ಕೇಂದ್ರ ಸಚಿವ ಸದಾನಂದಗೌಡ ಔಟ್ ಆಫ್ ಡೇಂಜರ್: ಹೆದರಬೇಕಿಲ್ಲ ಎಂದ ವೈದ್ಯರು
ಬೆಂಗಳೂರು, ಜನವರಿ 03: ಶಿವಮೊಗ್ಗದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ ನಂತರ ಬಿಜೆಪಿ ಮುಖಂಡರ ರೆಸಿಡೆನ್ಸಿಗೆ ತೆರಳಿದ್ದ ವೇಳೆ ಮೂರ್ಚೆ ತಪ್ಪಿ ಬಿದ್ದಿದ್ದ ಕೇಂದ್ರ ಸಚಿವ ಸದಾನಂದಗೌಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಬಸವೇಶ್ವರ ಆಸ್ಪತ್ರೆಯಿಂದ ಬೆಂಗಳೂರಿನ ಹೆಬ್ಬಾಳದ ಆಸ್ಟರ್ ಆಸ್ಪತ್ರೆಗೆ ಜೀರೋ ಟ್ರಾಫಿಕ್ ಮೂಲಕ ಆಂಬ್ಯುಲೆನ್ಸ್ ಮೂಲಕ ಕರೆದೊಯ್ಯಲಾಯಿತು. ವೈದ್ಯಕೀಯ ಪರೀಕ್ಷೆ ಬಳಿಕ ಡಿ.ವಿ. ಸದಾನಂದಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ಡಾ. ಬೃಂದಾ ಹೇಳಿದ್ದಾರೆ.
''ಹೃದಯ ಸಂಬಂಧಿ ಎಲ್ಲಾ ಪರೀಕ್ಷೆಗಳನ್ನು ಮಾಡಲಾಗಿದೆ. ಅವರಿಗೆ ಯಾವುದೇ ಸಮಸ್ಯೆಯಿಲ್ಲ, ಎಲ್ಲಾ ಸಾಮಾನ್ಯವಾಗಿದೆ. ರಕ್ತ ಪರೀಕ್ಷೆಯಲ್ಲೂ ಏನೂ ತೊಂದರೆಯಿಲ್ಲ. ಅವರ ಆರೋಗ್ಯ ಸ್ಥಿರವಾಗಿದ್ದರೂ, 24 ಗಂಟೆ ಅವರ ಆರೋಗ್ಯದ ಮೇಲೆ ನಿಗಾ ಇಡುತ್ತೇವೆ. ಬಹುಶಃ ಲೋ ಶುಗರ್ನಿಂದ ಹೀಗೆ ಆಗಿರಬಹುದು'' ಎಂದು ಡಾ. ಬೃಂದಾ ಹೇಳಿದ್ದಾರೆ.
ಇನ್ನು ಅವರ ಆರೋಗ್ಯದ ಕುರಿತು ಹೆದರಿಕೊಳ್ಳುವಂತಹ ಯಾವುದೇ ಸಮಸ್ಯೆಗಳಿಲ್ಲ. ಅವರು ಔಟ್ ಆಫ್ ಡೇಂಜರ್ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
ನನ್ನ ಆರೋಗ್ಯ ಸುಸ್ಥಿರವಾಗಿದೆ. ಸಕ್ಕರೆ ಅಂಶ ಕಡಿಮೆಯಾಗಿ ಸ್ವಲ್ಪ ಸುಸ್ತಾಗಿತ್ತು. ಈಗ ಆರಾಮಾಗಿದ್ದೇನೆ. ಎಕೊ, ಇಸಿಜಿ ಸೇರಿದಂತೆ ಎಲ್ಲಾ ಪ್ಯಾರಾಮಿಟರ್ ಗಳು ಸಹಜವಾಗಿವೆ. ಸದೃಢ ಆರೋಗ್ಯಕ್ಕಾಗಿ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದಗಳು. pic.twitter.com/7nJVdwY7K3
— Sadananda Gowda (@DVSadanandGowda) January 3, 2021
ಇದರ ಜೊತೆಗೆ ಸದಾನಂದಗೌಡರ ಟ್ವಿಟರ್ ಖಾತೆಯಿಂದ ಟ್ವೀಟ್ ಹೊರಬಿದ್ದಿದ್ದು. '' ನನ್ನ ಆರೋಗ್ಯ ಸ್ಥಿರವಾಗಿದೆ. ಸಕ್ಕರೆ ಅಂಶ ಕಡಿಮೆಯಾಗಿ ಸ್ವಲ್ಪ ಸುಸ್ತಾಗಿತ್ತು. ಈಗ ಆರಾಮಾಗಿದ್ದೇನೆ. ಎಕೊ, ಇಸಿಜಿ ಸೇರಿದಂತೆ ಎಲ್ಲಾ ಪ್ಯಾರಾಮೀಟರ್ಗಳು ಸಹಜವಾಗಿವೆ. ಸದೃಢ ಆರೋಗ್ಯಕ್ಕಾಗಿ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದಗಳು'' ಎಂದು ಸದಾನಂದಗೌಡ ಟ್ವೀಟ್ ಮಾಡಿದ್ದಾರೆ.