ಬಿಜೆಪಿ ಕಾರ್ಯಕರ್ತನ ಕೊಲೆ: ಸಿಎಂಗೆ ಡಿವಿಎಸ್ ಪಂಚ ಪ್ರಶ್ನೆ
ಬೆಂಗಳೂರು, ಫೆಬ್ರವರಿ 01 : ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಸಂತೋಷ್ ಹತ್ಯೆ ಕುರಿತು ಕೇಂದ್ರ ಸಾಂಖ್ಯಿಕ ಸಚಿವ ಡಿ.ವಿ. ಸದಾನಂದ ಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಂಚ ಪ್ರಶ್ನೆಗಳನ್ನು ಕೇಳಿದ್ದಾರೆ.
ಟ್ವೀಟ್ ಮಾಡುವ ಮೂಲಕ ಪಂಚ ಮುಗ್ಧರಿಗೆ ಪಂಚ ಪ್ರಶ್ನೆಗಳು ಎಂದು ಹೇಳಿ ಸಿದ್ದರಾಮಯ್ಯ, ಸಚಿವ ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಹಾಗೂ ಕಾಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಟ್ಯಾಗ್ ಮಾಡಿದ್ದಾರೆ.
ಜೆಸಿ ನಗರದ ಚಿನ್ನಪ್ಪ ಗಾರ್ಡನ್ ಬಳಿ ಬಿಜೆಪಿ ಕಾರ್ಯಕರ್ತ ಸಂತೋಷ್(28) ಎಂಬುವವರನ್ನು ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಬುಧವಾರ ನಡೆದಿದೆ. ಈ ಸಂಬಂಧ ಕಾಂಗ್ರೆಸ್ ನ ಜೆಸಿ ನಗರ ಬ್ಲಾಕ್ ಅಧ್ಯಕ್ಷ ಖಾದರ್ ಅವರ ಮಗ ವಾಸಿಂ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಚಿನ್ನಪ್ಪ ಗಾರ್ಡ್ ನ್ ನಿವಾಸಿ ಸಂತೋಷ್ ಸಂಜೆ 6 ಗಂಟೆ ಸುಮಾರಿಗೆ ಸ್ಥಳೀಯ ಬೇಕರಿಯೊಂದರ ಬಳಿ ನಿಂತುಕೊಂಡಿದ್ದರು. ಅಲ್ಲಿಗೆ ಬಂದಿದ್ದ ವಾಸಿಂ, ಫಿಲಿಪ್ಸ್, ಇರ್ಫಾನ್ ಹಾಗೂ ಉಮ್ಮರ್ ಅವರ ಜತೆ ಜಗಳ ತೆಗೆದು ಮಾರಕಾಸ್ತ್ರಗಳಿಂದ ಹೊಡೆದಿದ್ದರು.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಂತೋಷ್ ಅವರನ್ನು ಸ್ಥಳೀಯರು ಜೈನ್ ಆಸ್ಪತ್ರೆಗೆ ಕರೆದೊಯ್ದರು. ತಪಾಸಣೆ ನಡೆಸಿದ ವೈದ್ಯರು, ಮಾರ್ಗಮಧ್ಯೆಯೇ ಅವರು ಮೃತಪಟ್ಟಿರುವುದಾಗಿ ತಿಳಿಸಿದರು. ಈ ಘಟನೆ ಸಂಬಂಧ ಟಿವಿಎಸ್ ಐದು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ಮುಗ್ಧ ಸುತ್ತೋಲೆಯ ಪರಿಣಾಮವೇ ಸಂತೋಷ್ ಕೊಲೆಗೆ ಕಾರಣ
ಪಂಚ ಮುಗ್ಧರೇ ದಲಿತ ಯುವಕ ಸಂತೋಷನ ಕೊಲೆ ನಿಮ್ಮ ಮುಗ್ಧ ಸುತ್ತೋಲೆಯ ಪರಿಣಾಮ ಎಂದು ಒಪ್ಪಿಕೊಳ್ಳುತೀರಾ ಎಂದು ಮೊದಲ ಪ್ರಶ್ನೆ ಕೇಳಿದ್ದಾರೆ.
|
ಸಮಾಜ ದ್ರೋಹಿ ಶಕ್ತಿಗಳಿಗೆ ರಕ್ಷಣೆ
ನಿಮ್ಮ ಮುಗ್ಧಸುತ್ತೋಲೆ ಹೊರಡಿಸುವ ಮುನ್ನ ಸಮಾಜ ದ್ರೋಹಿ ಶಕ್ತಿಗಳಿಗೆ ನೀವು ರಕ್ಷಾ ಕವಚ ಹಾಕುತ್ತಿದೀರೆಂಬ ಕನಿಷ್ಠ ಜ್ಞಾನವು ನಿಮಗೆ ಇರಲಿಲ್ಲವಾ ಎಂದು ಎರಡನೇ ಪ್ರಶ್ನೆಯನ್ನು ಕೇಳಿದ್ದಾರೆ.
|
ಸಂತೋಷ್ ಅವರನ್ನು ಮುಗ್ಧರು ಕೊಂದರು ಎಂದು ಹೇಳುತ್ತೀರಾ?
ದಲಿತ ಯುವಕ ಸಂತೋಷನ ಹೆತ್ತವರಿಗೆ ಏನೆಂದು ಹೇಳುತ್ತೀರಿ ಅವರನ್ನು ಮುಗ್ಧರು ಕೊಂದದೆಂದು ಹೇಳುತ್ತೀರಾ ಎಂದು ಮೂರನೇ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ.
|
ಕಾನೂನು ವ್ಯವಸ್ಥೆ ಪರೀಚಿಕೆಯಾಗಿದೆ
23 ಹಿಂದೂ ಕಾರ್ಯಕರ್ತರ ಕೊಲೆಯಾಗಿದೆ. ಕಾನೂನು ವ್ಯವಸ್ಥೆ ಅನ್ನುವುದು ಮರೀಚಿಕೆಯಾಗಿದೆ ನೀವು ಇದೆಲ್ಲವನ್ನು ನೋಡಿಯೂ ನೋಡದಂತೆ ಮುಗ್ಧರಾಗಿ ಉಳಿದಿರುವುದರ ಹಿಂದಿನ ಜಾಣ ಮುಗ್ಧತೆ ಏನು? ಎಂದು ಪ್ರಶ್ನಿಸಿದ್ದಾರೆ.
|
ಹಿಂದೂ ಬಾಂಧವರ ರಕ್ತ ದಾಹಕ್ಕೆ ಎಂದಿಗೆ ಕೊನೆ
ನಿಮ್ಮ ಮುಗ್ಧ ತುಷ್ಟೀಕರಣಕ್ಕೆ ಕೊನೆ ಯಾವಾಗ? ನಿಮ್ಮಗಳ ಆಡಳಿತದಲ್ಲಿ ಹಿಂದೂ ಬಾಂಧವರ ರಕ್ತ ಬಸಿಯುವ ದಾಹಕ್ಕೆ ಕೊನೆ ಯಾವಾಗ? ಒಂದಂತೂ ನೆನಪಿಟ್ಟುಕ್ಕೊಳ್ಳಿ ನೀವೀಗ ಉತ್ತರ ಕೊಡದಿದ್ದರೆ. ಚುನಾವಣೆಯಲ್ಲಿ ರಾಜ್ಯದ ಜನತೆ ಕೊಟ್ಟೇ ಕೊಡುತ್ತಾರೆ ಎಂದಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications