ ಆಚರಣೆಗಳನ್ನು ಜಾರಿ ಮಾಡುವುದು ಅವಿವೇಕದ ಪರಮಾವಧಿ' ಎಂದು ಅನಾಮಧೇಯ ಉಪನ್ಯಾಸಕರೊಬ್ಬರು ಪ್ರತಿಕ್ರಿಯಿಸಿದ್ದಾರೆ.
ಪ್ರಜಾಪ್ರಭುತ್ವಕ್ಕೆ ಕುತ್ತು
ಉಪನ್ಯಾಸಕರ ಸಂಘಟನೆಗಳು, ಶಿಕ್ಷಣ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕರು ಈ ಬಗ್ಗೆ ಧ್ವನಿ ಎತ್ತಬೇಕು, ಸೂರ್ಯ ನಮಸ್ಕಾರ ಅಲ್ಲವೇ, ಹಾಳಾಗಿ ಹೋಗಲಿ ಎಂದು ಕೈಕಟ್ಟಿ ಕುಳಿತರೆ ಸಂವಿಧಾನ, ಪ್ರಜಾಪ್ರಭುತ್ವಕ್ಕೆ ಕುತ್ತು ಬರುವುದರಲ್ಲಿ ಸಂಶಯವಿಲ್ಲ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಪತ್ರದಲ್ಲೇನಿದೆ?
'ರಾಷ್ಟ್ರೀಯ ಯೋಗಾಸನ ಸ್ಪೋರ್ಟ್ಸ್ ಫೆಡರೇಷನ್ (ಎನ್ವೈಎಸ್ಎಫ್) ಡಿ.9ರಂದು ಪತ್ರ ಬರೆದು 75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಅಂಗವಾಗಿ 'ಸೂರ್ಯ ನಮಸ್ಕಾರ ಕಾರ್ಯಕ್ರಮ' ಆಯೋಜಿಸುವ ಬಗ್ಗೆ ತಿಳಿಸಿದೆ. 30 ರಾಜ್ಯಗಳಲ್ಲಿ 30 ಸಾವಿರ ಸಂಸ್ಥೆಗಳ 3 ಲಕ್ಷ ವಿದ್ಯಾರ್ಥಿಗಳನ್ನು ಸೇರಿಸಿ 75 ಕೋಟಿ ಸೂರ್ಯ ನಮಸ್ಕಾರ ಮಾಡಿಸಲು ಫೆಡರೇಷನ್ ನಿರ್ಧರಿಸಿದೆ.
ಜ.26ರಂದು ತ್ರಿವರ್ಣ ಧ್ವಜದ ಎದುರು ಸಂಗೀತ ಸಂಯೋಜನೆಯೊಂದಿಗೆ ಸೂರ್ಯ ನಮಸ್ಕಾರದ ಮೂಲಕ ತಾಯಿ ಭಾರತಾಂಬೆಗೆ ಭಾವಪೂರ್ಣ ನಮನ ಸಲ್ಲಿಸಬೇಕು ಎಂದೂ ಫೆಡರೇಷನ್ ತಿಳಿಸಿದೆ.
ಹೀಗಾಗಿ, ನಿಮ್ಮ ವ್ಯಾಪ್ತಿಯಲ್ಲಿರುವ ಕಾಲೇಜುಗಳು, ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ನಿರ್ದೇಶನ ನೀಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಮಾಡಬೇಕು ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಪತ್ರದಲ್ಲಿ ಸೂಚಿಸಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications