₹79,000 ಕೋಟಿ ಶಸ್ತ್ರಾಸ್ತ್ರಗಳ ಖರೀದಿಗೆ ಒಪ್ಪಿಗೆ: ಭಾರತೀಯ ಸೇನೆ ಮತ್ತಷ್ಟು ಬಲಿಷ್ಟ: BJP Karnataka
ಬೆಂಗಳೂರು, ಅಕ್ಟೋಬರ್ 24: ಭಾರತೀಯ ಮೂರೂ ರಕ್ಷಣಾ ಪಡೆಗಳ ಯುದ್ಧ ಸನ್ನದ್ಧತೆಯ ಸಾಮರ್ಥ್ಯವನ್ನು ಹೆಚ್ಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಮುಂದಾಗಿದೆ. ಭೂಸೇನೆ, ನೌಕಾಸೇನೆ ಮತ್ತು ವಾಯುಸೇನೆಗಳಿಗಾಗಿ, ಒಟ್ಟು 79,000 ಕೋಟಿ ರೂಪಾಯಿ ಮೌಲ್ಯದ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಖರೀದಿಸಲು ಅನುಮತಿ ನೀಡಿದೆ. ಈ ಮೂಲಕ ವಿದೇಶಿ ರಾಷ್ಟ್ರಗಳ ಮುಂದೆ ಭಾರತ ಮತ್ತಷ್ಟು ಬಲಿಷ್ಟವಾಗಿದೆ.
ಭಾರತೀಯ ಸೇನೆಗೆ ಕೇಂದ್ರ ಸರ್ಕಾರ ಒದಗಿಸುತ್ತಿರುವ ಶಸ್ತ್ರಾಸ್ತ್ರಗಳ ಕುರಿತು ಕರ್ನಾಟಕ ಬಿಜೆಪಿ ಎಕ್ಸ್ ಪೋಸ್ಟ್ ಮಾಡಿದೆ. ಸೇನಾ
ವಸ್ತು ನಿರ್ವಹಣಾ ಕ್ರೇನ್ಗಳು ಸೇರಿದಂತೆ ನಾಗ್ ಕ್ಷಿಪಣಿ ವ್ಯವಸ್ಥೆ (ಟ್ರ್ಯಾಕ್ಡ್) Mk-II (NAMIS), ನೆಲ ಆಧಾರಿತ ಮೊಬೈಲ್ ELINT ವ್ಯವಸ್ಥೆ (GBMES), ಮತ್ತು ಹೈ ಮೊಬಿಲಿಟಿ ವಾಹನಗಳು (HMV ಗಳು) ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಅದರ ಒಟ್ಟು ವೆಚ್ಚ 79,000 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಭಾರತೀಯ ನೌಕಾಪಡೆಗೆ ಲ್ಯಾಂಡಿಂಗ್ ಪ್ಲಾಟ್ಫಾರ್ಮ್ ಡಾಕ್ಸ್ (LPD ಗಳು) 30 ಎಂಎಂ ನೇವಲ್ ಸರ್ಫೇಸ್ ಗನ್ಗಳು (NSG ಗಳು), ಅಡ್ವಾನ್ಸ್ಡ್ ಲೈಟ್ ವೇಟ್ ಟಾರ್ಪಿಡೊಗಳು (ALWT ಗಳು), ಎಲೆಕ್ಟ್ರೋ-ಆಪ್ಟಿಕಲ್ ಇನ್ಫ್ರಾರೆಡ್ ಸರ್ಚ್ ಮತ್ತು ಟ್ರ್ಯಾಕ್ ಸಿಸ್ಟಮ್ಗಳು ಮತ್ತು 76ಎಂಎಂ ಸೂಪರ್ ರ್ಯಾಪಿಡ್ ಗನ್ ಮೌಂಟ್ಗಾಗಿ ಸ್ಮಾರ್ಟ್ ಮದ್ದುಗುಂಡುಗಳ ಖರೀದಿಯನ್ನು ಅನುಮೋದಿಸಲಾಗಿದೆ. ಎಲ್ಪಿಡಿಗಳ ಖರೀದಿಯು ಭಾರತೀಯ ನೌಕಾಪಡೆಯು ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆಯೊಂದಿಗೆ ಉಭಯಚರ ಕಾರ್ಯಾಚರಣೆಗಳನ್ನು ನಡೆಸಲು ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದೆ.
ಲ್ಯಾಂಡಿಂಗ್ ಪ್ಲಾಟ್ಫಾರ್ಮ್ ಡಾಕ್ಗಳು ಸೇನೆ ಮತ್ತು ವಾಯುಪಡೆಯೊಂದಿಗೆ ಜಂಟಿ ಉಭಯಚರ ದಾಳಿ ಕಾರ್ಯಾಚರಣೆಗಳನ್ನು ನಡೆಸುವಲ್ಲಿ ಭಾರತೀಯ ನೌಕಾಪಡೆಗೆ ತುಂಬಾ ಉಪಯುಕ್ತವಾಗುವ ಸಾಧನ ಖರೀದಿ ಆಗಲಿವೆ. ಶಾಂತಿಪಾಲನಾ ಕಾರ್ಯಾಚರಣೆಗಳು, ಮಾನವೀಯ ನೆರವು ಮತ್ತು ವಿಪತ್ತು ಪರಿಹಾರಕ್ಕಾಗಿಯೂ ನಿಯೋಜಿಸಬಹುದಾಗಿದೆ.
ಈ ಮೂಲಕ ಭಾರತೀಯ ಮೂರು ಸೇನೆಗಳು ಆಧುನಿಕರಣಗೊಳ್ಳುತ್ತಿದೆ. ಶಸ್ತ್ರಾಸ್ತ್ರಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಪಾಕಿಸ್ತಾನ ವಿರುದ್ಧ ನಡೆದ ಯುದ್ಧದಲ್ಲಿ ಅನೇಕ ಶಸ್ತ್ರಾಸ್ತ್ರಗಳು ಬಳಕೆ ಆಗಿದ್ದವು. ಅದರ ಬೆನ್ನಲ್ಲೆ ಮತ್ತಷ್ಟು ಯುದ್ಧೋಪಕರಣಗಳ ಖರೀದಿ ಚರ್ಚೆ ನಡೆದಿತ್ತು.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications